AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಟಿಎಂಸಿ- ಬಿಜೆಪಿ ಶಾಸಕರ ಹೊಡೆದಾಟ; ಐವರ ಅಮಾನತು

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ಶಾಸಕರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸದನದಲ್ಲಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಶಾಸಕರು ಪರಸ್ಪರರನ್ನು ಒದ್ದು, ಗುದ್ದಾಡಿಕೊಂಡ ಘಟನೆಯೂ ನಡೆಯಿತು.

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಟಿಎಂಸಿ- ಬಿಜೆಪಿ ಶಾಸಕರ ಹೊಡೆದಾಟ; ಐವರ ಅಮಾನತು
ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಗಲಾಟೆ
TV9 Web
| Updated By: ಸುಷ್ಮಾ ಚಕ್ರೆ|

Updated on:Mar 28, 2022 | 1:11 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಪರಸ್ಪರ ಹೊಡೆದಾಟ ನಡೆದಿದೆ. ವಿಧಾನಸಭೆಯಲ್ಲಿ ಬಿಜೆಪಿ (BJP), ಟಿಎಂಸಿ (TMC) ಶಾಸಕರ ನಡುವೆ ತಳ್ಳಾಟ, ಹೊಡೆದಾಟ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ರಾಮಪುರಹತ್ (Rampurhat) ಹತ್ಯಾಕಾಂಡದ ಬಗ್ಗೆ ಚರ್ಚೆಗೆ ಸುವೇಂದು ಅಧಿಕಾರಿ ಪಟ್ಟು ಹಿಡಿದಿದ್ದರು. ಆಗ ಬಿಜೆಪಿ ಮುಖ್ಯ ಸಚೇತಕ ಮನೋಜ್ ತಿಗ್ಗಾ ಮೇಲೆ ಹಲ್ಲೆ ನಡೆಸಲಾಗಿದೆ. ಟಿಎಂಸಿ ಶಾಸಕ ಅಸೀತ್ ಮಜುಂದಾರ್​ಗೂ ಗಲಾಟೆಯಲ್ಲಿ ಗಾಯಗಳಾಗಿವೆ. ಈ ಘಟನೆಯ ಬಳಿಕ ಐವರು ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ಶಾಸಕರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸದನದಲ್ಲಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಶಾಸಕರು ಪರಸ್ಪರರನ್ನು ಒದ್ದು, ಗುದ್ದಾಡಿಕೊಂಡ ಘಟನೆಯೂ ನಡೆಯಿತು. ರಾಮ್‌ಪುರಹತ್ ಹಿಂಸಾಚಾರ ಮತ್ತು ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ವೇಳೆ ಬಿಜೆಪಿ ಶಾಸಕ ಮನೋಜ್ ತಿಗ್ಗಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಘಟನೆಯಲ್ಲಿ ತನಗೆ ಗಾಯಗಳಾಗಿವೆ ಎಂದು ಟಿಎಂಸಿ ಶಾಸಕ ಅಸಿತ್ ಮಜುಂದಾರ್ ಹೇಳಿದ್ದಾರೆ. ಇದರ ನಡುವೆ ಇತರ ಶಾಸಕರು ತನ್ನನ್ನು ತಳ್ಳಿ ಶರ್ಟ್ ಹರಿದು ಹಾಕಿದ್ದಾರೆ ಎಂದು ಶಾಸಕರೊಬ್ಬರು ಆರೋಪಿಸುತ್ತಿರುವುದು ಕೂಡ ವಿಡಿಯೋದಲ್ಲಿದೆ.

ಈ ಘಟನೆಯ ನಂತರ, ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರು ವಿಧಾನಸಭೆಯಿಂದ ಹೊರನಡೆದಿದ್ದಾರೆ. ಬಿರ್ಭೂಮ್ ಕುರಿತು ಚರ್ಚೆಗೆ ಒತ್ತಾಯಿಸಿದಾಗ ತಮ್ಮ ಶಾಸಕರನ್ನು ಟಿಎಂಸಿ ಶಾಸಕರು ನೆಲದ ಮೇಲೆ ತಳ್ಳಿ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನದ ಕೊನೆಯ ದಿನದಂದು ಬಂಗಾಳದ ವಿಧಾನಸಭೆಯಲ್ಲಿ ಗದ್ದಲ ಭುಗಿಲೆದ್ದಿತು.

ಇದನ್ನೂ ಓದಿ: ಏನಾಗ್ತಿದೆ ಪಶ್ಚಿಮ ಬಂಗಾಳದಲ್ಲಿ?-ಬಿರ್ಭೂಮ್​ ಹಿಂಸಾಚಾರದ ಭೀಕರತೆಯ ಬೆನ್ನಲ್ಲೇ ಇಬ್ಬರು ಟಿಎಂಸಿ ನಾಯಕರ ಮೇಲೆ ಗಂಭೀರ ಸ್ವರೂಪದ ಹಲ್ಲೆ

Birbhum Violence: ಇಬ್ಬರು ಶೇಖ್​ಗಳ ನಡುವಿನ ಹಗೆತನ ಬಂಗಾಳದ ಬೊಗ್ಟುಯಿ ಗ್ರಾಮದ ಹತ್ಯಾಕಾಂಡಕ್ಕೆ ಹೇಗೆ ಕಾರಣವಾಯಿತು ಗೊತ್ತಾ?

Published On - 1:06 pm, Mon, 28 March 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ