Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಟಿಎಂಸಿ ಪಟ್ಟಿ ಬಿಡುಗಡೆ; ಮಹಿಳೆ, ಮುಸ್ಲಿಂ, ಯುವ ಮತ್ತು ಹಿಂದುಳಿದ ವರ್ಗಗಳಿಗೆ ಮಣೆ- ಮೈತ್ರಿಗೆ ಮೂರು!

West Bengal Assembly elections 2021: 294 ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಟಿಎಂಸಿ ಸ್ಪರ್ಧಿಸಲಿದ್ದು, ಮೂರು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. 50 ಮಹಿಳೆಯರು,   79 ಎಸ್‌ಸಿ, 17 ಎಸ್‌ಟಿ ಮತ್ತು 42 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸಿದೆ. 

West Bengal Elections 2021: ಟಿಎಂಸಿ ಪಟ್ಟಿ ಬಿಡುಗಡೆ; ಮಹಿಳೆ, ಮುಸ್ಲಿಂ, ಯುವ ಮತ್ತು ಹಿಂದುಳಿದ ವರ್ಗಗಳಿಗೆ ಮಣೆ- ಮೈತ್ರಿಗೆ ಮೂರು!
ಯಾರಿಗೆ ಟಿಕೆಟ್ ನೀಡಿದೆ ಟಿಎಂಸಿ?
Follow us
guruganesh bhat
|

Updated on:Mar 05, 2021 | 3:04 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಏರುವ ಉತ್ಸಾಹದಲ್ಲಿರುವ ತೃಣಮೂಲ ಕಾಂಗ್ರೆಸ್​ನ 291 ಅಭ್ಯರ್ಥಿಗಳ ಪಟ್ಟಿಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ನಂದಿಗ್ರಾಮ ಕ್ಷೇತ್ರದಿಂದ ಮಾತ್ರವೇ ದೀದಿ ಸ್ಪರ್ಧಿಸಲಿದ್ದು,  ಭವಾನಿಪುರ್‌ ಕ್ಷೇತ್ರದಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಊಹೆ ಸುಳ್ಳಾಗಿದೆ. 294 ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಟಿಎಂಸಿ ಸ್ಪರ್ಧಿಸಲಿದ್ದು, ಮೂರು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. 50 ಮಹಿಳೆಯರು,   79 ಎಸ್‌ಸಿ, 17 ಎಸ್‌ಟಿ ಮತ್ತು 42 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸಿದೆ. 

ಮಾರ್ಚ್ 9ರಂದು ಮಮತಾ ಬ್ಯಾನರ್ಜಿ ನಂದಿಗ್ರಾಮಕ್ಕೆ ತೆರಳಲಿದ್ದು,  ಮರುದಿನ ನಾಮಪತ್ರ ಸಲ್ಲಿಸಲಿದ್ದಾರೆ. ಜತೆಗೆ, ತಮಗೆ ಬೆಂಬಲ ವ್ಯಕ್ತಪಡಿಸಿದ ಆರ್​ಜೆಡಿಯ ತೇಜಸ್ವಿ ಯಾದವ್, ಆಮ್​ಆದ್ಮಿಯ ಅರವಿಂದ್ ಕೇಜ್ರೀವಾಲ್, ಶಿವಸೇನೆ ಪಕ್ಷಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅಭ್ಯರ್ಥಿಗಳು ಮಾರ್ಚ್ 9ರ ಒಳಗೆ ನಾಮಪತ್ರ ಸಲ್ಲಿಸಬೇಕಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವ ದಿನಾಂಕವನ್ನು ಇದುವರೆಗೂ ಸ್ಪಷ್ಟಪಡಿಸಿಲ್ಲ.

294 ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹೆಚ್ಚು ಕಟ್ಟುನಿಟ್ಟಾಗಿ ಚುನಾವಣೆ ನಡೆಸಬೇಕು ಎನ್ನುವ ಕಾರಣಕ್ಕೆ 8 ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ.

ಚುನಾವಣಾ ದಿನಾಂಕ ಘೋಷಣೆ ಮಾಡಿದ್ದ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್​ ಅರೋರಾ, ಎಲ್ಲಾ ಕಡೆಗಳಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡುತ್ತೇವೆ. ಈ ಮೂಲಕ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಇದಾದ ಮರುದಿನವೇ ಪಶ್ಚಿಮ ಬಂಗಾಳದ ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಐಪಿಎಸ್​ ಅಧಿಕಾರಿ ಜಗ್​ ಮೋಹನ್​ ಅವರನ್ನು ತರಲಾಗಿದೆ.

ಬಿಜೆಪಿ ನಿಯೋಗವು ಸಿಇಒ ಅರಿಜ್ ಅಫ್ತಾಬ್ ಅವರನ್ನು ಭೇಟಿಯಾಗಿ ಪಕ್ಷಪಾತ ಮಾಡುವ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕುವಂತೆ ಒತ್ತಾಯಿಸಿತ್ತು. ಇದಾದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿತ್ತು.

ಇದನ್ನೂ ಓದಿ: ದೀದಿಗೆ ಶಿವಸೇನಾ ಬೆಂಬಲ; ಮಮತಾ ಬ್ಯಾನರ್ಜಿಯನ್ನು ಬಂಗಾಳದ ಹುಲಿ ಎಂದ ಶಿವಸೇನಾ ಸಂಸದ

ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ

Published On - 3:00 pm, Fri, 5 March 21

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!