AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಅಂದು ಮನೆಯಲ್ಲಿ ಎರಡೆರಡು ಮದುವೆ, ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ ಹಿಂದಿರುಗಬೇಕಾಯಿತು.

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?
ಮದುವೆ Image Credit source: Avira Diamonds
ನಯನಾ ರಾಜೀವ್
|

Updated on: Apr 06, 2026 | 1:01 PM

Share

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ ಹಿಂದಿರುಗಬೇಕಾಯಿತು.

ಮೊರಾದಾಬಾದ್‌ನ ಸುರ್ಜನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ, ಶನಿವಾರ ಒಂದೇ ಮನೆಯಿಂದ ಎರಡು ವಿವಾಹ ಮೆರವಣಿಗೆಗಳು ಹೊರಡಬೇಕಿತ್ತು. ಒಬ್ಬ ಮಗಳನ್ನು ಸಂತಸದಿಂದ ಬೀಳ್ಕೊಟ್ಟರು ಆದರೆ ಮತ್ತೊಬ್ಬ ಮಗಳ ಸರದಿ ಬಂದಾಗ, ತಂದೆ ಮಗಳನ್ನು ಕಳುಹಿಸುವುದಿಲ್ಲ ಎಂದಾಗ ಗೊಂದಲ ಸೃಷ್ಟಿಯಾಗಿತ್ತು.

ಎಷ್ಟು ಮನವೊಲಿಸಿದರೂ ಕೂಡ, ತಂದೆಯ ನಿರ್ಧಾರ ಬದಲಾಗಲಿಲ್ಲ.ಈ ವಿಚಾರ ಪಂಚಾಯಿತಿವರೆಗೂ ಹೋಯಿತು. ವಧುವಿನ ಕುಟುಂಬವು ವರ ಇನ್ನೊಬ್ಬ ಮಹಿಳೆಯೊಂದಿಗೆ ವಿವಾಹ ಸ್ಥಳದಲ್ಲಿ ಅಲೆದಾಡುತ್ತಿರುವುದನ್ನು ಗಮನಿಸಿದ್ದರು. ಯುವತಿಯ ಬಗ್ಗೆ ವರನನ್ನು ಪ್ರಶ್ನಿಸಿದಾಗ, ಆತ ತೃಪ್ತಿದಾಯಕ ಉತ್ತರವನ್ನು ನೀಡಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ: ಫುಲ್​​ ಹೈಡ್ರಾಮಾ

ಪರಿಸ್ಥಿತಿ ಬೇಗನೆ ಉಲ್ಬಣಗೊಂಡಿತು ಮತ್ತು ವಧುವಿನ ಕುಟುಂಬವು ಮದುವೆಯನ್ನು ರದ್ದುಗೊಳಿಸಿತು. ಈ ಘಟನೆ ಸಾಮಾಜಿಕ ಮಾಧ್ಯಮ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಚರ್ಚೆಯ ವಿಷಯವಾಗಿದೆ. ತಂದೆಯ ನಿರ್ಧಾರವು ಕೆಲವರನ್ನು ಆಘಾತಗೊಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ