AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿಹಾರ್​​​​ ಕ್ಲಬ್​​​ಗೆ ಸ್ವಾಗತ ಕೇಜ್ರಿವಾಲ್ ಜೀ’, ಇಂದಿನಿಂದ ನಿಮ್ಮ ಎಲ್ಲ ನಾಟಕ ಬಂದ್ ಎಂದು ಪತ್ರ ಬರೆದ ಸುಕೇಶ್

ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್​​​​ ಅವರಿಗೆ 200 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ತಿಹಾರ್​​ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು ಪತ್ರ ಬರೆದಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಅರವಿಂದ್​​​ ಕೇಜ್ರಿವಾಲ್​​ ಅವರಿಗೂ ಸುಕೇಶ್ ಚಂದ್ರಶೇಖರ್​ಗೂ ಏನು ಸಂಬಂಧ ಎಂಬ ಅನುಮಾನಗಳು ಹುಟುಕೊಂಡಿದೆ. ಜತೆಗೆ ಈ ಪತ್ರದಲ್ಲಿ ಕೇಜ್ರಿವಾಲ್​​ ಬಗ್ಗೆ ಏನು ಬರೆದಿದ್ದಾರೆ ಎಂಬುದು ಇಲ್ಲಿದೆ.

'ತಿಹಾರ್​​​​ ಕ್ಲಬ್​​​ಗೆ ಸ್ವಾಗತ ಕೇಜ್ರಿವಾಲ್ ಜೀ', ಇಂದಿನಿಂದ ನಿಮ್ಮ ಎಲ್ಲ ನಾಟಕ ಬಂದ್ ಎಂದು ಪತ್ರ ಬರೆದ ಸುಕೇಶ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 23, 2024 | 1:57 PM

Share

ದೆಹಲಿ, ಮಾ.23: ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ 6 ದಿನಗಳ ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ (Arvind Kejriwal)​​​​ ಅವರಿಗೆ 200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಅವರು ಪತ್ರ ಬರೆದಿದ್ದಾರೆ. ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಗೆಳೆಯ ಎಂದು ಗುರುತಿಸಿಕೊಂಡಿರುವ ಸುಕೇಶ್ ಇದೀಗ ಇಡಿ ಕಸ್ಟಡಿಯಲ್ಲಿರುವ ಕೇಜ್ರಿವಾಲ್​​​​ ಅವರಿಗೆ ತಿಹಾರ್​​ ಕ್ಲಬ್​​​​ಗೆ ಸ್ವಾಗತ ಎಂದು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್​​ಗೆ ಐದು ಪುಟಗಳ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

ದೆಹಲಿ ಅಂಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ (ಮಾ.21) ಯಂದು ಕೇಜ್ರಿವಾಲ್​​ ಅವರನ್ನು ಬಂಧಿಸಲಾಗಿತ್ತು. ನಂತರ ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ನಮ್ಮ ಕಸ್ಟಡಿಗೆ ನೀಡಬೇಕು ಎಂದು ಇಡಿ ಹೇಳಿತ್ತು. ಇದಕ್ಕೆ ಸಮ್ಮತಿಸಿದ ಕೋರ್ಟ್​ ಇಡಿಗೆ ಅವಕಾಶ ನೀಡಿದೆ. ಇದರ ನಡುವೆ ಸುಕೇಶ್ ಚಂದ್ರಶೇಖರ್ ಅವರ ಪತ್ರ ಭಾರೀ ಸದ್ದು ಮಾಡುತ್ತಿದೆ.

ಸುಕೇಶ್ ಚಂದ್ರಶೇಖರ್ ಬರೆದಿರುವ ಪತ್ರದಲ್ಲಿ ಅರವಿಂದ್​​ ಕೇಜ್ರಿವಾಲ್ ಕಳ್ಳ ಎಂದು ಹೇಳಿದ್ದಾರೆ. ಯಾವಾಗಲೂ ಸತ್ಯ ಗೆಲ್ಲುತ್ತದೆ. ಇದು ಹೊಸ ಭಾರತದ ಶಕ್ತಿ, ಕಾನೂನಿನ ಮುಂದೆ ಯಾರು ಮೇಲಲ್ಲ, ಎಂಬುದಕ್ಕೆ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ. ಅವರ ಪತ್ರ ಹೀಗಿತ್ತು, ” ನನ್ನ ಪ್ರೀತಿಯ ಅರವಿಂದ್​​ ಕೇಜ್ರಿವಾಲ್​​​ ಜೀ, ತಿಹಾರ್​​​​ ಕ್ಲಬ್​​​​ಗೆ ಬಾಸ್​​ ಆಗಿರುವ ನಿಮ್ಮನ್ನು ಸ್ವಾಗತಿಸಲು ಒಂದು ಉತ್ತಮ ಅವಕಾಶವನ್ನು ನೀಡಿದ್ದೀರಾ, ಇಂದಿನಿಂದ ನಿಮ್ಮ ಎಲ್ಲ ನಾಟಕಗಳು ಅಂತ್ಯವಾಗಲಿದೆ. ಮುಂದಿನ ವಾರ ಮಾ.25ಕ್ಕೆ ನನ್ನ ಜನ್ಮದಿನ, ಆ ಸಂಭ್ರಮವನ್ನು ನೀವು ಹೆಚ್ಚಿಸಿದ್ದೀರಾ, ಏಕೆಂದರೆ ನನ್ನ ಜನ್ಮದಿನದಂದು ತಿಹಾರ್​​​ಗೆ ಬಂದಿದ್ದೀರಾ, ಅದು ನನಗೆ ಖುಷಿ, ನನ್ನ ಸಂಭ್ರಮ ಡಬಲ್​​​ ಆಗಿದೆ.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಮಾರ್ಚ್ 28ರವರೆಗೆ ಇಡಿ ಕಸ್ಟಡಿಗೆ

ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​​ ವಿರುದ್ಧ ಗುಡುಗಿದ ಸುಕೇಶ್ ಚಂದ್ರಶೇಖರ್, ತಿಹಾರ್​​​ ಕ್ಲಬ್​​​ ನಡೆಸಲು ಮೂವರು ಸಹೋದರರು ಬಂದಿದ್ದಾರೆ. ಮೊದಲನೇಯವರು ಬಿಗ್​​ಬಾಸ್​​​​​ ಅರವಿಂದ್​​​ ಕೇಜ್ರಿವಾಲ್​​​, ಎರಡನೇಯದ್ದು ಸಿಇಒ ಮನೀಶ್​​ ಸಿಸೋಡಿಯಾ ಮೂರನೇಯದ್ದು, ಸಿಇಒ ಸತ್ಯೇಂದರ್​ ಜೈನ್​​​ ಎಂದು ಲೇವಡಿ ಮಾಡಿದ್ದಾರೆ. ಕೇಜ್ರಿವಾಲ್​​ ಮುಂದಿನ ದಿನಗಳಲ್ಲಿ ನಿಮ್ಮ ಎಲ್ಲ ಅಕ್ರಮ ಹೊರಬರಲಿದೆ. ಈಗಾಗಲೇ ದೆಹಲಿ ಬಡವರಿಂದ 10 ರೀತಿಯ ಹಗರಣ ಮಾಡಿದ್ದೀರಾ, ಇನ್ನು 4 ನಿಮ್ಮ ಹಗರಣಕ್ಕೆ ನಾನೇ ಸಾಕ್ಷಿ, ಆದರೆ ನಾನು ಅದನ್ನು ಇಲ್ಲಿ ತಿಳಿಸುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Sat, 23 March 24

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ