AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರಿಗೆ ಯಾವತ್ತೂ ಬೆದರಿಕೆ ಹಾಕಿಲ್ಲ: ಬಿಜೆಪಿ ವಾಗ್ದಾಳಿ ನಡುವೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ, ನಾನು ಅವರ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಭಾರತ ಸರ್ಕಾರದ ಬೆಂಬಲದೊಂದಿಗೆ ಅವರು ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಅವರು ಅರಾಜಕತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಕೇಂದ್ರದ ಬೆಂಬಲದೊಂದಿಗೆ ಅವರು ಕಾನೂನುಬಾಹಿರತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ ಎಂದ ಬಂಗಾಳ ಸಿಎಂ.

ವೈದ್ಯರಿಗೆ ಯಾವತ್ತೂ ಬೆದರಿಕೆ ಹಾಕಿಲ್ಲ: ಬಿಜೆಪಿ ವಾಗ್ದಾಳಿ ನಡುವೆ ಮಮತಾ ಬ್ಯಾನರ್ಜಿ ಸ್ಪಷ್ಟನೆ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
|

Updated on:Aug 29, 2024 | 4:32 PM

Share

ಕೋಲ್ಕತ್ತಾ ಆಗಸ್ಟ್ 29: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ತಮ್ಮ ನಿನ್ನೆಯ ಭಾಷಣದ ಮೇಲೆ ದುರುದ್ದೇಶಪೂರಿತ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಅಥವಾ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ( RG Kar Medical College and Hospital)ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಖಂಡಿಸಿರುವ ಅವರ ಚಳವಳಿಯ ವಿರುದ್ಧ ತಾನು ಒಂದೇ ಒಂದು ಪದವನ್ನು ಹೇಳಿಲ್ಲ ಎಂದಿದ್ದಾರೆ ಮಮತಾ.

ನಿನ್ನೆ ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ನಾನು ಮಾಡಿದ ಭಾಷಣ ಬಗ್ಗೆ ಕೆಲವು ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶಪೂರಿತ ತಪ್ಪು ಮಾಹಿತಿ ಪ್ರಚಾರವನ್ನು ನಾನು ಪತ್ತೆ ಮಾಡಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ನಾನು (ವೈದ್ಯಕೀಯ ಇತ್ಯಾದಿ) ವಿದ್ಯಾರ್ಥಿಗಳು ಅಥವಾ ಅವರ ಚಳುವಳಿಗಳ ವಿರುದ್ಧ ಒಂದೇ ಒಂದು ಪದವನ್ನು ಉಚ್ಚರಿಸಿಲ್ಲ ಎಂದು ನಾನು ಅತ್ಯಂತ ಸ್ಪಷ್ಟವಾಗಿ ಸ್ಪಷ್ಟಪಡಿಸುತ್ತೇನೆ. ನಾನು ಅವರ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಅವರ ಚಳುವಳಿ ನಿಜವಾದದು. ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿರುವಂತೆ ನಾನು ಅವರಿಗೆ ಎಂದಿಗೂ ಬೆದರಿಕೆ ಹಾಕಲಿಲ್ಲ. .ಈ ಆರೋಪ ಸಂಪೂರ್ಣವಾಗಿ ಸುಳ್ಳು. ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ಮಾತನಾಡಿದ್ದು, ಪ್ರಸ್ತುತ ಪಕ್ಷ ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂದು ನಾನು ಹೇಳಿದ್ದೆ ಎಂದಿದ್ದಾರೆ ಮಮತಾ.

“ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ, ನಾನು ಅವರ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಭಾರತ ಸರ್ಕಾರದ ಬೆಂಬಲದೊಂದಿಗೆ ಅವರು ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಅವರು ಅರಾಜಕತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಕೇಂದ್ರದ ಬೆಂಬಲದೊಂದಿಗೆ ಅವರು ಕಾನೂನುಬಾಹಿರತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ. ತನ್ನ ಭಾಷಣದ ಸಮಯದಲ್ಲಿ ತಾನು ತುಂಬಾ ತಾಳ್ಮೆಯಿಂದ ಇದ್ದೆ ಎಂದ ಮಮತಾ ಪ್ರತಿಭಟನಾನಿರತ ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದ್ದಾರೆ.

ಏತನ್ಮಧ್ಯೆ, ಮಮತಾ ವೈದ್ಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ನಾನು ನಿನ್ನೆ ನನ್ನ ಭಾಷಣದಲ್ಲಿ ಬಳಸಿರುವ (“ಫೋನ್ಶ್ ಕಾರ”) ಪದವು ಶ್ರೀ ರಾಮಕೃಷ್ಣ ಪರಮಹಂಸ ದೇವರ ಉಲ್ಲೇಖವಾಗಿದೆ ಎಂದು ನಾನು ಸ್ಪಷ್ಟಪಡಿಸುತ್ತೇನೆ. ಖ್ಯಾತ ಸಂತರು ಸಾಂದರ್ಭಿಕವಾಗಿ ಧ್ವನಿ ಎತ್ತುವ ಅಗತ್ಯವಿದೆ ಎಂದು ಹೇಳಿದ್ದರು. ಅಪರಾಧಗಳು ಮತ್ತು ಕ್ರಿಮಿನಲ್ ಅಪರಾಧಗಳು, ಪ್ರತಿಭಟನೆಯ ದನಿ ಎತ್ತಬೇಕು ಎಂಬುದಕ್ಕೆ ನನ್ನ ಭಾಷಣವು ಮಹಾನ್ ರಾಮಕೃಷ್ಣರ ಮಾತನ್ನು ನೇರವಾಗಿ ಉಲ್ಲೇಖಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬುಧವಾರ, ಬಿಜೆಪಿಯ 12 ಗಂಟೆಗಳ ಸುದೀರ್ಘ ‘ಬಂಗಾಳ ಬಂದ್’ ಕರೆಗೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ವೈದ್ಯರ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಬಂಗಾಳದಲ್ಲಿ ಉದ್ವಿಗ್ನತೆ ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವನ್ನು ಬಳಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ

ಇದು ಬಾಂಗ್ಲಾದೇಶ ಎಂದು ಕೆಲವರು ಭಾವಿಸುತ್ತಾರೆ. ನಾನು ಬಾಂಗ್ಲಾದೇಶವನ್ನು ಪ್ರೀತಿಸುತ್ತೇನೆ. ಅವರು ನಮ್ಮಂತೆಯೇ ಮಾತನಾಡುತ್ತಾರೆ ಮತ್ತು ನಮ್ಮ ಸಂಸ್ಕೃತಿಯನ್ನು ಹಂಚಿಕೊಳ್ಳುತ್ತಾರೆ. ಆದರೆ ನೆನಪಿಡಿ, ಬಾಂಗ್ಲಾದೇಶ ಪ್ರತ್ಯೇಕ ದೇಶ, ಮತ್ತು ಭಾರತ ಪ್ರತ್ಯೇಕ ದೇಶ. ಇಲ್ಲಿ ಬೆಂಕಿ ಹಚ್ಚಲು ಮೋದಿ ಬಾಬು ತಮ್ಮ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ. ನೀವು ಬಂಗಾಳಕ್ಕೆ  ಬೆಂಕಿ ಹಚ್ಚಿದರೆ, ಅಸ್ಸಾಂ, ಈಶಾನ್ಯ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ದೆಹಲಿ ಸುಡುತ್ತದೆ! ನಾವು ನಿಮ್ಮ ಕುರ್ಚಿಯನ್ನು ಉರುಳಿಸುತ್ತೇವೆ, ”ಎಂದಿದ್ದಾರೆ ಮಮತಾ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಇಂದು ಅವರನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೊತೆ ಹೋಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Thu, 29 August 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ