AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal By-Election Results: ಪಶ್ಚಿಮ ಬಂಗಾಳದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

ಪಶ್ಚಿಮ ಬಂಗಾಳದ ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭವಾನಿಪುರ ಕುತೂಹಲ ಹೆಚ್ಚಿಸಿದೆ. ಇಲ್ಲಿ ಸೆ.30ರಂದು ಶೇ.57.09ರಷ್ಟು ಮತದಾನವಾಗಿತ್ತು. ಇಲ್ಲಿ ಬಿಜೆಪಿ ಪ್ರಿಯಾಂಕಾ ಟಿಬರೆವಾಲ್​ ಸ್ಪರ್ಧಿಸಿದ್ದರು.

West Bengal By-Election Results: ಪಶ್ಚಿಮ ಬಂಗಾಳದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ
ಮಮತಾ ಬ್ಯಾನರ್ಜಿ
TV9 Web
| Edited By: |

Updated on:Oct 03, 2021 | 9:52 AM

Share

ಸೆಪ್ಟೆಂಬರ್​ 30ರಂದು ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆ (West Bengal By Election)ಯ ಮತ ಎಣಿಕೆ ಇಂದು ಬೆಳಗ್ಗೆಯಿಂದ ಪ್ರಾರಂಭವಾಗಿದ್ದು, ಸದ್ಯದ ಲೆಕ್ಕಾಚಾರದ ಪ್ರಕಾರ ಸಂಸರ್​ಗಂಜ್​, ಭವಾನಿಪುರ ಮತ್ತು ಜಂಗೀಪುರ ಮೂರು ಕ್ಷೇತ್ರಗಳಲ್ಲಿ ಟಿಎಂಸಿ ಮುಂದಿದೆ. ಈಗ ಪೋಸ್ಟಲ್​ ಬ್ಯಾಲೆಟ್​ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿ ಭವಾನಿಪುರದಲ್ಲಿ 2800 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 

ಇನ್ನು ಜಂಗೀಪುರದಲ್ಲಿ ಟಿಎಂಸಿ ಅಭ್ಯರ್ಥಿ ಜಾಕಿರ್​ ಹೊಸೇನ್​ 1,717 ಮತಗಳ ಅಂತರದಿಂದ ಮುಂದಿದ್ದಾರೆ. ಹಾಗೇ, ಸಂಸರ್​ಗಂಜ್​ ಅಭ್ಯರ್ಥಿ ಅಮಿರುಲ್​ ಇಸ್ಲಾಮ್​ ಕೂಡ ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭವಾನಿಪುರ ಕುತೂಹಲ ಹೆಚ್ಚಿಸಿದೆ. ಇಲ್ಲಿ ಸೆ.30ರಂದು ಶೇ.57.09ರಷ್ಟು ಮತದಾನವಾಗಿತ್ತು. ಇಲ್ಲಿ ಬಿಜೆಪಿ ಪ್ರಿಯಾಂಕಾ ಟಿಬರೆವಾಲ್​ ಸ್ಪರ್ಧಿಸಿದ್ದರು. ಭವಾನಿಪುರದಲ್ಲಿ ಈ ಬಾರಿ ಮಮತಾ ಬ್ಯಾನರ್ಜಿ ಗೆಲ್ಲದೆ ಇದ್ದರೆ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಬೇಕಾಗುತ್ತದೆ.  ಇಂದು ಭವಾನಿಪುರದಲ್ಲಿ 21 ಸುತ್ತಿನ, ಸಂಸರ್​ಗಂಜ್​​ನಲ್ಲಿ 26 ಮತ್ತು ಜಂಗೀಪುರದಲ್ಲಿ 24 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ ಬಿಜೆಪಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದರೆ ತನ್ನ ಸ್ವಕ್ಷೇತ್ರ ಬಿಟ್ಟು ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಸೋತಿದ್ದಾರೆ. 294 ಕ್ಷೇತ್ರಗಳಲ್ಲಿ 213 ಕ್ಷೇತ್ರಗಳನ್ನು ಟಿಎಂಸಿ ತನ್ನದಾಗಿಸಿಕೊಂಡಿದ್ದರೆ, ಬಿಜೆಪಿ 77 ಕ್ಷೇತ್ರಗಳಲ್ಲಿ ಗೆದ್ದಿತ್ತು. ಆದರೆ ಸೋತಿದ್ದೂ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಮಮತಾ ಬ್ಯಾನರ್ಜಿಯನ್ನು ಮತ್ತೆ ಗೆಲ್ಲಿಸಲೆಂದೇ ಭವಾನಿಪುರದಲ್ಲಿ ಉಪಚುನಾವಣೆ ನಡೆಯುವಂತಾಯ್ತು.

ಇದನ್ನೂ ಓದಿ: ಮನೆ ಗೇಟಿಗೆ ಸಿಲುಕಿಕೊಂಡ ನಾಯಿ ಮರಿ; ಯುವಕರು ರಕ್ಷಿಸಿದ ವಿಡಿಯೋ ಇಲ್ಲಿದೆ

ವಿಶ್ವವಿಖ್ಯಾತ ದಸರಾ ಮಹೋತ್ಸವ; ಮೈಸೂರಿನ ಕೆಲ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

Published On - 9:39 am, Sun, 3 October 21

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​