AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ: ಬಿಜೆಪಿ-ಟಿಎಂಸಿ ಪಕ್ಷಗಳಲ್ಲಿನ ಆಂತರಿಕ ಬೆಳವಣಿಗೆಗಳು ಹೀಗಿವೆ

ಮೂಲತಃ ಮಾಡೆಲ್ ಆಗಿದ್ದ ಟಿಎಂಸಿ ಸಂಸದೆ ನುಸ್ರಜ್ ಜಹಾನ್ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ ನೆಟ್ಟಿಗರು, ಟಿಎಂಸಿ ಸಂಸದೆಯ ಕಾಲೆಳೆದಿದ್ದಾರೆ.

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ: ಬಿಜೆಪಿ-ಟಿಎಂಸಿ ಪಕ್ಷಗಳಲ್ಲಿನ ಆಂತರಿಕ ಬೆಳವಣಿಗೆಗಳು ಹೀಗಿವೆ
ಟಿಎಂಸಿ ಸಂಸದೆ ನುಸ್ರತ್ ಜಹಾನ್​ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
guruganesh bhat
|

Updated on:Jan 16, 2021 | 3:16 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಬಿರುಸಾಗುತ್ತ ಸಾಗಿದೆ. ಟಿಎಂಸಿಯಿಂದ ಬಿಜೆಪಿಗೆ, ಬಿಜೆಪಿಯಿಂದ ಟಿಎಂಸಿಗೆ ಪಕ್ಷಾಂತರವಾಗಲಿದ್ದಾರೆ ಎಂಬ ಸುದ್ದಿಗಳೇ ಪ್ರತಿನಿತ್ಯ ಹೊರಬರುತ್ತಿವೆ. ಪಕ್ಷಾಂತರವೇನಾದರೂ ಆಗಿದ್ದೇ ಆದಲ್ಲಿ, ಪಕ್ಷಕ್ಕೆ ಆಘಾತವಾಗುವುದೆಂಬುದನ್ನು ಅರಿತ ಟಿಎಂಸಿ ತನ್ನ ಸಂಸದ ಸತಾಬ್ದಿ ರಾಯ್​ರನ್ನು ಪಕ್ಷದಲ್ಲೇ ಇರಿಸಿಕೊಳ್ಳುವ ಯತ್ನಕ್ಕೆ ಕೈಹಾಕಿ ಬಹುತೇಕ ಸಫಲವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಯವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿರುವ ಸತಾಬ್ದಿ ರಾಯ್, ಪಕ್ಷ ತೊರೆಯುವುದಿಲ್ಲ ಎಂದು ಖಾತ್ರಿಪಡಿಸಿದ್ದಾರೆ.

ಟಿಎಂಸಿ ಸಂಸದೆ ನುಸ್ರಜ್ ಜಹಾನ್ ಹೊಸ ಫೋಟೋಶೂಟ್ ಮೂಲತಃ ಮಾಡೆಲ್ ಆಗಿದ್ದ ಟಿಎಂಸಿ ಸಂಸದೆ ನುಸ್ರಜ್ ಜಹಾನ್ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ ನೆಟ್ಟಿಗರು, ಟಿಎಂಸಿ ಸಂಸದೆಯ ಕಾಲೆಳೆದಿದ್ದಾರೆ. ‘ನೀವು ಸಂಸದೆಯಾಗಿದ್ದುಕೊಂಡು ಇಂತಹ ಫೋಟೋಶೂಟ್ ಮಾಡಿಸಬಾರದಿತ್ತು ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದರೂ, ಅವರ ಚಿತ್ರಗಳಿಗೆ ಪ್ರಶಂಸೆ ವ್ಯಕ್ತಪಡಿಸಿದವರ ಸಂಖ್ಯೆಯೂ ಕಡಿಮೆಯಿಲ್ಲ.

ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿರಲು ವಿಶೇಷ ತಂಡ ರಚಿಸಿದ ಟಿಎಂಸಿ ಜನವರಿ 30 ರಂದು ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳದ ಮತುವಾ ದಲಿತ ಜನಾಂಗ ವಾಸವಿರುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಮತುವಾ ಜನಾಂಗದ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ, ಇದೇ ಜನಾಂಗದ ಓರ್ವ ಸಂಸದ ಬಿಜೆಪಿಯಿಂದ ಆಯ್ಕೆಯಾಗಿದ್ದ. ಬಿಜೆಪಿ ಈ ಬಾರಿಯೂ ಮತುವಾ ಮತಗಳ ಮೇಲೆ ಕಣ್ಣಿಟ್ಟುರುವುದನ್ನು ಅರಿತ ಟಿಎಂಸಿ, ಬಿಜೆಪಿಗಿಂತ ಮೊದಲೇ ವಿಶೇಷ ತಂಡವೊಂದನ್ನು ಕಳಿಸಲು ನಿರ್ಧರಿಸಿದೆ. ಜನವರಿ 22 ರಂದು ಈ ಪ್ರದೇಶದಲ್ಲಿ ಪ್ರಚಾರ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ಸೇರಲಿ: ಅಧೀರ್ ಚೌಧರಿ ಆಹ್ವಾನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೊಲಿಸಲು ಮಮತಾ ಬ್ಯಾನರ್ಜಿ ಕಾಂಗ್ರೆಸ್ ಸೇರಲಿ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಆಹ್ವಾನ ನೀಡಿದ್ದಾರೆ. ದೇಶದಲ್ಲಿ ಬಿಜೆಪಿಯನ್ನು ಮಣಿಸಲು ಇತರ ಪಕ್ಷಗಳು ಒಗ್ಗೂಡಬೇಕಿದ್ದು, ಸಿಎಂ ಮಮತಾ ಬ್ಯಾನರ್ಜಿ ಟಿಎಂಸಿ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಬಿಜೆಪಿಯನ್ನು ಸೋಲಿಸಬಹುದು ಎಂದು ಅವರು ಹೇಳಿದ್ದಾರೆ.

ಒಟ್ಟಿನಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ದೇಶದ ಜನರ ಕುತೂಹಲದ ಕಣ್ಣುಗಳು ಪಶ್ಚಿಮ ಬಂಗಾಳದತ್ತ ಹರಿಯುತ್ತಲೇ ಇರುವುದು ಖಚಿತವಾಗಿದೆ.

ಸಂಸದೆ ನುಸ್ರತ್ ಜಹಾನ್ ಹೊಸ ಫೋಟೋಶೂಟ್​

2021 ವಿಧಾನಸಭೆ ಚುನಾವಣೆವರೆಗೆ ಪ್ರತಿ ತಿಂಗಳು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

Published On - 2:33 pm, Sat, 16 January 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್