AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ; ಮದುವೆ ದಿಬ್ಬಣದ ಕಾರಿಗೆ ಹೊತ್ತಿಕೊಂಡ ಬೆಂಕಿ

ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಮದುವೆ ದಿಬ್ಬಣದ ಮೆರವಣಿಗೆ ವೇಳೆ ಕಾರಿನ ಸನ್​ರೂಫ್ ಮೇಲಿಂದಲೇ ಪಟಾಕಿಗಳನ್ನು ಸಿಡಿಸಲಾರಂಭಿಸಿದ್ದಾರೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ; ಮದುವೆ ದಿಬ್ಬಣದ ಕಾರಿಗೆ ಹೊತ್ತಿಕೊಂಡ ಬೆಂಕಿ
ಸನ್​ರೂಫ್ ಮೇಲಿಂದ ಪಟಾಕಿ ಸಿಡಿಸಿದ ಜನ
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 6:17 PM

ನೊಯ್ಡಾ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವ್ಯಕ್ತಿಯೊಬ್ಬ ಕಾರಿನ ಸನ್‌ರೂಫ್‌ನಿಂದ ಪಟಾಕಿ ಸಿಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವ್ಯಕ್ತಿಯೋರ್ವ ಅಜಾಗರೂಕತೆಯಿಂದ ಸನ್‌ರೂಫ್ ಮೂಲಕ ಪಟಾಕಿ ಸಿಡಿಸಿದ ಕಾರಣ ಕಾರಿಗೆ ಬೆಂಕಿ ತಗುಲಿದೆ.

ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಂಡೇವಾಡ ಗ್ರಾಮದಲ್ಲಿ ನವೆಂಬರ್ 22ರಂದು ರಾತ್ರಿ ವರನ ಮದುವೆ ಮೆರವಣಿಗೆ ಡೆಹ್ರಾಡೂನ್‌ಗೆ ಹೊರಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಮದುವೆಯ ಬೆಂಗಾವಲು ಪಡೆಯ ಭಾಗವಾಗಿದ್ದ ಅಲಂಕೃತ ಖಾಸಗಿ ವಾಹನದ ಸನ್‌ರೂಫ್ ಮೂಲಕ ವ್ಯಕ್ತಿ ಪಟಾಕಿಗಳನ್ನು ಹೊಡೆಯುವುದನ್ನು ಕಾಣಬಹುದು. ಆದರೆ ಕೂಡಲೇ ಪಟಾಕಿಗಳಿಂದ ಬೆಂಕಿ ಕಿಡಿಗಳು ಗಾಳಿಯಲ್ಲಿ ಹಾರಿದ ನಂತರ ಕಾರಿನಲ್ಲಿ ಜ್ವಾಲೆ ಉಂಟಾಯಿತು.

ಇದನ್ನೂ ಓದಿ: ಚಳಿಗಾಲ ಹಾಗೂ ದೀಪಾವಳಿ ಪಟಾಕಿ ಎಫೆಕ್ಟ್: ಬೆಂಗಳೂರಿನಲ್ಲಿ ವೈರಲ್ ಸೋಂಕು ಏರಿಕೆ!

ಮಾಧ್ಯಮ ವರದಿಗಳ ಪ್ರಕಾರ, ಕಾರಿನೊಳಗೆ ಪಟಾಕಿ ಪೆಟ್ಟಿಗೆಗಳಿದ್ದವು. ಸನ್​ರೂಫ್ ಮೂಲಕ ಪಟಾಕಿ ಸಿಡಿಸಿದಾಗ ಕಾರಿನೊಳಗೆ ಕಿಡಿಗಳು ತಗುಲಿದ ನಂತರ ಬೆಂಕಿ ಹೊತ್ತಿಕೊಂಡಿದೆ. ಹೆಚ್ಚಿನ ಸ್ಥಳೀಯ ನಿವಾಸಿಗಳು ಸುರಕ್ಷತೆಗಾಗಿ ಓಡಿಹೋದರು. ಆದರೆ ಅವರಲ್ಲಿ ಒಬ್ಬರು ವ್ಯಕ್ತಿಗೆ ಸಹಾಯ ಮಾಡಲು ಕಾರಿನ ಕಡೆಗೆ ಹೋದರು. ಆದರೆ, ಅವರು ಅಷ್ಟರಲ್ಲಾಗಲೇ ಸುರಕ್ಷಿತ ಸ್ಥಳಕ್ಕೆ ಧಾವಿಸಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಳ್ಳುವಷ್ಟರಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಲ್ಲಿ ಪಟಾಕಿ ಸಿಡಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ವರನ ಸಹೋದರ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬಳಿಕ ಪೊಲೀಸರು ಅದನ್ನು ವಶಪಡಿಸಿಕೊಂಡು ಆರೋಪಿಯ ನಿರ್ಲಕ್ಷ್ಯಕ್ಕೆ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ಕಳೆದ ತಿಂಗಳು ಚಂಡೀಗಢದಲ್ಲಿ ಖಾಸಗಿ ವಾಹನದ ಮೇಲ್ಛಾವಣಿಯಿಂದ ಪಟಾಕಿ ಸಿಡಿಸುವ ಸಂದರ್ಭ ಇದೇ ರೀತಿಯ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್