AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ಕಾರು ಅಪಘಾತ; ಮಮತಾ ಬ್ಯಾನರ್ಜಿಗೆ ಗಾಯ

ಮೂಲಗಳ ಪ್ರಕಾರ ಮಳೆಯ ಕಾರಣ ಮಮತಾ ಬ್ಯಾನರ್ಜಿ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಮಮತಾ ಬ್ಯಾನರ್ಜಿ ಗಾಯಗೊಂಡರು. ಅವರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ.

ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ಕಾರು ಅಪಘಾತ; ಮಮತಾ ಬ್ಯಾನರ್ಜಿಗೆ ಗಾಯ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 24, 2024 | 5:08 PM

Share

ದೆಹಲಿ ಜನವರಿ 24: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ,  ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರು ಬುಧವಾರ ಬರ್ಧಮಾನ್‌ನಿಂದ ಕೋಲ್ಕತ್ತಾಗೆ (Kolkata)  ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ (Car Accident). ಈ ಘಟನೆಯಲ್ಲಿ ಮಮತಾ ಅವರಿಗೆ  ಸಣ್ಣಪುಟ್ಟ  ಗಾಯಗಳಾಗಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಮೂಲಗಳ ಪ್ರಕಾರ ಮಳೆಯ ಕಾರಣ ಹೆಲಿಕಾಪ್ಟರ್ ಪ್ರಯಾಣ ಕೈ ಬಿಟ್ಟು  ಮಮತಾ ಬ್ಯಾನರ್ಜಿ ಕಾರಿನಲ್ಲಿ ಹಿಂತಿರುಗುತ್ತಿದ್ದರು.

ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಮುಖ್ಯಮಂತ್ರಿ ಗಾಯಗೊಂಡರು. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ. ಕೋಲ್ಕತ್ತಾದಲ್ಲಿ ವೈದ್ಯರು ಆಕೆಗೆ ಚಿಕಿತ್ಸೆ ನೀಡಲಿದ್ದಾರೆ.

ಚಾಲಕನ ಪಕ್ಕದಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ತಲೆ ವಿಂಡ್‌ಸ್ಕ್ರೀನ್‌ಗೆ ಬಡಿದು ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕೋಲ್ಕತ್ತಾದಿಂದ 100 ಕಿಮೀ ದೂರದಲ್ಲಿರುವ ಪುರ್ಬಾ ಬರ್ಧಮಾನ್‌ನಲ್ಲಿ ಆಡಳಿತಾತ್ಮಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲು ಮಮತಾ ಹೋಗಿದ್ದರು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಇಲ್ಲ, ಟಿಎಂಸಿ ಏಕಾಂಗಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತದೆ ಎಂದು ಬುಧ ವಾರ  ಬೆಳಗ್ಗೆ ಮಮತಾ ಬ್ಯಾನರ್ಜಿ ಹೇಳಿದ್ದರು. ಆದಾಗ್ಯೂ, ಮಮತಾ  “ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಕಾಂಗ್ರೆಸ್ ಹೇಳಿದೆ.

“ಮಮತಾ ಬ್ಯಾನರ್ಜಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಬಗ್ಗೆ ನಾವು ಈಗಷ್ಟೇ ಕೇಳಿದ್ದೇವೆ. ಅವರು ಪೂರ್ಣ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾಳೆ ಬಂಗಾಳಕ್ಕೆ ಪ್ರವೇಶಿಸಲಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನವೀಕರಣವನ್ನು ಅವರು ಪೋಸ್ಟ್ ಮಾಡಿದ್ದಾರೆ.

“ಭಾರತ್ ಜೋಡೋ ನ್ಯಾಯ್ ಯಾತ್ರೆಯು ನಾಳೆ ತಡರಾತ್ರಿ ಪಶ್ಚಿಮ ಬಂಗಾಳವನ್ನು ಪ್ರವೇಶಿಸಲು ಎದುರು ನೋಡುತ್ತಿದೆ. ಜನವರಿ 26 ಮತ್ತು 27 ರಂದು ವಿರಾಮದ ದಿನಗಳು, ಯಾತ್ರೆಯು 28 ರಂದು ಪುನರಾರಂಭವಾಗಲಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಹೋರಾಟ: ಮಮತಾ ಬ್ಯಾನರ್ಜಿ

ಯಾತ್ರೆ ಬಂಗಾಳಕ್ಕೆ ಪ್ರವೇಶಿಸುವ ಬಗ್ಗೆ ತನಗೆ ತಿಳಿಸದಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಟೀಕಿಸಿದ್ದ ಮಮತಾ “ಅವರು ನನ್ನ ರಾಜ್ಯಕ್ಕೆ ಬರುತ್ತಿದ್ದಾರೆ. ಆದರೆ ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ನನಗೆ ತಿಳಿಸುವ ಸೌಜನ್ಯ ತೋರಿಲ್ಲ ಎಂದು ಟಿಎಂಸಿ ಮುಖ್ಯಸ್ಥೆ ಗುಡುಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 24 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ