Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಆಂಧ್ರ ಪ್ರದೇಶ, ಗೋವಾದಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

Rain Updates: ಭಾರತ ಹವಾಮಾನ ಇಲಾಖೆ (IMD) ಪೂರ್ವ ಮತ್ತು ಮಧ್ಯ ಭಾರತದಲ್ಲಿ ಮೇ 14ರವರೆಗೆ ಮತ್ತು ದಕ್ಷಿಣ ಭಾರತದಲ್ಲಿ ಮೇ 16ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather Today: ಆಂಧ್ರ ಪ್ರದೇಶ, ಗೋವಾದಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆ
Follow us
ಸುಷ್ಮಾ ಚಕ್ರೆ
|

Updated on:May 12, 2024 | 9:50 PM

ನವದೆಹಲಿ: ಇನ್ನೂ 1 ವಾರ ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ಗಂಟೆಗಳಲ್ಲಿ ಉತ್ತರಾಖಂಡ, ತಮಿಳುನಾಡು ಮತ್ತು ರಾಜಸ್ಥಾನದಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Rain Updates) ಸಾಧ್ಯತೆಯಿದೆ ಎಂದು IMD ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡಿದೆ. ಗೋವಾದಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗೋವಾ ಹಾಗೂ ಆಂಧ್ರ ಪ್ರದೇಶದಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇ 13 ಮತ್ತು 14ರಂದು ಭಾರೀ ಮಳೆಯಾಗಲಿದೆ. ಹರಿಯಾಣ-ಚಂಡೀಗಢ-ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಇನ್ನೆರಡು ದಿನ ಮಳೆ, ಗುಡುಗು ಸಹಿತ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನ ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಮುಂದಿನ 4 ದಿನಗಳ ಕಾಲ ರಾಜಸ್ಥಾನದಲ್ಲಿ ಮಳೆಯ ಹವಾಮಾನ ಉಂಟಾಗುವ ನಿರೀಕ್ಷೆಯಿದೆ. ಆಂಧ್ರಪ್ರದೇಶದ ಕರಾವಳಿ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ ಮತ್ತು ಕರ್ನಾಟಕದಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲವು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಮೇ 15ರವರೆಗೆ ಸಾಕಷ್ಟು ವ್ಯಾಪಕವಾದ ಮಳೆ, ಗುಡುಗು, ಮಿಂಚು ಉಂಟಾಗಲಿದೆ, ಮೇ 16ರಿಂದ 18ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಮೇ 13ರಂದು ಚುನಾವಣಾ ದಿನದಂದು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರಾವಳಿ ಆಂಧ್ರ ಪ್ರದೇಶ (ಎನ್‌ಸಿಎಪಿ), ಯಾನಂ, ದಕ್ಷಿಣ ಕರಾವಳಿ ಆಂಧ್ರ ಪ್ರದೇಶ (ಎಸ್‌ಸಿಎಪಿ) ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಗಂಟೆಗೆ 50 ಕಿಮೀ (ಕಿಮೀ) ವೇಗದಲ್ಲಿ ಗುಡುಗು ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 14 ರಿಂದ ಇನ್ನೂ 3 ದಿನಗಳ ಕಾಲ ಇದೇ ರೀತಿಯ ಹವಾಮಾನ ಮುಂದುವರೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Sun, 12 May 24

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ