AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather: ಕರ್ನಾಟಕ, ಒಡಿಶಾ, ಗುಜರಾತ್, ಛತ್ತೀಸಗಡದಲ್ಲಿ ಭಾರೀ ಮಳೆ ನಿರೀಕ್ಷಿತ

ಮಹಾರಾಷ್ಟ್ರದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷ್ಣಾ ಮತ್ತು ಗೋದಾವರಿ ನದಿಗಳು ಸೊಕ್ಕಿ ಹರಿಯುತ್ತಿವೆ.

Weather: ಕರ್ನಾಟಕ, ಒಡಿಶಾ, ಗುಜರಾತ್, ಛತ್ತೀಸಗಡದಲ್ಲಿ ಭಾರೀ ಮಳೆ ನಿರೀಕ್ಷಿತ
ಪ್ರಾತಿನಿಧಿಕ ಚಿತ್ರImage Credit source: ಪಿಟಿಐ
TV9 Web
| Edited By: |

Updated on:Jul 17, 2022 | 8:43 AM

Share

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾನುವಾರ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ (Weather Department) ಹೇಳಿದೆ. ಛತ್ತೀಸಗಡದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ರಾಜಸ್ಥಾನ, ಮಧ್ಯ ಪ್ರದೇಶ, ಗುಜರಾತ್, ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ತೀವ್ರ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಭದ್ರೆ ಉಕ್ಕಿ ಹರಿಯುತ್ತಿದೆ. ಹೊಸಪೇಟೆಯ ತುಂಗಭದ್ರಾ ಜಲಾಶಯವು ಭರ್ತಿಯಾಗಿದ್ದು, ನದಿಗೆ ನೀರು ಹರಿಬಿಡಲಾಗುತ್ತಿದೆ. ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷ್ಣಾ ಮತ್ತು ಗೋದಾವರಿ ನದಿಗಳು ಸೊಕ್ಕಿ ಹರಿಯುತ್ತಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಹಲವು ಜಲಾಶಯಗಳು ಭರ್ತಿಯಾಗಿದ್ದು, ನದಿಗೆ ನೀರು ಹರಿಬಿಡಲಾಗುತ್ತಿದೆ.

ಗೋದಾವರಿ ನದಿಯು ಪ್ರವಾಹದ ಅಪಾಯಮಟ್ಟದ 3ನೇ ಹಂತವನ್ನು ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಹಲವೆಡೆ ದಾಟಿದೆ. ತೆಲಂಗಾಣದಲ್ಲಿ ಮಳೆಯಿಂದಾಗಿ ಈವರೆಗೆ 15ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು, ಸಾಕಷ್ಟು ಕೃಷಿಭೂಮಿ ಕೊಚ್ಚಿಹೋಗಿದೆ. ಹಲವು ಗ್ರಾಮ ಮತ್ತು ಪಟ್ಟಣಗಳಿಗೆ ನದಿಯ ನೀರು ನುಗ್ಗಿದೆ. ಗೋದಾವರಿ ಪ್ರವಾಹ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ತೀರ್ಥಕ್ಷೇತ್ರ ಭದ್ರಾಚಲಂ ಸೇತುವೆಯ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಈ ಸೇತುವೆಯು ಆಂಧ್ರಪ್ರದೇಶ, ಛತ್ತೀಸಗಡ ಮತ್ತು ಒಡಿಶಾಗೆ ಸಂಪರ್ಕ ಕಲ್ಪಿಸುತ್ತದೆ. ಭದ್ರಾಚಲಂನಲ್ಲಿ ಜನರು ಮನೆಗಳಿಂದ ಹೊರಗೆ ಬರದಂತೆ ನಿರ್ಬಂಧ ಹೇರಲಾಗಿದೆ. ತೆಲಂಗಾಣದ ವಿವಿಧೆಡೆ ಈವರೆಗೆ ಸುಮಾರು 25 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಪೋಲವರಂ ನೀರಾವರಿ ಯೋಜನೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಬಿಡುತ್ತಿರುವುದರಿಂದ ಆಂಧ್ರ ಪ್ರದೇಶದ ಹಲವು ಜಿಲ್ಲೆಗಳಲ್ಲಿಯೂ ಪ್ರವಾಹದ ಭೀತಿ ತಲೆದೋರಿದೆ. 1986ರ ನಂತರ ಇದೇ ಮೊದಲ ಬಾರಿಗೆ ಗೋದಾವರಿಯಲ್ಲಿ ಈ ಮಟ್ಟದ ಪ್ರವಾಹ ಕಾಣಿಸಿಕೊಂಡಿದ್ದು, 554 ಹಳ್ಳಿಗಳು ಅಪಾಯದಲ್ಲಿವೆ ಎಂದು ಆಂಧ್ರ ಪ್ರದೇಶದ ಕಂದಾಯ ಇಲಾಖೆ ಹೇಳಿದೆ.

ಚಿಕ್ಕೋಡಿ: ರೌದ್ರರೂಪ ತಾಳಿದ ಕೃಷ್ಣೆ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಕೃಷ್ಣಾ ಹಾಗೂ ಅದರ ಉಪನದಿಗಳಾದ ವೇದಗಂಗಾ, ದೂದಗಂಗಾ ನದಿ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ಕೃಷ್ಣಾ ನದಿಯಲ್ಲಿ 1,27,000 ಕ್ಯೂಸೆಕ್​ಗಿಂತಲೂ ಹೆಚ್ಚು ನೀರು ಹರಿಯುತ್ತಿದೆ. ಈ ನಡುವೆ ಹಲ್ಯಾಳ-ದರೂರ ಸೇತುವೆ ಸಮೀಪ ರೌದ್ರರೂಪ ತಾಳಿರುವ ಕೃಷ್ಣಾ ನದಿ ಪಾತ್ರಕ್ಕೀಳಿದು ಜನರು ಪೂಜೆ ಸಲ್ಲಿಸುತ್ತಿದ್ದಾರೆ. ನದಿ ಪಾತ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಸಿದ್ದರೂ ಜನರು ತಮ್ಮ ವರ್ತನೆ ಬದಲಿಸಿಕೊಂಡಿಲ್ಲ. ಹಲವೆಡೆ ನದಿ ಪಾತ್ರದಲ್ಲಿ ಮೀನು ಹಿಡಿಯುವ ದುಸ್ಸಾಹಸವೂ ಮುಂದುವರಿದಿದೆ.

Published On - 8:40 am, Sun, 17 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ