Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: 7ನೇ ಹಂತದ ಚುನಾವಣೆ; ರಾಶ್‌ಬೆಹರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಬಿಜೆಪಿಯ ಮತಗಟ್ಟೆ ಏಜೆಂಟ್ ಬಂಧನ

West Bengal Polls: ನ್ಯೂ ಅಲಿಪೋರ್ ಪ್ರದೇಶದ ಮತದಾನ ಕೇಂದ್ರದೊಳಗೆ ಕೆಲವು ಮಹಿಳಾ ಮತದಾರರನ್ನು ಕಿರುಕುಳ ನೀಡಿದ ಆರೋಪದ ಮೇಲೆ ರಾಶ್‌ಬೆಹರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೆಫ್ಟಿನೆಂಟ್ ಜನರಲ್ ಸುಬ್ರತಾ ಸಾಹ ಅವರ ಏಜೆಂಟ್ ಮೋಹನ್ ರಾವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

West Bengal Assembly Elections 2021: 7ನೇ ಹಂತದ ಚುನಾವಣೆ; ರಾಶ್‌ಬೆಹರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಬಿಜೆಪಿಯ ಮತಗಟ್ಟೆ ಏಜೆಂಟ್ ಬಂಧನ
ಪಶ್ಚಿಮ ಬಂಗಾಳದಲ್ಲಿ ಮತದಾನ
Follow us
ರಶ್ಮಿ ಕಲ್ಲಕಟ್ಟ
|

Updated on:Apr 26, 2021 | 4:59 PM

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಏಳನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು ಸಂಜೆ 3.31ರ  ಹೊತ್ತಿಗೆ ಶೇ 67. 27 ಮತದಾನ ದಾಖಲಾಗಿದೆ. ಮಧ್ಯಾಹ್ನ 1.30ರ ಹೊತ್ತಿಗೆ ಶೇ 55.12 ಮತದಾನ ದಾಖಲಾಗಿತ್ತು. ಬೆಳಗ್ಗೆ7 ಗಂಟೆಗೆ ಮತದಾನ ಆರಂಭವಾಗಿದ್ದು 9.30ರ ಹೊತ್ತಿಗೆ ಶೇ17.47 ಮತದಾನವಾಗಿದೆ. ಬೆಳಗ್ಗೆ 11.30ರ ಹೊತ್ತಿಗೆ ಶೇ 37.72 ಮತದಾನ ದಾಖಲು ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಪಶ್ಚಿಮ ಬರ್ಧಮಾನ್, ದಕ್ಷಿಣ ದಿನಜ್​ಪುರ್, ಮಾಲ್ಡಾ ಮತ್ತು ಕೊಲ್ಕತ್ತಾ ಸೇರಿದಂತೆ 34 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು 284 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 86 ಲಕ್ಷಕ್ಕಿಂತಲೂ ಹೆಚ್ಚು ಮತದಾರರು ಈ ಕ್ಷೇತ್ರಗಳಲ್ಲಿದ್ದಾರೆ.

ಬಂಗಾಳದಿಂದ ಪೊಲೀಸ್ ಅಧಿಕಾರಿಗಳ ವರ್ಗ ಪಶ್ಚಿಮ ಬಂಗಾಳದಲ್ಲಿ ಏಳನೇ ಹಂತದ ಚುನಾವಣೆ ನಡೆಯುತ್ತಿದ್ದಂತೆ ಚುನಾವಣಾ ಆಯೋಗವು ಕೆಲವು ಪೊಲೀಸ್ ಅಧಿಕಾರಿಗಳನ್ನು ಬಂಗಾಳದಿಂದ ವರ್ಗಾವಣೆ ಮಾಡಿದೆ. ಆರ್ಥಿಕ ಅಪರಾಧಗಳ ಇಲಾಖೆಯ ನಿರ್ದೇಶನಾಲಯದ ಪೊಲೀಸ್ ಇನ್ಸ್ ಪೆಕ್ಟರ್ ಶಂತನು ಸಿನ್ಹಾ ಬಿಸ್ವಾಸ್ ಅವರನ್ನು ಕ್ರೈಂ ಇನ್ಸ್ ಪೆಕ್ಟರ್ ಆಗಿ ಡಿಐಡಿ ಜಲ್ಪೈಗುರಿ ವಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಅಂಚೆ ಮತಗಳಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಬಿಜೆಪಿ ಸಿನ್ಹಾ ಅವರ ಮೇಲೆ ಆರೋಪ ಹೊರಿಸಿತ್ತು.ಅ ಅಸಾನ್ಸಲ್- ದುರ್ಗಾಪುರ್ ಪೊಲೀಸ್ ಸಹಾಯಕ ಆಯುಕ್ತ ಶ್ರೀಮಂತ ಕುಮಾರ್ ಬಂದೋಪಾಧ್ಯಾಯ್ ಅವರನ್ನು ಬೊಲಾಪುರ್​ನ ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಶುಬೇಂದ್ರ ಕುಮಾರ್ ಅವರು ಬೊಲಾಪುರ್​ನಲ್ಲಿ ಪ್ರಸ್ತುತ ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿಯಾದ್ದು, ಕೊವಿಡ್ ರೋಗಕ್ಕೊಳಗಾಗಿದ್ದಾರೆ. ಕೃಷ್ಣನಗರ ಪೊಲೀಸ್ ಜಿಲ್ಲೆಯ ಕೃಷ್ಣಗಂಜ್‌ನ ಸರ್ಕಲ್ ಇನ್ಸ್‌ಪೆಕ್ಟರ್ ನಿಹಾರ್ ರಂಜನ್ ರಾಯ್ ಅವರನ್ನು ಮುರ್ಷಿದಾಬಾದ್ ಪೊಲೀಸ್ ಠಾಣೆಯ ಉಸ್ತುವಾರಿ ಹೊಸ ಇನ್ಸ್‌ಪೆಕ್ಟರ್ ಆಗಿ ನೇಮಕ ಮಾಡಲಾಗಿದೆ.

ಅಸನ್ಸೋಲ್ ಕ್ಷೇತ್ರದಲ್ಲಿ ಗಲಭೆ ಅಸನ್ಸೋಲ್ ಪ್ರದೇಶದಿಂದ ಕೆಲವು ಅಹಿತಕರ ಘಟನೆ ವರದಿಯಾಗಿವೆ. ಟಿಎಂಸಿ ಅಭ್ಯರ್ಥಿ ಸಯೋನಿ ಘೋಷ್ ಬಿಜೆಪಿ ಕಾರ್ಯಕರ್ತರು ತಮ್ಮ ಕ್ಷೇತ್ರದಲ್ಲಿ ಮತಗಟ್ಟೆಗಳ ನಿರ್ವಹಣೆಗೆ ತಡೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪೌಲ್ ಆಧಾರರಹಿತ ಎಂದಿದ್ದಾರೆ. ಘೋಷ್ ಪರಾಭವಗೊಳ್ಳುವ  ಭಯದಿಂದ  ಈ ರೀತಿ ಮಾಡುತ್ತಿದ್ದಾರೆ ಎಂದು ಪೌಲ್ ಹೇಳಿದ್ದಾರೆ.

ಜಮುರಿಯಾ ಕ್ಷೇತ್ರದಲ್ಲಿ, ಎಡಪಕ್ಷದ ಅಭ್ಯರ್ಥಿ ಆಯಿಷೆ ಘೋಷ್, ತಮ್ಮ ಪಕ್ಷದ ಏಜೆಂಟರನ್ನು ಟಿಎಂಸಿ ಕಾರ್ಯಕರ್ತರು ಬೂತ್‌ಗೆ ಪ್ರವೇಶಿಸುವುದನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದು ಇದನ್ನು ಟಿಎಂಸಿ ನಿರಾಕರಿಸಿದೆ.

ಬಿಜೆಪಿ ಅಭ್ಯರ್ಥಿಯ ಮತಗಟ್ಟೆ ಏಜೆಂಟ್ ಬಂಧನ ನಗರದ ನ್ಯೂ ಅಲಿಪೋರ್ ಪ್ರದೇಶದ ಮತದಾನ ಕೇಂದ್ರದೊಳಗೆ ಕೆಲವು ಮಹಿಳಾ ಮತದಾರರನ್ನು ಕಿರುಕುಳ ನೀಡಿದ ಆರೋಪದ ಮೇಲೆ ರಾಶ್‌ಬೆಹರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೆಫ್ಟಿನೆಂಟ್ ಜನರಲ್ ಸುಬ್ರತಾ ಸಾಹ ಅವರ ಏಜೆಂಟ್ ಮೋಹನ್ ರಾವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿದ್ಯಾ ಭಾರತಿ ಶಾಲೆಯೊಳಗೆ ತಮ್ಮ ಕೈಗಳನ್ನು ಹಿಡಿದು ಎಳೆಯಲು ಪ್ರಯತ್ನಿಸಿದರು ಎಂದು ಹಲವಾರು ಮಹಿಳಾ ಮತದಾರರು ದೂರು ನೀಡಿದ ಹಿನ್ನೆಲೆಯಲ್ಲಿ ಮೋಹನ್ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ರಾವ್ ಆರೋಪಗಳನ್ನು ನಿರಾಕರಿಸಿದ್ದು ಮತ್ತು ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ಟಿಎಂಸಿ ಕಾರ್ಯಕರ್ತರು ಈ ಪ್ರದೇಶದಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನಕ್ಕೆ ಅಡ್ಡಿಪಡಿಸುವ ಉದ್ದೇಶ ಇದು ಎಂದು ಸಾಹಾ ಆರೋಪಿಸಿದ್ದಾರೆ.

(West Bengal Assembly Election 2021 Phase 7 Voting BJP candidates agent detained for molesting women voters in Kolkata)

ಇದನ್ನೂ ಓದಿ: West Bengal Assembly Elections 2021: 7ನೇ ಹಂತದ ಚುನಾವಣೆಯಲ್ಲಿ ಬಿರುಸಿನ ಮತದಾನ, 11.30ರವರೆಗೆ ಶೇ 37.72 ಮತದಾನ ದಾಖಲು

Published On - 4:57 pm, Mon, 26 April 21

ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ