AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ರಾಜೀನಾಮೆಯಿಂದಾಗಿ ಖಾಲಿಯಿರುವ ಭಬಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ

West Assembly Elections 2021: ಮುಖ್ಯಮಂತ್ರಿ ಆರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕು. ನಾನು ಈ ವರ್ಷದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಇಂದು, ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದರಿಂದ ಅವರು ಭಬಾನಿಪುರದಿಂದ ಚುನಾಯಿತರಾಗುತ್ತಾರೆ ಎಂದು ಶೋಬನ್​ದೇಬ್ ಚಟ್ಟೋಪಾಧ್ಯಾಯ್ ಹೇಳಿದ್ದಾರೆ.

ಶಾಸಕರ ರಾಜೀನಾಮೆಯಿಂದಾಗಿ ಖಾಲಿಯಿರುವ ಭಬಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
|

Updated on:May 21, 2021 | 6:06 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶೋಬನ್​ದೇಬ್ ಚಟ್ಟೋಪಾಧ್ಯಾಯ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಸಾಧ್ಯತೆ ಇದೆ. ಪಕ್ಷದ ಮುಖಂಡ ಮತ್ತು ರಾಜ್ಯ ಸಚಿವ ಪಾರ್ಥ ಚಟರ್ಜಿ ಮತ್ತು ಇತರರ ಸಮ್ಮುಖದಲ್ಲಿ ಚಟ್ಟೋಪಾಧ್ಯಾಯ್ ತಮ್ಮ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂದ್ಯೋಪಾಧ್ಯಾಯರಿಗೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಆರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕು. ನಾನು ಈ ವರ್ಷದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಇಂದು, ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದರಿಂದ ಅವರು ಭಬಾನಿಪುರದಿಂದ ಚುನಾಯಿತರಾಗುತ್ತಾರೆ.

ವೈಯಕ್ತಿಕವಾಗಿ ಮತ್ತು ನಮ್ಮ ಪಕ್ಷ ಮಮತಾ ಬ್ಯಾನರ್ಜಿ ಅವರು ಭಬಾನಿಪುರದಿಂದ ಸ್ಪರ್ಧಿಸಬೇಕೆಂದು ಬಯಸಿದೆ. ಅವರು ಈಗ ನನ್ನ ರಾಜಕೀಯ ಜೀವನದ ಮುಂದಿನ ಹಾದಿಯನ್ನು ನಿರ್ಧರಿಸುತ್ತಾರೆ ಎಂದು ರಾಜೀನಾಮೆ ನೀಡಿದ ನಂತರ ಚಟ್ಟೋಪಾಧ್ಯಾಯ ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯ ಅದ್ಭುತ ವಿಜಯದ ಹೊರತಾಗಿಯೂ, ಬ್ಯಾನರ್ಜಿ ನಂದಿಗ್ರಾಮದಲ್ಲಿ ತನ್ನ ಮಾಜಿ ಶಿಷ್ಯ ಪ್ರತಿಸ್ಪರ್ಧಿ ಸುವೇಂದು ಅಧಿಕಾರಿಯ ವಿರುದ್ಧ ಪರಾಭವಗೊಂಡಿದ್ದರು.

ಮುಖ್ಯಮಂತ್ರಿಯ ಪದವಿಯಲ್ಲಿ ಮುಂದುವರಿಯಬೇಕಾದರೆ ಮಮತಾ ಬ್ಯಾನರ್ಜಿ ಆರು ತಿಂಗಳಲ್ಲಿ ವಿಧಾನಸಭೆಗೆ  ಆಯ್ಕೆಯಾಗಬೇಕಿದೆ.

ನಂದಿಗ್ರಾಮದಲ್ಲಿ ಬ್ಯಾನರ್ಜಿ 1,200 ಮತಗಳ ಅಂತರದಿಂದ ಜಯಗಳಿಸಿದ್ದಾರೆಂದು ಆರಂಭದಲ್ಲಿ ವರದಿಯಾಗಿತ್ತು ಆದರೆ ಕೆಲವೇ ಗಂಟೆಗಳ ನಂತರ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿಯನ್ನು 1,956 ಮತಗಳಿಂದ ವಿಜೇತರಾಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿತ್ತು.

ಏತನ್ಮಧ್ಯೆ, ಮೂಲಗಳ ಪ್ರಕಾರ ಕೊವಿಡ್ -19 ಕಾರಣದಿಂದ ಇಬ್ಬರು ಅಭ್ಯರ್ಥಿಗಳು ಸಾವನ್ನಪ್ಪಿದ ನಂತರ ಮುರ್ಷಿದಾಬಾದ್ ಜಿಲ್ಲೆಯ ಎರಡು ಸ್ಥಾನಗಳಿಗೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ ಟಿಎಂಸಿ ಚಟ್ಟೋಪಾಧ್ಯಾಯರನ್ನು ಬೇರೆ ಕ್ಷೇತ್ರದಿಂದ ಕಣಕ್ಕಿಳಿಸಬಹುದು. ಚಟ್ಟೋಪಾಧ್ಯಾಯರನ್ನು ರಾಜ್ಯಸಭಾ ಸಂಸದರನ್ನಾಗಿ ಮಾಡಬಹುದು ಎಂದು ಪಕ್ಷದ ಮೂಲಗಳು ಹೇಳಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ನಮಗೆ ಮಾತಾಡೋಕೆ ಬಿಡಲಿಲ್ಲ ಎಂದಿದ್ದ ಮಮತಾ ಬ್ಯಾನರ್ಜಿಗೆ ಮಾಜಿ ಆಪ್ತನಿಂದ ತಿರುಗೇಟು; ವ್ಯಂಗ್ಯ ಮಾಡಿದ ಸುವೇಂದು ಅಧಿಕಾರಿ

ನಮ್ಮ ಕಚೇರಿಗೆ ಬಂದು ಮಮತಾ ಬ್ಯಾನರ್ಜಿ ಭಯದ ವಾತಾವರಣ ನಿರ್ಮಾಣ ಮಾಡಿದರು: ಸಿಬಿಐ

Published On - 6:04 pm, Fri, 21 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ