AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Narendra Modi in West Bengal: ನನ್ನ ಬಗ್ಗೆ ಏನೇನೋ ಹೇಳುತ್ತಾರೆ. ಕೆಲವೊಮ್ಮೆ ರಾವಣ, ಕೆಲವೊಮ್ಮೆ ಸೈತಾನ, ಗೂಂಡಾ ಎಂದೂ ಹೇಳುತ್ತಾರೆ ಎಂದ ಮೋದಿ, ದೀದಿ ಯಾಕೆ ಅಷ್ಟು ಸಿಟ್ಟಾಗಿದ್ದೀರಿ ಎಂದು ಮೋದಿ ಮಮತಾ ಬ್ಯಾನರ್ಜಿಯನ್ನು ಕೆಣಕಿದರು.

West Bengal Assembly Elections 2021: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಸಭೆಯಲ್ಲಿ ನರೇಂದ್ರ ಮೋದಿ
Follow us
TV9 Web
| Updated By: ganapathi bhat

Updated on:Apr 06, 2022 | 7:21 PM

ಕೋಲ್ಕತ್ತಾ: ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು. ಯಾವುದೇ ಭಯವಿಲ್ಲದೆ ಧೈರ್ಯವಾಗಿ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಇಂದು (ಮಾರ್ಚ್ 7) ಹೇಳಿದರು. ಕೆಟ್ಟ ಆಡಳಿತದ ವಿರುದ್ಧ ಮತ ಚಲಾಯಿಸಿ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ‘ನನ್ನ ವಿರೋಧಿಗಳು ನಾನು ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ. ನಾವು ಯಾರೊಂದಿಗೆ ಬೆಳೆದೆವೋ ಅವರು ನಮ್ಮ ಗೆಳೆಯರಾಗಿರುತ್ತಾರೆ. ನಾನು ಬಡತನದೊಂದಿಗೆ ಬೆಳೆದವನು. ಹಾಗಾಗಿ, ಬಡವರ ಕಷ್ಟ ನನಗೆ ಅರ್ಥವಾಗುತ್ತದೆ. ನಾನು ನನ್ನ ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ. ಮತ್ತು ಅದನ್ನು ಮುಂದುವರಿಸುತ್ತೇನೆ’ ಎಂದು ಮೋದಿ ತಿಳಿಸಿದರು.

ನನ್ನ ಬಗ್ಗೆ ಏನೇನೋ ಹೇಳುತ್ತಾರೆ. ಕೆಲವೊಮ್ಮೆ ರಾವಣ, ಕೆಲವೊಮ್ಮೆ ಸೈತಾನ, ಗೂಂಡಾ ಎಂದೂ ಹೇಳುತ್ತಾರೆ ಎಂದ ಮೋದಿ, ದೀದಿ ಯಾಕೆ ಅಷ್ಟು ಸಿಟ್ಟಾಗಿದ್ದೀರಿ ಎಂದು ಮಮತಾ ಬ್ಯಾನರ್ಜಿಯನ್ನು ಕೆಣಕಿದರು. ದೀದಿ ಬಗ್ಗೆ ನನಗೆ ಬಹುಕಾಲದಿಂದ ಗೊತ್ತು. ಅವರು ಎಡಪಕ್ಷಗಳ ವಿರುದ್ಧ ಧ್ವನಿ ಎತ್ತಿದವರಾಗಿ ಈಗ ಉಳಿದಿಲ್ಲ. ಬೇರೆಯವರ ಮಾತನ್ನು ತಾವು ಆಡುತ್ತಿದ್ದಾರೆ. ಬೇರೆಯವರ ನಿಯಂತ್ರಣಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್​ನವರು ಬಹಳ ಅನುಭವಿಗಳು. ಅವರು ಬಹು ಚೆನ್ನಾಗಿ ಆಟ ಆಡುತ್ತಾರೆ. ಭ್ರಷ್ಟಾಚಾರ ಮಾಡಿ ಬಂಗಾಳವನ್ನು ಲೂಟಿ ಮಾಡುತ್ತಾರೆ. ಅಂಫಾನ್​ಗೆ ಕಳುಹಿಸಿದ ಪರಿಹಾರ ಧನದಲ್ಲಿ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ನಡೆಸುವ ಬದಲು, ಜನರನ್ನು ಒಡೆಯುತ್ತಿದ್ದೀರಿ. ಧರ್ಮದ ಹೆಸರಲ್ಲಿ ಜನರನ್ನು ಬೇರ್ಪಡಿಸುತ್ತಿದ್ದೀರಿ ಎಂದು ಮೋದಿ ಟಿಎಂಸಿ ವಿರುದ್ಧ ಹರಿಹಾಯ್ದರು.

ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಇಂದು (ಮಾರ್ಚ್ 7) ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಬಾವುಟ ಹಾರಿಸಿ ಪಕ್ಷಕ್ಕೆ ಪಾದಾರ್ಪಣೆ ಮಾಡಿದರು. ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ ಮಿಥುನ್ ಚಕ್ರವರ್ತಿಯನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್​ವರ್ಗಿಯಾ ಉಪಸ್ಥಿತರಿದ್ದರು.

ಇದನ್ನೂ ಓದಿ: West Bengal Assembly Elections 2021: ದಿನದ 24 ಗಂಟೆಯೂ ಬಂಗಾಳದ ಅಭಿವೃದ್ಧಿಗೆ ಶ್ರಮಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

West Bengal Assembly Elelctions 2021: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೇರ್ಪಡೆ

Published On - 4:14 pm, Sun, 7 March 21

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ