AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ ಭೇಟಿ, 45 ನಿಮಿಷ ಚರ್ಚೆ; 2024ರ ಹೊತ್ತಿಗೆ ಪ್ರಧಾನಿ ಮೋದಿ V/S ದೇಶ ಎಂದಾಗುತ್ತದೆ ಎಂದ ದೀದಿ

Sonia Gandhi: ಸೋನಿಯಾ ಗಾಂಧಿಯವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, ನಿಜಕ್ಕೂ ಇದೊಂದು ಅತ್ಯುತ್ತಮವಾದ, ಧನಾತ್ಮಕವಾದ ಭೇಟಿ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ ಭೇಟಿ, 45 ನಿಮಿಷ ಚರ್ಚೆ; 2024ರ ಹೊತ್ತಿಗೆ ಪ್ರಧಾನಿ ಮೋದಿ V/S ದೇಶ ಎಂದಾಗುತ್ತದೆ ಎಂದ ದೀದಿ
ಇಂದು ಭೇಟಿಯಾದ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jul 28, 2021 | 6:06 PM

Share

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi)ಯವರನ್ನು ಭೇಟಿಯಾಗಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯ ನಂತರ ಇದು ಇವರಿಬ್ಬರ ಮೊದಲ ಭೇಟಿಯಾಗಿದೆ. ಕಳೆದ ಎರಡು ದಿನಗಳಿಂದಲೂ ದೆಹಲಿ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಪ್ರತಿಪಕ್ಷಗಳ ನಾಯಕರ ಭೇಟಿಯಲ್ಲಿ ತೊಡಗಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿದ್ದಾರೆ. ಇಂದು ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 2024ರ ಲೋಕಸಭಾ ಚುನಾವಣೆ(Lok Sabha Election)ಗಾಗಿ ಪ್ರತಿಪಕ್ಷಗಳನ್ನೆಲ್ಲ ಬಿಜೆಪಿ ವಿರುದ್ಧ ಒಗ್ಗೂಡಿಸುತ್ತಿರುವ ಮಮತಾ ಬ್ಯಾನರ್ಜಿ, ಇದೊಂದು ಮಹತ್ವದ ಭೇಟಿ ಎಂದು ಹೇಳಿಕೊಂಡಿದ್ದಾರೆ.

ಸೋನಿಯಾ ಗಾಂಧಿಯವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, ನಿಜಕ್ಕೂ ಇದೊಂದು ಅತ್ಯುತ್ತಮವಾದ, ಧನಾತ್ಮಕವಾದ ಭೇಟಿ ಎಂದು ಹೇಳಿದ್ದಾರೆ. ಹಾಗೇ, ಬಿಜೆಪಿಯನ್ನು ಸೋಲಿಸಲು ಎಲ್ಲ ಪ್ರತಿಪಕ್ಷಗಳೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ನಿನ್ನೆ ಕಾಂಗ್ರೆಸ್ ನಾಯಕರಾದ ಕಮಲನಾಥ್​ ಮತ್ತು ಆನಂದ ಶರ್ಮಾರನ್ನೂ ಭೇಟಿಯಾಗಿದ್ದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಇಡೀ ದೇಶದಲ್ಲಿ ಆಟ ಶುರುವಾಗಿದೆ. 2024ರ ಲೋಕಸಭೆ ಚುನಾವಣೆ ಹೊತ್ತಿಗೆ ಪ್ರಧಾನಿ ಮೋದಿ ವರ್ಸಸ್​ ದೇಶ ಎಂಬಂತೆ ಆಗುತ್ತದೆ. ಈ ಮುಂಗಾರು ಅಧಿವೇಶನ ಮುಗಿಯುತ್ತಿದ್ದಂತೆ ನಾವು ಪ್ರತಿಪಕ್ಷದವರೆಲ್ಲ ಮತ್ತೊಮ್ಮೆ ಒಗ್ಗಟ್ಟಾಗಿ ಕುಳಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್​ನಿಂದ ಪ್ರಯಾಣಿಕರ ವಾಹನಗಳ ಬೆಲೆಯಲ್ಲಿ ಏರಿಕೆ ಘೋಷಣೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ