AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ
ಶಂಖನಾದ ಮಾಡಿ, ಪಾದಯಾತ್ರೆ ಪ್ರಾರಂಭಿಸಿದ ಮಮತಾ ಬ್ಯಾನರ್ಜಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:11 PM

Share

ಕೋಲ್ಕತ್ತಾ: ಸದ್ಯ ಪಶ್ಚಿಮ ಬಂಗಾಳದಲ್ಲಿ ಸುಭಾಷ್​ಚಂದ್ರ ಬೋಸ್​ರ 125ನೇ ಜನ್ಮ ದಿನಾಚರಣೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆಯ ವಿಚಾರವಾಗಿ ಮಾರ್ಪಟ್ಟಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಾಕ್ಕೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಶ್ಯಾಮ್ ಬಜಾರ್​ನಿಂದ ಕೋಲ್ಕತ್ತಾದ ರೆಡ್​ ರೋಡ್​ವರೆಗೆ ಸುಮಾರು 6 ಕಿಮೀ ಪಾದಯಾತ್ರೆ  ಪ್ರಾರಂಭ ಮಾಡಿದ್ದಾರೆ. ಇನ್ನು ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಮಮತಾ ಬ್ಯಾನರ್ಜಿ ಶಂಖನಾದ ಮಾಡಿದರು. ಬಳಿಕ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಜತೆ ಮೆರವಣಿಗೆ ಸಾಗಿದರು.

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ. ನಾನು ನೇತಾಜಿಯವರ ದೇಶಪ್ರೇಮದ ಬಗ್ಗೆ ಕೇಳಿದ್ದೇನೆ. ನೇತಾಜಿ ಎಂದರೆ ಅವರು ತತ್ವಶಾಸ್ತ್ರ, ಅವರೊಂದು ಭಾವನೆ.. ಧರ್ಮಗಳ ಐಕ್ಯತೆಯಲ್ಲಿ ಅವರು ನಂಬಿಕೆ ಇಟ್ಟಿದ್ದರು. ಅವರ ಜನ್ಮದಿನವನ್ನು ನಾವ್ಯಾಕೆ ದೇಶನಾಯಕ್​ ದಿವಸ್​ ಎಂದು ಘೋಷಿಸಬಾರದು? ಸುಭಾಷ್​ ಚಂದ್ರ ಬೋಸ್​ರನ್ನು ದೇಶನಾಯಕ್​ ಎಂದು ರವೀಂದ್ರನಾಥ್ ಟಾಗೋರ್​ರೇ ಕರೆದಿದ್ದರು ಎಂದು ಹೇಳಿದ್ದಾರೆ.

ಹಾಗೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡೇ ಪಶ್ಚಿಮಬಂಗಾಳಕ್ಕೆ ಬರುತ್ತಿದ್ದಾರೆ ಎಂದೂ ಟೀಕಿಸಿದ್ದಾರೆ.

Follow Us
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ