AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಮಳೆಯಿಂದ ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಣೆ; ಗುಜರಾತ್​, ದೆಹಲಿ, ತೆಲಂಗಾಣದಲ್ಲಿ ಭಾರೀ ಮಳೆ

Rajasthan Rain: ಗುಜರಾತ್‌ನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Weather Today: ಮಳೆಯಿಂದ ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಣೆ; ಗುಜರಾತ್​, ದೆಹಲಿ, ತೆಲಂಗಾಣದಲ್ಲಿ ಭಾರೀ ಮಳೆ
ಮಳೆ
TV9 Web
| Edited By: |

Updated on: Jul 21, 2022 | 9:21 AM

Share

ಜೈಪುರ: ಕಳೆದ 24 ಗಂಟೆಗಳಲ್ಲಿ ರಾಜಸ್ಥಾನದ ವಿವಿಧೆಡೆ 10 ಮಿ.ಮೀನಿಂದ 50 ಮಿ.ಮೀವರೆಗೆ ಮಳೆ ದಾಖಲಾಗಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು (IMD) ರಾಜಸ್ಥಾನದ ಹಲವು ಜಿಲ್ಲೆಗಳಿಗೆ ಇಂದು ಭಾರೀ ಮಳೆಯಾಗುವ (Heavy Rainfall) ಮುನ್ಸೂಚನೆ ನೀಡಿದೆ. ರಾಜಸ್ಥಾನದ (Rajasthan Rain) ಅಲ್ವಾರ್, ಭರತ್‌ಪುರ್, ದೌಸಾ, ಧೋಲ್‌ಪುರ್, ಕರೌಲಿ, ಬಿಕಾನೇರ್ ಮತ್ತು ಹನುಮಾನ್‌ಗಢದಲ್ಲಿ ಹಳದಿ ಅಲರ್ಟ್​(Yellow Alert) ಘೋಷಿಸಲಾಗಿದೆ.

ಬುಧವಾರ ಮೌಂಟ್ ಅಬು ತಹಸಿಲ್‌ನಲ್ಲಿ 150 ಮಿಮೀ, ಪುಷ್ಕರ್‌ನಲ್ಲಿ 100 ಮಿಮೀ, ಕೋಟಾ ಮತ್ತು ಧಂಬೋಲಾದಲ್ಲಿ ತಲಾ 90 ಮಿಮೀ, ಸರ್ವರ್ ಮತ್ತು ಉದಯಪುರವತಿಯಲ್ಲಿ ತಲಾ 80 ಮಿಮೀ, ರೈಲ್‌ಮಗ್ರಾ ಮತ್ತು ಖೇತ್ರಿಯಲ್ಲಿ ತಲಾ 70 ಮಿಮೀ, ಮತ್ತು ಚಿಕಾಲಿ, ಮಾವ್ಲಿ, ಅಸಿಂಡ್‌ನಲ್ಲಿ ತಲಾ 60 ಮಿಮೀ ಮಳೆ ದಾಖಲಾಗಿದೆ. ಜಿಯೋಲಾ ಮತ್ತು ರೆಯೋಡಾರ್ ಬುಧವಾರ ಬೆಳಿಗ್ಗೆ 8.30ರವರೆಗೆ ಹವಾಮಾನ ಇಲಾಖೆ ಪ್ರಕಾರ. ರಾಜ್ಯದ ಜೈಪುರ ಮತ್ತು ಭರತ್‌ಪುರ ವಿಭಾಗಗಳಲ್ಲಿ ಬುಧವಾರ ಹಗುರದಿಂದ ಸಾಧಾರಣ ಮಳೆ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಗುಜರಾತ್‌ನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ತಾಪಿ ಜಿಲ್ಲೆಯ ತಾಪಿ ನದಿಗೆ ಅಡ್ಡಲಾಗಿ ಕಟ್ಟಲಾದ ಉಕೈ ಅಣೆಕಟ್ಟಿನಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಯಿತು.

ತೆಲಂಗಾಣ ಕೂಡ ಮಳೆ ಮತ್ತು ನಂತರದ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಗೋದಾವರಿ ನದಿಯಲ್ಲಿ ನೀರಿನ ಮಟ್ಟ ವೇಗವಾಗಿ ಏರುತ್ತಿದ್ದು, ಗುರುವಾರ ಭದ್ರಾಚಲಂನಲ್ಲಿ ಅಪಾಯದ ಮಟ್ಟವನ್ನು ತಲುಪಿದೆ. ಇತ್ತೀಚಿನ ಅತಿವೃಷ್ಟಿ ಮತ್ತು ಅತಿವೃಷ್ಟಿಯಿಂದ ರಾಜ್ಯಕ್ಕೆ ಆಗಿರುವ ನಷ್ಟದ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿಯನ್ನು ಕಳುಹಿಸಿದೆ ಮತ್ತು ಪ್ರವಾಹ ಪರಿಹಾರಕ್ಕೆ ತಕ್ಷಣದ ಸಹಾಯಕ್ಕಾಗಿ 1,000 ಕೋಟಿ ರೂ. ಹಣಯನ್ನು ಕೋರಿದೆ.

ಇದನ್ನೂ ಓದಿ: ಮಳೆ ಹೊಡತಕ್ಕೆ ಚಿಕ್ಕಮಗಳೂರಿನ ಕೊಂಕಳಮನೆಯಲ್ಲಿ ಭೂಮಿ ಕುಸಿತ, ಮನೆಗಳಲ್ಲಿ ಬಿರುಕು

ಬುಧವಾರ ದೆಹಲಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದಂತೆ, ಮುಂದಿನ 3 ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ಆಕಾಶ, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಹವಾಮಾನ ಮುನ್ಸೂಚನಾ ಸಂಸ್ಥೆಯ ಪ್ರಕಾರ, ಇಂದು ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಾಗಲಿದೆ. ಜುಲೈ 23ರವರೆಗೆ ಉತ್ತರಾಖಂಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆ ಸುರಿಯಲಿದೆ. ಜುಲೈ 23ರಂದು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 22-24ರ ಅವಧಿಯಲ್ಲಿ ಒಡಿಶಾದಲ್ಲಿಯೂ ಸಹ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ