AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ
ಶಂಖನಾದ ಮಾಡಿ, ಪಾದಯಾತ್ರೆ ಪ್ರಾರಂಭಿಸಿದ ಮಮತಾ ಬ್ಯಾನರ್ಜಿ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 23, 2021 | 2:11 PM

ಕೋಲ್ಕತ್ತಾ: ಸದ್ಯ ಪಶ್ಚಿಮ ಬಂಗಾಳದಲ್ಲಿ ಸುಭಾಷ್​ಚಂದ್ರ ಬೋಸ್​ರ 125ನೇ ಜನ್ಮ ದಿನಾಚರಣೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆಯ ವಿಚಾರವಾಗಿ ಮಾರ್ಪಟ್ಟಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಾಕ್ಕೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಶ್ಯಾಮ್ ಬಜಾರ್​ನಿಂದ ಕೋಲ್ಕತ್ತಾದ ರೆಡ್​ ರೋಡ್​ವರೆಗೆ ಸುಮಾರು 6 ಕಿಮೀ ಪಾದಯಾತ್ರೆ  ಪ್ರಾರಂಭ ಮಾಡಿದ್ದಾರೆ. ಇನ್ನು ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಮಮತಾ ಬ್ಯಾನರ್ಜಿ ಶಂಖನಾದ ಮಾಡಿದರು. ಬಳಿಕ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಜತೆ ಮೆರವಣಿಗೆ ಸಾಗಿದರು.

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ. ನಾನು ನೇತಾಜಿಯವರ ದೇಶಪ್ರೇಮದ ಬಗ್ಗೆ ಕೇಳಿದ್ದೇನೆ. ನೇತಾಜಿ ಎಂದರೆ ಅವರು ತತ್ವಶಾಸ್ತ್ರ, ಅವರೊಂದು ಭಾವನೆ.. ಧರ್ಮಗಳ ಐಕ್ಯತೆಯಲ್ಲಿ ಅವರು ನಂಬಿಕೆ ಇಟ್ಟಿದ್ದರು. ಅವರ ಜನ್ಮದಿನವನ್ನು ನಾವ್ಯಾಕೆ ದೇಶನಾಯಕ್​ ದಿವಸ್​ ಎಂದು ಘೋಷಿಸಬಾರದು? ಸುಭಾಷ್​ ಚಂದ್ರ ಬೋಸ್​ರನ್ನು ದೇಶನಾಯಕ್​ ಎಂದು ರವೀಂದ್ರನಾಥ್ ಟಾಗೋರ್​ರೇ ಕರೆದಿದ್ದರು ಎಂದು ಹೇಳಿದ್ದಾರೆ.

ಹಾಗೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡೇ ಪಶ್ಚಿಮಬಂಗಾಳಕ್ಕೆ ಬರುತ್ತಿದ್ದಾರೆ ಎಂದೂ ಟೀಕಿಸಿದ್ದಾರೆ.

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು