AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ

ತಮ್ಮ ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಪ್ರಕರಣಗಳಲ್ಲಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವು ಆತ್ಮಹತ್ಯೆ ಪ್ರಕರಣವೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂದು ಸಿಐಡಿ ತನಿಖೆ ನಡೆಸುತ್ತಿದೆ.

ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 06, 2021 | 4:36 PM

Share

ಕೊಲ್ಕತ್ತಾ: 2018 ರಲ್ಲಿ ಗುಂಡೇಟಿನಿಂದ ಭದ್ರತಾ ಸಿಬ್ಬಂದಿಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಇಂದು ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ರಕ್ಷಣೆ ಪಡೆದರು. ನ್ಯಾಯಾಲಯವು ಇಂದು ತಡೆಹಿಡಿದ ಮೂರು ಪ್ರಕರಣಗಳಲ್ಲಿ ಇದು ಒಂದಾಗಿದೆ ಎಂದು ಅವರ ವಕೀಲರು ಹೇಳಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮಾಜಿ ಮಿತ್ರರಾಗಿದ್ದ ಸುವೇಂದು ಕಳೆದ ವರ್ಷ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಇಂದು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದಾಗ್ಯೂ, ಸುವೇಂದು ವಿಚಾರಣೆಗೆ ಹಾಜರಾಗಲಿಲ್ಲ.

ತಮ್ಮ ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಪ್ರಕರಣಗಳಲ್ಲಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವು ಆತ್ಮಹತ್ಯೆ ಪ್ರಕರಣವೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂದು ಸಿಐಡಿ ತನಿಖೆ ನಡೆಸುತ್ತಿದೆ.

ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ  ಕಲ್ಲಿದ್ದಲು ಕಳ್ಳಸಾಗಾಣಿಕೆ ಮಾಡಿದ ಪ್ರಕರಣದ ಆರೋಪದಲ್ಲಿ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಕರೆಸಿಕೊಂಡ ಅದೇ ದಿನ ಸುವೇಂದು ಅಧಿಕಾರಿಗೆ ಸಿಐಡಿ ಮುಂದೆ ಹಾಜರಾಗುವಂತೆ ಹೇಳಿದೆ.

ಬ್ಯಾನರ್ಜಿಯವರ ಸಚಿವ ಸಂಪುಟದಲ್ಲಿ ಮಾಜಿ ಸಾರಿಗೆ ಸಚಿವರಾಗಿದ್ದ ಸುವೇಂದು ತೃಣಮೂಲದ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ್ದರು. ನವೆಂಬರ್ 2020 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ತಿಂಗಳುಗಳಿರುವಾಗ ಸುವೇೆಂದು ಬಿಜೆಪಿಗೆ ಸೇರಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸುವೇಂದು ಅವರು ನಂದಿಗ್ರಾಮ ಚುನಾವಣಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತದೊಂದಿಗೆ ವಿಜಯ ಸಾಧಿಸಿತ್ತು.

ಸಿಐಡಿ ಸಮನ್ಸ್​​ಗೆ  ಗೈರಾದ ಸುವೇಂದು ಅಧಿಕಾರಿ

ತನ್ನ ಅಂಗರಕ್ಷಕನ ಸಾವಿನ ತನಿಖೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೋಮವಾರ ಪಶ್ಚಿಮ ಬಂಗಾಳ ಸಿಐಡಿ  ಕಚೇರಿಗೆ ಹಾಜರಾಗಲಿಲ್ಲ, ಅವರು ಬ್ಯುಸಿಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಗರಕ್ಷಕ ಸುಭೋಬ್ರತ ಚಕ್ರವರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ನಂದಿಗ್ರಾಮ ಶಾಸಕರಾದ ಸುವೇಂದು ಅಧಿಕಾರಿಯನ್ನು ಸಿಐಡಿ ಭಬನಿ ಭವನದಲ್ಲಿರುವ ತನ್ನ ಪ್ರಧಾನ ಕಚೇರಿಗೆ ಕರೆಸಿತ್ತು, “ಅವರು ಬೆಳಿಗ್ಗೆ 9.30 ರ ಸುಮಾರಿಗೆ ನಮಗೆ ಇಮೇಲ್ ಮಾಡಿದರು, ಕೆಲವು ರಾಜಕೀಯ ಕಾರ್ಯಕ್ರಮಗಳು ಇದ್ದ ಕಾರಣ ಅವರಿಗೆ ನಮ್ಮ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ” ಎಂದು ಸಿಐಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಸುವೇಂದು ಅವರ ಇಮೇಲ್ ಸ್ವೀಕರಿಸಿದ ನಂತರ ತನಿಖೆಯ ಮುಂದಿನ ಮುಂದಿನ ಕ್ರಮಗಳನ್ನು ತಿಳಿಸಲು, ಇನ್ನೊಂದು ಸಮನ್ಸ್ ಕಳುಹಿಸಲಾಗುತ್ತದೆಯೇ ಎಂಬುದರ ಬಗ್ಗೆ ಚರ್ಚಿಸಲು ನಂತರ ಸಿಐಡಿ ಸಭೆ ನಡೆಸಿತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ತನಿಖೆಗೆ ಸಂಬಂಧಿಸಿದಂತೆ ಸಿಐಡಿ ತಂಡ ಈಗಾಗಲೇ ಅವರ ಕಂಠಿ ನಿವಾಸಕ್ಕೆ ಭೇಟಿ ನೀಡಿದೆ.

ಚಕ್ರವರ್ತಿ ಅಕ್ಟೋಬರ್ 2018 ರಲ್ಲಿ ಅಧಿಕಾರಿಯ ಕಂಠಿ ನಿವಾಸದ ಹೊರಗಿನ ಭದ್ರತಾ ಶಿಬಿರದಲ್ಲಿ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಐಡಿ ಇದುವರೆಗೆ 11 ಜನರನ್ನು ಒಳಗೊಂಡಂತೆ 15 ಜನರನ್ನು ವಿಚಾರಣೆಗೆ ಒಳಪಡಿಸಿದೆ.

ಚಕ್ರವರ್ತಿ, ರಾಜ್ಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯಾಗಿದ್ದರು. ಸುವೇಂದು ಅವರು ಸಂಸದರಾದಾಗಿನಿಂದ ಚಕ್ರವರ್ತಿ ಭದ್ರತಾ ತಂಡದ ಭಾಗವಾಗಿದ್ದರು. ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾದ ನಂತರವೂ ಅವರು ತಂಡದಲ್ಲಿ ಮುಂದುವರಿದರು.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

(West Bengal BJP Leader Suvendu Adhikari got protection against arrest from the Calcutta High Court )

Published On - 4:29 pm, Mon, 6 September 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ