AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhabanipur By polls ‘ಇದು ಅನ್ಯಾಯದ ವಿರುದ್ಧ ಹೋರಾಟ’: ಭವಾನಿಪುರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್

Priyanka Tibrewal: ಪೂರ್ವ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ವಿಚಾರಣೆಯಲ್ಲಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ತನ್ನ ಪಕ್ಷವನ್ನು ಪ್ರತಿನಿಧಿಸಿದ ಟಿಬರೆವಾಲ್ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಉಪಾಧ್ಯಕ್ಷರಾಗಿದ್ದಾರೆ.

Bhabanipur By polls 'ಇದು ಅನ್ಯಾಯದ ವಿರುದ್ಧ ಹೋರಾಟ': ಭವಾನಿಪುರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್
ಪ್ರಿಯಾಂಕಾ ಟಿಬರೆವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 13, 2021 | 2:24 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal ) ಭವಾನಿಪುರದಲ್ಲಿ ( Bhabanipur by-polls) ನಡೆಯಲಿರುವ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ನ್ಯಾಯವಾದಿ ಪ್ರಿಯಾಂಕಾ ಟಿಬರೆವಾಲ್ (Priyanka Tibrewal) ಇದು ಅನ್ಯಾಯದ ವಿರುದ್ಧದ ಹೋರಾಟ, ಪಶ್ಚಿಮ ಬಂಗಾಳದ ಜನರಿಗೆ ನ್ಯಾಯ ಒದಗಿಸಲಿರುವ ಹೋರಾಟ ಎಂದು ಹೇಳಿದ್ದಾರೆ. ಇದು ಪಶ್ಚಿಮ ಬಂಗಾಳದ ಜನರಿಗಾಗಿ ಅನ್ಯಾಯದ ವಿರುದ್ಧದ ಹೋರಾಟ ಮತ್ತು ನ್ಯಾಯಕ್ಕಾಗಿರುವ ಹೋರಾಟವಾಗಿದೆ. ಭವಾನಿಪುರದ ಜನರಿಗೆ ದೊಡ್ಡ ಅವಕಾಶ ಸಿಕ್ಕಿದೆ ಎಂದು ನಾನು ಹೇಳಲು ಬಯಸುತ್ತೇನೆ. ಹಾಗಾಗಿ, ಅವರು ಮುಂದೆ ಬಂದು ಇತಿಹಾಸ ನಿರ್ಮಿಸಬೇಕು ಎಂದು ಟಿಬರೆವಾಲ್ ನಾಮಪತ್ರ ಸಲ್ಲಿಸುವ ಮುನ್ನ ಹೇಳಿದ್ದಾರೆ. ಪ್ರಿಯಾಂಕಾ ಅವರು ಭವಾನಿಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಪೂರ್ವ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ವಿಚಾರಣೆಯಲ್ಲಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ತನ್ನ ಪಕ್ಷವನ್ನು ಪ್ರತಿನಿಧಿಸಿದ ಟಿಬರೆವಾಲ್ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಉಪಾಧ್ಯಕ್ಷರಾಗಿದ್ದಾರೆ. ಭವಾನಿಪುರ ಗೋಡೆಯ ಮೇಲೆ ಬಿಜೆಪಿಯ ಚಿಹ್ನೆಯಾದ ಕಮಲದ ವರ್ಣಚಿತ್ರವನ್ನು ಬಿಡಿಸುವ ಮೂಲಕ ಅವರು ಭಾನುವಾರ ಉಪಚುನಾವಣೆಯ ಪ್ರಚಾರವನ್ನು ಆರಂಭಿಸಿದರು. 2014 ರಲ್ಲಿ ಪ್ರಿಯಾಂಕಾ ಬಿಜೆಪಿ ಸೇರಿದ್ದರು.

ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಮಮತಾ ಬ್ಯಾನರ್ಜಿ ಕಳೆದ ಶುಕ್ರವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮಮತಾ ಬ್ಯಾನರ್ಜಿ ಈ ವರ್ಷದ ಆರಂಭದಲ್ಲಿ ಎಂಟು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿ ತಮ್ಮ ಮಾಜಿ ಸಹಾಯಕರಾದ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಪರಾಭವಗೊಂಡಿದ್ದರು.

ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾದ ಮೂರು ದಿನಗಳ ನಂತರ ಮೇ 5 ರಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳ ಮುಖ್ಯಮಂತ್ರಿ, ನವೆಂಬರ್ 5 ರೊಳಗೆ ರಾಜ್ಯಸಭೆಗೆ ಆಯ್ಕೆಯಾಗಬೇಕಿತ್ತು. ಮಮತಾ ಅನುಪಸ್ಥಿತಿಯಲ್ಲಿ ಭವಾನಿಪುರದಿಂದ ಸ್ಪರ್ಧಿಸಿ ಗೆದ್ದ ಸೋವಂದೇಬ್ ಚಟ್ಟೋಪಾಧ್ಯಾಯ ಅವರು ತಮ್ಮ ಪಕ್ಷದ ಮುಖ್ಯಸ್ಥರಿಂದ ಉಪಚುನಾವಣೆಗೆ ಸ್ಪರ್ಧಿಸಲು ಸ್ಥಾನವನ್ನು ಖಾಲಿ ಮಾಡಿದರು.

ಸೆಪ್ಟೆಂಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ಮತಗಳ ಎಣಿಕೆ ಮತ್ತು ಫಲಿತಾಂಶ ಘೋಷಣೆ ಅಕ್ಟೋಬರ್ 3 ರಂದು ನಡೆಯಲಿದೆ.

ಇದನ್ನೂ ಓದಿ: Bhabanipur Bypoll: ಭವಾನಿಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ

ಇದನ್ನೂ ಓದಿ:  Bhabanipur Bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಟಿಬರೆವಾಲ್​​ನ್ನು ಕಣಕ್ಕಿಳಿಸಿದ ಬಿಜೆಪಿ

(West Bengal Bhabanipur by-polls fight for justice for the people of West Bengal says BJP’s Priyanka Tibrewal)

Published On - 2:19 pm, Mon, 13 September 21

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ