Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ತೊಟ್ಟ ಮತದಾರರನ್ನು ಪತ್ತೆ ಹಚ್ಚಲು ಮಹಿಳಾ ಪೊಲೀಸರನ್ನು ನೇಮಿಸಿ: ಬಿಜೆಪಿ ಮನವಿ

ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಬರುವುದರಿಂದ ಮತಗಟ್ಟೆಗಳಲ್ಲಿರುವ ಪುರುಷ ಪೊಲೀಸ್ ಸಿಬ್ಬಂದಿಗಳಿಗೆ ಬುರ್ಖಾ ತೊಟ್ಟವರನ್ನು ಪರಿಶೀಲಿಸುವುದು ಕಷ್ಟ. ಅಲ್ಲದೇ ಬಾಂಗ್ಲಾ ಗಡಿ ಭಾಗದಂತಹ ಪ್ರದೇಶಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿರುವುದು ಸಂಶಯಾಸ್ಪದ ಆಗಿದೆ.

ಬುರ್ಖಾ ತೊಟ್ಟ ಮತದಾರರನ್ನು ಪತ್ತೆ ಹಚ್ಚಲು ಮಹಿಳಾ ಪೊಲೀಸರನ್ನು ನೇಮಿಸಿ: ಬಿಜೆಪಿ ಮನವಿ
ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸಹ ಮೊದಲ ಬಾರಿಗೆ ಭರೂಚ್​ ಸ್ಥಳೀಯ ಪಾಲಿಕೆಗಳಿಗೆ ಸ್ಪರ್ಧಿಸಿದ್ದು, ಕಾಂಗ್ರೆಸ್, ಬಿಜೆಪಿಗಳಿಗೆ ಹೊಸ ತಲೆನೋವು ಎದುರಾಗಿದೆ.
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 18, 2020 | 11:35 AM

ಕೋಲ್ಕತ್ತಾ: ಬುರ್ಖಾ ತೊಟ್ಟು ಮತ ಚಲಾಯಿಸಲು ಬರುವ ಮತದಾರರ ಗುರುತು ಪತ್ತೆ ಮಾಡಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕೆಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಪಾರದರ್ಶಕ ಮತದಾನ ಪ್ರಕ್ರಿಯೆಗೆ ಅನುವಾಗುವ ಸಲುವಾಗಿ ಮತಗಟ್ಟೆಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಸ್ಲಿಂ ಮತದಾರರು ಅಧಿಕವಾಗಿರುವ ಪ್ರದೇಶಗಳಲ್ಲಿ ಬುರ್ಖಾ ತೊಟ್ಟು ಬರುವವರ ಗುರುತು ಪತ್ತೆ ಹಚ್ಚಲು ಮತ್ತು ಆ ಮೂಲಕ ಅಕ್ರಮ ತಡೆಗಟ್ಟಲು ಮಹಿಳಾ ಸಿಬ್ಬಂದಿ ಅವಶ್ಯಕತೆ ಇದೆ. ಇದನ್ನು ಗಮನದಲ್ಲಿರಿಸಿಕೊಂಡು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಬಿಜೆಪಿ ಈ ಪತ್ರ ಬರೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣಾ ಆಯೋಗದ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಈ ಪತ್ರವನ್ನು ಎಎನ್​ಐ ಸುದ್ದಿ ಸಂಸ್ಥೆ ಟ್ವಿಟರ್​ನಲ್ಲಿ ಹಂಚಿಕೊಂಡಿದೆ.

ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಬರುವುದರಿಂದ ಮತಗಟ್ಟೆಗಳಲ್ಲಿರುವ ಪುರುಷ ಪೊಲೀಸ್ ಸಿಬ್ಬಂದಿಗೆ ಬುರ್ಖಾ ತೊಟ್ಟವರನ್ನು ಪರಿಶೀಲಿಸುವುದು ಕಷ್ಟ. ಅಲ್ಲದೇ ಬಾಂಗ್ಲಾ ಗಡಿ ಭಾಗದಂತಹ ಪ್ರದೇಶಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿರುವುದು ಸಂಶಯಾಸ್ಪದ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ಪರಿಶೀಲನೆಯ ಅಗತ್ಯವಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ಚುನಾವಣೆಗಳಲ್ಲಿ ಮೃತಪಟ್ಟವರು ಹಾಗೂ ಬೇರೆ ಊರುಗಳಿಗೆ ತೆರಳಿದವರ ಹೆಸರು ಸಹ ಮತದಾರರ ಪಟ್ಟಿಯಲ್ಲಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಸತ್ತವರ ಹೆಸರಿನಲ್ಲೂ ಮತ ಚಲಾವಣೆ ಆಗಿರುವ ಉದಾಹರಣೆ ಇದೆ. ಈ ತೆರನಾದ ಅಕ್ರಮಗಳನ್ನು ತಡೆಗಟ್ಟಲು ಮಹಿಳಾ ಸಿಬ್ಬಂದಿಯನ್ನು ನೇಮಿಸಿ ಬುರ್ಖಾ ತೊಟ್ಟವರನ್ನು ಪರಿಶೀಲಿಸುವುದು ಅನಿವಾರ್ಯ ಎಂದು ಪಶ್ಚಿಮ ಬಂಗಾಳ ಬಿಜೆಪಿ ಚುನಾವಣಾ ಆಯೋಗದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ.

ಬುರ್ಖಾ ಧರಿಸಿ ವಾಚ್​ ಅಂಗಡಿಗೆ ಎಂಟ್ರಿ ಕೊಟ್ಟ ವೈದ್ಯ ಪೊಲೀಸರ ಅತಿಥಿಯಾದ!

VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ