ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ
ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಸಂಧಾನಕ್ಕೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಂಧಾನದ ಮಾತುಕತೆಯ ಮಧ್ಯದಲ್ಲಿ ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಇದ್ದಕ್ಕಿದ್ದಂತೆ ಬದಲಾಯಿಸಿ, ಕೊಟ್ಟ ಮಾತಿನಿಂದ ಹಿಂದೆ ಸರಿದರು ಎಂದು ಸಚಿವರು ಹೇಳಿದ್ದಾರೆ. ಇಂದು ರಾತ್ರಿಯಿಡೀ ಧರಣಿ ನಡೆಸುವುದಾಗಿ ಪಟ್ಟು ಹಿಡಿದಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವದೆಹಲಿ, ಜುಲೈ 21: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕೆಲವೇ ನಿಮಿಷಗಳಲ್ಲಿ ರಾಹುಲ್ ಗಾಂಧಿಯ ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದೆವು. ಆದರೆ, ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಬದಲಾಯಿಸಿದರು ಎಂದು ಜಿತೇಂದ್ರ ಸಿಂಗ್ ಆರೋಪ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಧರಣಿ ಕುಳಿತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಖಿಲೇಶ್ ಯಾದವ್ ಮುಂತಾದವರು ಒತ್ತಾಯಿಸಿದ್ದರು. ಈ ವೇಳೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಪ್ರಧಾನಿ ನಿವಾಸದ ಬಳಿ ನಡೆಯುತ್ತಿದ್ದ ಧರಣಿಯ ಸ್ಥಳಕ್ಕೆ ತೆರಳಿ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾರಣ ಮತ್ತು ಪ್ರತಿಭಟನೆಗೆ ಸೂಕ್ತ ಸ್ಥಳವಲ್ಲದ ಕಾರಣದಿಂದ ಧರಣಿಯನ್ನು ಕೊನೆಗೊಳಿಸುವಂತೆ ಅವರು ರಾಹುಲ್ ಗಾಂಧಿಯವರಲ್ಲಿ ವಿನಂತಿ ಮಾಡಿದರು.
#WATCH | Delhi: Union Minister Jitendra Singh engages in a conversation with Lok Sabha LoP Rahul Gandhi over Congress’s ongoing protest at Lok Kalyan Marg. pic.twitter.com/D929hAzh8Q
— ANI (@ANI) July 21, 2026
ಇದನ್ನೂ ಓದಿ:ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ
ಕೇಂದ್ರ ಸಚಿವರ ಆರೋಪವೇನು?:
ತಮ್ಮ ಹಾಗೂ ರಾಹುಲ್ ಗಾಂಧಿ ನಡುವಿನ ಮಾತುಕತೆಯ ವೇಳೆ ಏನಾಯಿತೆಂಬುದರ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
Rahul Gandhi’s goalpost-shifting stands exposed.
During the Congress protest over NEET, Union Minister Shri Jitendra Singh came to engage with the Leader of the Opposition and the protesters to break the deadlock. Rahul Gandhi initially said the protest would end if the… pic.twitter.com/OjjCqmo5L9
— BJP (@BJP4India) July 21, 2026
“ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಹಗರಣ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಕೊಂಡರೆ ನಾನು ತಕ್ಷಣವೇ ಧರಣಿ ಹಿಂಪಡೆಯುತ್ತೇನೆ ಎಂದು ಷರತ್ತು ವಿಧಿಸಿದರು. ಸರ್ಕಾರದ ಹಿರಿಯ ನಾಯಕರ ಅನುಮತಿ ಪಡೆದು, ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂಬ ಭರವಸೆಯನ್ನು ಅವರಿಗೆ ತಕ್ಷಣವೇ ನೀಡಲಾಯಿತು” ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
कुछ समय पहले, यह ज्ञात हुआ कि कांग्रेस पार्टी के राष्ट्रीय अध्यक्ष, श्री मल्लिकार्जुन खड़गे और उनके साथ अन्य वरिष्ठ नेता, जैसे कि श्री राहुल गांधी, श्रीमती प्रियंका गांधी इत्यादि अकस्मात ही अकबर रोड़ के समीप एक स्थान पर अपने समर्थकों के साथ धरने पर बैठ गयेहैं। सरकार ने इस वरिष्ठ…
— Dr Jitendra Singh (@DrJitendraSingh) July 21, 2026
“ರಾಹುಲ್ ಗಾಂಧಿಯ ಮೊದಲ ಷರತ್ತಿಗೆ ಸರ್ಕಾರದ ಒಪ್ಪಿಗೆಯನ್ನು ತಲುಪಿಸಿದ ತಕ್ಷಣವೇ ರಾಹುಲ್ ಗಾಂಧಿ ತಮ್ಮ ಬೇಡಿಕೆಯನ್ನು ಬದಲಾಯಿಸಿದರು. ‘ನಾನು ಕೇವಲ ಚರ್ಚೆಗೆ ಒಪ್ಪುವುದಿಲ್ಲ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಭರವಸೆಯೂ ಬೇಕು’ ಎಂದು ಹೊಸ ಬೇಡಿಕೆ ಮುಂದಿಟ್ಟರು. ಈಗ ನನಗೆ ಎರಡು ಬೇಡಿಕೆಗಳಿವೆ. ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು ಮತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು’ ಎಂದರು. ಆಗ ನಾನು ಆರಂಭದಲ್ಲಿ ಚರ್ಚೆಯೊಂದನ್ನೇ ಕೋರಿ ಈಗ ಇಷ್ಟೊಂದು ಬೇಗ ಮಾತು ಬದಲಾಯಿಸುವುದು ನಿಮ್ಮಂತಹ ಹಿರಿಯ ನಾಯಕರಿಗೆ ಶೋಭೆಯಲ್ಲ ಎಂದು ಹೇಳಿದೆ. ಅದಕ್ಕೆ ರಾಹುಲ್ ಗಾಂಧಿ ಅದು ನನ್ನ ಹಕ್ಕು ಎಂದರು” ಎಂದು ಜಿತೇಂದ್ರ ಸಿಂಗ್ ವಿವರಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
“ರಾಹುಲ್ ಗಾಂಧಿ ಅವರಂತಹ ಹಿರಿಯ ನಾಯಕ ಹಾಗೂ ವಿರೋಧ ಪಕ್ಷದ ನಾಯಕರು ಕೊಟ್ಟ ಮಾತಿನಿಂದ ಹಿಂಜರಿಯುವುದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವದ ಪ್ರತಿಯೊಂದು ನಿಯಮಕ್ಕೂ ವಿರುದ್ಧವಾಗಿದೆ. ನೀಟ್ ಮತ್ತು ಅದಕ್ಕೆ ಸಂಬಂಧಿಸಿದ ಚಳವಳಿಯ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಕಾಂಗ್ರೆಸ್ ಪಕ್ಷವು ಈ ಗಂಭೀರ ವಿಷಯದ ಕುರಿತು ನಿಯಮಾವಳಿಗಳ ಪ್ರಕಾರ ಅಧಿಕೃತ ಚರ್ಚೆಗಾಗಿ ಈವರೆಗೆ ಯಾವುದೇ ನೋಟಿಸ್ ನೀಡಿಲ್ಲ. ರಾಹುಲ್ ಗಾಂಧಿ ಅವರ ಈ ನಡವಳಿಕೆಯು ಪ್ರಜಾಪ್ರಭುತ್ವದ ತತ್ವಗಳಿಗೆ ಸೂಕ್ತವಾದದ್ದಲ್ಲ.” ಎಂದು ಜಿತೇಂದ್ರ ಸಿಂಗ್ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ:
ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದ ಸಮೀಪ ನಡೆಯುತ್ತಿದ್ದ ಧರಣಿ ಸ್ಥಳದಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಕಾಂಗ್ರೆಸ್ ಸಂಸದರು ಮತ್ತು ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಲವಂತವಾಗಿ ತೆರವುಗೊಳಿಸಿ ವಶಕ್ಕೆ ಪಡೆದರು. ನೀಟ್ ವಿವಾದ ಮತ್ತು ಇತರ ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಸಂಸತ್ ಮೆರವಣಿಗೆಯ ಮೇಲೆ ಪೊಲೀಸರು ಕ್ರಮ ಕೈಗೊಂಡ ಮರುದಿನವೇ ಈ ಘಟನೆ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




