AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ; ಮದುವೆ ದಿಬ್ಬಣದ ಕಾರಿಗೆ ಹೊತ್ತಿಕೊಂಡ ಬೆಂಕಿ

ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಮದುವೆ ದಿಬ್ಬಣದ ಮೆರವಣಿಗೆ ವೇಳೆ ಕಾರಿನ ಸನ್​ರೂಫ್ ಮೇಲಿಂದಲೇ ಪಟಾಕಿಗಳನ್ನು ಸಿಡಿಸಲಾರಂಭಿಸಿದ್ದಾರೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ; ಮದುವೆ ದಿಬ್ಬಣದ ಕಾರಿಗೆ ಹೊತ್ತಿಕೊಂಡ ಬೆಂಕಿ
ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ
ಸುಷ್ಮಾ ಚಕ್ರೆ
|

Updated on: Nov 28, 2024 | 6:17 PM

Share

ನೊಯ್ಡಾ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವ್ಯಕ್ತಿಯೊಬ್ಬ ಕಾರಿನ ಸನ್‌ರೂಫ್‌ನಿಂದ ಪಟಾಕಿ ಸಿಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವ್ಯಕ್ತಿಯೋರ್ವ ಅಜಾಗರೂಕತೆಯಿಂದ ಸನ್‌ರೂಫ್ ಮೂಲಕ ಪಟಾಕಿ ಸಿಡಿಸಿದ ಕಾರಣ ಕಾರಿಗೆ ಬೆಂಕಿ ತಗುಲಿದೆ.

ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಂಡೇವಾಡ ಗ್ರಾಮದಲ್ಲಿ ನವೆಂಬರ್ 22ರಂದು ರಾತ್ರಿ ವರನ ಮದುವೆ ಮೆರವಣಿಗೆ ಡೆಹ್ರಾಡೂನ್‌ಗೆ ಹೊರಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಮದುವೆಯ ಬೆಂಗಾವಲು ಪಡೆಯ ಭಾಗವಾಗಿದ್ದ ಅಲಂಕೃತ ಖಾಸಗಿ ವಾಹನದ ಸನ್‌ರೂಫ್ ಮೂಲಕ ವ್ಯಕ್ತಿ ಪಟಾಕಿಗಳನ್ನು ಹೊಡೆಯುವುದನ್ನು ಕಾಣಬಹುದು. ಆದರೆ ಕೂಡಲೇ ಪಟಾಕಿಗಳಿಂದ ಬೆಂಕಿ ಕಿಡಿಗಳು ಗಾಳಿಯಲ್ಲಿ ಹಾರಿದ ನಂತರ ಕಾರಿನಲ್ಲಿ ಜ್ವಾಲೆ ಉಂಟಾಯಿತು.

ಇದನ್ನೂ ಓದಿ: ಚಳಿಗಾಲ ಹಾಗೂ ದೀಪಾವಳಿ ಪಟಾಕಿ ಎಫೆಕ್ಟ್: ಬೆಂಗಳೂರಿನಲ್ಲಿ ವೈರಲ್ ಸೋಂಕು ಏರಿಕೆ!

ಮಾಧ್ಯಮ ವರದಿಗಳ ಪ್ರಕಾರ, ಕಾರಿನೊಳಗೆ ಪಟಾಕಿ ಪೆಟ್ಟಿಗೆಗಳಿದ್ದವು. ಸನ್​ರೂಫ್ ಮೂಲಕ ಪಟಾಕಿ ಸಿಡಿಸಿದಾಗ ಕಾರಿನೊಳಗೆ ಕಿಡಿಗಳು ತಗುಲಿದ ನಂತರ ಬೆಂಕಿ ಹೊತ್ತಿಕೊಂಡಿದೆ. ಹೆಚ್ಚಿನ ಸ್ಥಳೀಯ ನಿವಾಸಿಗಳು ಸುರಕ್ಷತೆಗಾಗಿ ಓಡಿಹೋದರು. ಆದರೆ ಅವರಲ್ಲಿ ಒಬ್ಬರು ವ್ಯಕ್ತಿಗೆ ಸಹಾಯ ಮಾಡಲು ಕಾರಿನ ಕಡೆಗೆ ಹೋದರು. ಆದರೆ, ಅವರು ಅಷ್ಟರಲ್ಲಾಗಲೇ ಸುರಕ್ಷಿತ ಸ್ಥಳಕ್ಕೆ ಧಾವಿಸಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಳ್ಳುವಷ್ಟರಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಲ್ಲಿ ಪಟಾಕಿ ಸಿಡಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ವರನ ಸಹೋದರ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬಳಿಕ ಪೊಲೀಸರು ಅದನ್ನು ವಶಪಡಿಸಿಕೊಂಡು ಆರೋಪಿಯ ನಿರ್ಲಕ್ಷ್ಯಕ್ಕೆ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ಕಳೆದ ತಿಂಗಳು ಚಂಡೀಗಢದಲ್ಲಿ ಖಾಸಗಿ ವಾಹನದ ಮೇಲ್ಛಾವಣಿಯಿಂದ ಪಟಾಕಿ ಸಿಡಿಸುವ ಸಂದರ್ಭ ಇದೇ ರೀತಿಯ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್