AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಮೇ 2ರಂದು ಮಮತಾ ಬ್ಯಾನರ್ಜಿಯನ್ನು ಜನರು ಬಂಗಾಳದಿಂದ ಹೊರಗೆ ಕಳಿಸಲಿದ್ದಾರೆ: ನರೇಂದ್ರ ಮೋದಿ

Narendra Modi in Bankura: ನೀವು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಕಿತ್ತೆಸೆಯಬೇಕಾದ್ದರೆ ಬಿಜೆಪಿಗೆ ಮತ ಹಾಕಿ. ಬಂಗಾಳದ ಅಭಿವೃದ್ದಿ ನಿಮ್ಮ ಆದ್ಯತೆಯಾಗಿದ್ದರೆ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

West Bengal Elections 2021: ಮೇ 2ರಂದು ಮಮತಾ ಬ್ಯಾನರ್ಜಿಯನ್ನು ಜನರು ಬಂಗಾಳದಿಂದ ಹೊರಗೆ ಕಳಿಸಲಿದ್ದಾರೆ: ನರೇಂದ್ರ ಮೋದಿ
ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 21, 2021 | 5:29 PM

Share

ಬಂಕುರಾ : ಪಶ್ಚಿಮಬಂಗಾಳದ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಬಂಕುರಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಶೋಲ್ ಪೊರಿಬರ್ತನ್ (ನಿಜವಾದ ಬದಲಾವಣೆ) ತರುವುದಾಗಿ ಹೇಳಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮತಾ ಬ್ಯಾನರ್ಜಿ ಹಲವಾರು ಹುಸಿ ಭರವಸೆಯನ್ನು ನೀಡಿದ್ದು, ಕಳೆದ 10 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ದೀದಿ ನೀವು ಖೇಲಾ ಹೋಬೆ (ನಾವು ಆಡ್ತೀವೆ) ಎಂದು ಹೇಳುತ್ತಿದ್ದೀರಿ. ಆದರೆ ಬಂಗಾಳದ ಜನರು ಖೇಲಾ ಶೇಶ್ ಹೋಬೆ (ಆಟ ಮುಗಿಸ್ತೀವಿ) ಎನ್ನುತ್ತಿದ್ದಾರೆ ಎಂದಿದ್ದಾರೆ ಮೋದಿ.

ನೀವು ನನಗೆ ಹೊಡೆಯಬಹುದು, ಅದಕ್ಕಾಗಿ ನಿಮಗೆ ನನ್ನ ಫೋಟೊ ಮಾತ್ರ ಸಾಕು. ಆದರೆ ನಾನು ಬಂಗಾಳದ ಅಭಿವೃದ್ಧಿಗೆ ಏಟು ನೀಡಲು ಬಿಡಲಾರೆ. ಬಂಕುರಾದ ಈ ಜನರೇ ಸಾಕ್ಷಿ. ಬಂಗಾಳದ ಜನರು ಮೇ ತಿಂಗಳಲ್ಲಿ ನಿಮ್ಮನ್ನು ಹೊರಗೆ ಕಳುಹಿಸುತ್ತಾರೆ. ನಾನು ಇಲ್ಲಿಗೆ ಲೋಕಸಭಾ ಚುನಾವಣೆಗೆ ಮುನ್ನ ಬಂದಿದ್ದೆ. ಆಗ ದೀದಿ ಯಾವ ರೀತಿ ಇಲ್ಲಿನ ರಸ್ತೆಗಳನ್ನು ಬಂದ್ ಮಾಡಿದ್ದರು ಎಂದು ಗೊತ್ತಿದೆ. ನಾವು ರ‍್ಯಾಲಿ ಸ್ಥಳಕ್ಕೆ ತಲುಪದಂತೆ ತಡೆಯಲು ಪೊಲೀಸರನ್ನು ನಿಯೋಜಿಸಿದ್ದರು.

ಇವತ್ತು ನಾನು ಬಂಕುರಾಗೆ ಬಂದಿದ್ದು, ರಾಮ ರಾಮ ಎಂದು ರಾಮಪದ ಜಪಿಸುವ ಸಹೋದರ ಮತ್ತು ಸಹೋದರಿ ಯರನ್ನುದ್ದೇಶಿಸಿ ಮಾತನಾಡಲಿದ್ದೇನೆ. ಇವತ್ತು ರಾಮಪದ ಜಗತ್ತಿನಲ್ಲಿ ಎಲ್ಲರಿಗೂ ಗೊತ್ತು. ನೀವು ರಾಮಪದದಲ್ಲಿ ನೀವು ರಾಮನನ್ನು ಕರೆದರೆ ಎಲ್ಲ ಮನೆಯಿಂದಲೂ ರಾಮ ಬರುತ್ತಾನೆ.

ಇಲ್ಲಿನ ರೈತರು ವರ್ಷಕ್ಕೆ ಒಂದೇ ಒಂದು ಬೆಳೆಯುವಂತೆ ಬಲವಂತ ಮಾಡಲಾಗುತ್ತಿದೆ. ಇಲ್ಲಿನ ನೀರಾವರಿ ಯೋಜನೆ ಅರ್ಧಕ್ಕೆ ನಿಂತಿರುವುದೇಕೆ? . ಇಲ್ಲಿನ ಯುವ ಜನಾಂಗ ಚಿಂತಿತರಾಗಿದ್ದಾರೆ. ಕೆಲಸ, ಕೈಗಾರಿಕೆ, ಹೂಡಿಕೆ ಎಲ್ಲಿದೆ ದೀದಿ? ಇಲ್ಲಿ ದೀದಿ ಮತ್ತು ಅವರ ಸರ್ಕಾರ 10 ವರ್ಷಗಳಲ್ಲಿ ಯಾವ ರೀತಿ ಆಟವಾಡಿದೆ ಎಂಬುದಕ್ಕೆ ಇಲ್ಲಿನ ಪ್ರದೇಶಗಳೇ ಸಾಕ್ಷಿ. ತೃಣಮೂಲ ಸರ್ಕಾರದ ಆಟದಲ್ಲಿ ಅಜಿತ್ ಮೊರ್ಮೂ ಸೇರಿದಂತೆ ಹಲವಾರು ಬುಡಕಟ್ಟು ಜನಾಂಗದ ನಮ್ಮ ಸಂಗಾತಿಗಳು ಹುತಾತ್ಮರಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.  ನೀವು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಕಿತ್ತೆಸೆಯಬೇಕಾದ್ದರೆ ಬಿಜೆಪಿಗೆ ಮತ ಹಾಕಿ. ಬಂಗಾಳದ ಅಭಿವೃದ್ದಿ ನಿಮ್ಮ ಆದ್ಯತೆಯಾಗಿದ್ದರೆ ಬಿಜೆಪಿಗೆ ಮತ ನೀಡಿ ಎಂದಿದ್ದಾರೆ.

ಯಾವುದಾದರೂ ಯೋಜನೆ ಬಂದರೆ ಟಿಎಂಸಿ ಅಲ್ಲಿ ಹಗರಣ ನಡೆಸುವ ಅವಕಾಶ ಹುಡುಕುತ್ತದೆ. ಬಿಜೆಪಿ ಯೋಜನೆಗಳನ್ನು ಜಾರಿ ಮಾಡಲು ಬಯಸುತ್ತಿದೆ. ಆದರೆ ಟಿಎಂಸಿ ಹಗರಣ ಮಾಡಲು ಬಯಸುತ್ತಿದೆ. ಎಲ್ಲಿಯಾದರೂ ಯಾವುದೇ ಯೋಜನೆ ಇಲ್ಲದೆ, ಅಲ್ಲಿ ಹಗರಣ ನಡೆಸಲು ಅವಕಾಶ ಹುಡುಕುತ್ತಿರುತ್ತದೆ ಟಿಎಂಸಿ ಎಂದು ಮೋದಿ ಆರೋಪಿಸಿದ್ದಾರೆ.

 ಇದನ್ನೂ ಓದಿ:  Assam Elections 2021: ಕಾಂಗ್ರೆಸ್ ಟೀ ರಾಜಕಾರಣ ಮಾಡುತ್ತಿದೆ, ಬಿಜೆಪಿ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬದ್ಧ: ನರೇಂದ್ರ ಮೋದಿ

Published On - 5:24 pm, Sun, 21 March 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!