AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಅಧಿಕಾರ ವ್ಯಾಪ್ತಿಯನ್ನು 50 ಕಿಮೀಗೆ ಏರಿಸಿದ್ದರ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ಪಶ್ಚಿಮ ಬಂಗಾಳ ವಿಧಾನಸಭೆ

ಬಿಎಸ್​ಎಫ್​​​ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಿದ್ದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೇ ಈ ಆದೇಶವನ್ನು ವಾಪಸ್​ ಪಡೆಯಬೇಕು ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಆಗ್ರಹಿಸಿದ್ದಾರೆ.

ಬಿಎಸ್​ಎಫ್​ ಅಧಿಕಾರ ವ್ಯಾಪ್ತಿಯನ್ನು 50 ಕಿಮೀಗೆ ಏರಿಸಿದ್ದರ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ಪಶ್ಚಿಮ ಬಂಗಾಳ ವಿಧಾನಸಭೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 16, 2021 | 6:39 PM

Share

ಗಡಿ ಭದ್ರತಾ ಪಡೆ (BSF)ಯ ಆಡಳಿತ ವ್ಯಾಪ್ತಿಯನ್ನು ಅಂತಾರಾಷ್ಟ್ರೀಯ ಗಡಿಯಿಂದ 50 ಕಿಮೀ ದೂರಕ್ಕೆ ವಿಸ್ತರಿಸುವ ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ. ಇನ್ನು ಕೇಂದ್ರದ ಈ ಆದೇಶದ ವಿರುದ್ಧ ಪಂಜಾಬ್ ವಿಧಾನಸಭೆ ನವೆಂಬರ್​ 11ರಂದೇ ನಿರ್ಣಯ ಅಂಗೀಕಾರ ಮಾಡಿದೆ.  ರಾಜ್ಯದೊಳಗೆ ಬಿಎಸ್​ಎಫ್​ ಆಡಳಿತ ವ್ಯಾಪ್ತಿಯನ್ನು ಹೆಚ್ಚಿಸುವುದರಿಂದ ಆಯಾ ರಾಜ್ಯಗಳ ಪೊಲೀಸರಿಗೆ ಅವಮಾನ ಮಾಡಿದಂತೆ ಆಗುತ್ತದೆ ಎಂಬುದು ಪಶ್ಚಿಮ ಬಂಗಾಳ, ಪಂಜಾಬ್​​ಗಳ ವಾದ.

ಅಸ್ಸಾಂ, ಪಂಜಾಬ್​ ಮತ್ತು ಪಶ್ಚಿಮಬಂಗಾಳದಲ್ಲಿರುವ ಅಂತಾರಾಷ್ಟ್ರೀಯ ಗಡಿಯಿಂದ ರಾಜ್ಯದೊಳಗೆ 50 ಕಿಮೀ ದೂರದವರೆಗೆ ಬಿಎಸ್ಎಫ್​ ಯೋಧರ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಇದೇ ವರ್ಷ ಅಕ್ಟೋಬರ್​ನಲ್ಲಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಅದಕ್ಕೂ ಮೊದಲ ಕೇವಲ 15 ಕಿಮೀ ದೂರದವರೆಗೆ ಮಾತ್ರ ಅವರ ಕಾರ್ಯವ್ಯಾಪ್ತಿಯಿತ್ತು.  ಅಂದರೆ ಅಂತಾರಾಷ್ಟ್ರೀಯ ಗಡಿಯಿಂದ ರಾಜ್ಯದೊಳಗೆ 50 ಕಿಮೀ ದೂರದವರೆಗೂ ಬಿಎಸ್​ಎಫ್​ ಯೋಧರು ಶೋಧ ಕಾರ್ಯ ನಡೆಸಬಹುದು, ಅನುಮಾನಿತ ವ್ಯಕ್ತಿಗಳನ್ನು ಬಂಧಿಸಬಹುದು ಎಂದು ಹೇಳಲಾಗಿತ್ತು. ಆದರೆ ಪಂಜಾಬ್​ ವಿಧಾನಸಭೆ ಈಗಾಗಲೇ ಇದನ್ನು ವಿರೋಧಿಸಿದೆ.

ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರದ ವೇಳೆ ಮಾತನಾಡಿದ, ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ, ಬಿಎಸ್​ಎಫ್​​​ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಿದ್ದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೇ ಈ ಆದೇಶವನ್ನು ವಾಪಸ್​ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಜಂಗಲ್‌ಮಹಲ್‌ನಿಂದ ಕೇಂದ್ರ ಭದ್ರತಾ ಪಡೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸಿದಾಗ ಅದನ್ನು ರಾಜ್ಯ ಸರ್ಕಾರ ವಿರೋಧಿಸಿತು. ಆದರೆ ಇದೇ ರಾಜ್ಯ ಸರ್ಕಾರ ಬಿಎಸ್​ಎಫ್​ ಪಡೆಗಳ ಕಾರ್ಯವ್ಯಾಪ್ತಿ ವಿಸ್ತರಣೆಯನ್ನು ವಿರೋಧಿಸುತ್ತಿದೆ. ಬಿಎಸ್​ಎಫ್​ ಯೋಧರಿಗೆ 50 ಕಿಮೀ ವರೆಗೆ ಅಧಿಕಾರ ಕೊಟ್ಟರೆ, ರಾಜ್ಯ ಪೊಲೀಸರಿಗೆ ಮತ್ತು ಗಡಿಭದ್ರತಾ ಪಡೆ ಸಿಬ್ಬಂದಿಗೆ ಜಗಳವಾಗುತ್ತದೆ..ಅವರಲ್ಲೇ ಸಂಘರ್ಷ ಮೂಡುತ್ತದೆ ಎಂದು ರಾಜ್ಯ ಸರ್ಕಾರ ಹೇಳುತ್ತಿರುವುದರಲ್ಲಿ ಅರ್ಥವೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವ​ಕುಮಾರ್​ ಮನವಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!