ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ

TV9 Digital Desk

| Edited By: Rashmi Kallakatta

Updated on:Sep 06, 2021 | 4:36 PM

ತಮ್ಮ ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಪ್ರಕರಣಗಳಲ್ಲಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವು ಆತ್ಮಹತ್ಯೆ ಪ್ರಕರಣವೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂದು ಸಿಐಡಿ ತನಿಖೆ ನಡೆಸುತ್ತಿದೆ.

ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ

ಕೊಲ್ಕತ್ತಾ: 2018 ರಲ್ಲಿ ಗುಂಡೇಟಿನಿಂದ ಭದ್ರತಾ ಸಿಬ್ಬಂದಿಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಇಂದು ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದರು. ನ್ಯಾಯಾಲಯವು ಇಂದು ತಡೆಹಿಡಿದ ಮೂರು ಪ್ರಕರಣಗಳಲ್ಲಿ ಇದು ಒಂದಾಗಿದೆ ಎಂದು ಅವರ ವಕೀಲರು ಹೇಳಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮಾಜಿ ಮಿತ್ರರಾಗಿದ್ದ ಸುವೇಂದು ಕಳೆದ ವರ್ಷ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಇಂದು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದಾಗ್ಯೂ, ಸುವೇಂದು ವಿಚಾರಣೆಗೆ ಹಾಜರಾಗಲಿಲ್ಲ.

ತಮ್ಮ ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಪ್ರಕರಣಗಳಲ್ಲಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವು ಆತ್ಮಹತ್ಯೆ ಪ್ರಕರಣವೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂದು ಸಿಐಡಿ ತನಿಖೆ ನಡೆಸುತ್ತಿದೆ.

ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ  ಕಲ್ಲಿದ್ದಲು ಕಳ್ಳಸಾಗಾಣಿಕೆ ಮಾಡಿದ ಪ್ರಕರಣದ ಆರೋಪದಲ್ಲಿ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಕರೆಸಿಕೊಂಡ ಅದೇ ದಿನ ಸುವೇಂದು ಅಧಿಕಾರಿಗೆ ಸಿಐಡಿ ಮುಂದೆ ಹಾಜರಾಗುವಂತೆ ಹೇಳಿದೆ.

ಬ್ಯಾನರ್ಜಿಯವರ ಸಚಿವ ಸಂಪುಟದಲ್ಲಿ ಮಾಜಿ ಸಾರಿಗೆ ಸಚಿವರಾಗಿದ್ದ ಸುವೇಂದು ತೃಣಮೂಲದ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ್ದರು. ನವೆಂಬರ್ 2020 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ತಿಂಗಳುಗಳಿರುವಾಗ ಸುವೇೆಂದು ಬಿಜೆಪಿಗೆ ಸೇರಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸುವೇಂದು ಅವರು ನಂದಿಗ್ರಾಮ ಚುನಾವಣಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತದೊಂದಿಗೆ ವಿಜಯ ಸಾಧಿಸಿತ್ತು.

ಸಿಐಡಿ ಸಮನ್ಸ್​​ಗೆ  ಗೈರಾದ ಸುವೇಂದು ಅಧಿಕಾರಿ

ತನ್ನ ಅಂಗರಕ್ಷಕನ ಸಾವಿನ ತನಿಖೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೋಮವಾರ ಪಶ್ಚಿಮ ಬಂಗಾಳ ಸಿಐಡಿ  ಕಚೇರಿಗೆ ಹಾಜರಾಗಲಿಲ್ಲ, ಅವರು ಬ್ಯುಸಿಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಗರಕ್ಷಕ ಸುಭೋಬ್ರತ ಚಕ್ರವರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ನಂದಿಗ್ರಾಮ ಶಾಸಕರಾದ ಸುವೇಂದು ಅಧಿಕಾರಿಯನ್ನು ಸಿಐಡಿ ಭಬನಿ ಭವನದಲ್ಲಿರುವ ತನ್ನ ಪ್ರಧಾನ ಕಚೇರಿಗೆ ಕರೆಸಿತ್ತು, “ಅವರು ಬೆಳಿಗ್ಗೆ 9.30 ರ ಸುಮಾರಿಗೆ ನಮಗೆ ಇಮೇಲ್ ಮಾಡಿದರು, ಕೆಲವು ರಾಜಕೀಯ ಕಾರ್ಯಕ್ರಮಗಳು ಇದ್ದ ಕಾರಣ ಅವರಿಗೆ ನಮ್ಮ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ” ಎಂದು ಸಿಐಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಸುವೇಂದು ಅವರ ಇಮೇಲ್ ಸ್ವೀಕರಿಸಿದ ನಂತರ ತನಿಖೆಯ ಮುಂದಿನ ಮುಂದಿನ ಕ್ರಮಗಳನ್ನು ತಿಳಿಸಲು, ಇನ್ನೊಂದು ಸಮನ್ಸ್ ಕಳುಹಿಸಲಾಗುತ್ತದೆಯೇ ಎಂಬುದರ ಬಗ್ಗೆ ಚರ್ಚಿಸಲು ನಂತರ ಸಿಐಡಿ ಸಭೆ ನಡೆಸಿತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ತನಿಖೆಗೆ ಸಂಬಂಧಿಸಿದಂತೆ ಸಿಐಡಿ ತಂಡ ಈಗಾಗಲೇ ಅವರ ಕಂಠಿ ನಿವಾಸಕ್ಕೆ ಭೇಟಿ ನೀಡಿದೆ.

ಚಕ್ರವರ್ತಿ ಅಕ್ಟೋಬರ್ 2018 ರಲ್ಲಿ ಅಧಿಕಾರಿಯ ಕಂಠಿ ನಿವಾಸದ ಹೊರಗಿನ ಭದ್ರತಾ ಶಿಬಿರದಲ್ಲಿ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಐಡಿ ಇದುವರೆಗೆ 11 ಜನರನ್ನು ಒಳಗೊಂಡಂತೆ 15 ಜನರನ್ನು ವಿಚಾರಣೆಗೆ ಒಳಪಡಿಸಿದೆ.

ಚಕ್ರವರ್ತಿ, ರಾಜ್ಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯಾಗಿದ್ದರು. ಸುವೇಂದು ಅವರು ಸಂಸದರಾದಾಗಿನಿಂದ ಚಕ್ರವರ್ತಿ ಭದ್ರತಾ ತಂಡದ ಭಾಗವಾಗಿದ್ದರು. ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾದ ನಂತರವೂ ಅವರು ತಂಡದಲ್ಲಿ ಮುಂದುವರಿದರು.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

(West Bengal BJP Leader Suvendu Adhikari got protection against arrest from the Calcutta High Court )

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada