AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ
ಶಂಖನಾದ ಮಾಡಿ, ಪಾದಯಾತ್ರೆ ಪ್ರಾರಂಭಿಸಿದ ಮಮತಾ ಬ್ಯಾನರ್ಜಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:11 PM

Share

ಕೋಲ್ಕತ್ತಾ: ಸದ್ಯ ಪಶ್ಚಿಮ ಬಂಗಾಳದಲ್ಲಿ ಸುಭಾಷ್​ಚಂದ್ರ ಬೋಸ್​ರ 125ನೇ ಜನ್ಮ ದಿನಾಚರಣೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆಯ ವಿಚಾರವಾಗಿ ಮಾರ್ಪಟ್ಟಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಾಕ್ಕೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಶ್ಯಾಮ್ ಬಜಾರ್​ನಿಂದ ಕೋಲ್ಕತ್ತಾದ ರೆಡ್​ ರೋಡ್​ವರೆಗೆ ಸುಮಾರು 6 ಕಿಮೀ ಪಾದಯಾತ್ರೆ  ಪ್ರಾರಂಭ ಮಾಡಿದ್ದಾರೆ. ಇನ್ನು ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಮಮತಾ ಬ್ಯಾನರ್ಜಿ ಶಂಖನಾದ ಮಾಡಿದರು. ಬಳಿಕ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಜತೆ ಮೆರವಣಿಗೆ ಸಾಗಿದರು.

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ. ನಾನು ನೇತಾಜಿಯವರ ದೇಶಪ್ರೇಮದ ಬಗ್ಗೆ ಕೇಳಿದ್ದೇನೆ. ನೇತಾಜಿ ಎಂದರೆ ಅವರು ತತ್ವಶಾಸ್ತ್ರ, ಅವರೊಂದು ಭಾವನೆ.. ಧರ್ಮಗಳ ಐಕ್ಯತೆಯಲ್ಲಿ ಅವರು ನಂಬಿಕೆ ಇಟ್ಟಿದ್ದರು. ಅವರ ಜನ್ಮದಿನವನ್ನು ನಾವ್ಯಾಕೆ ದೇಶನಾಯಕ್​ ದಿವಸ್​ ಎಂದು ಘೋಷಿಸಬಾರದು? ಸುಭಾಷ್​ ಚಂದ್ರ ಬೋಸ್​ರನ್ನು ದೇಶನಾಯಕ್​ ಎಂದು ರವೀಂದ್ರನಾಥ್ ಟಾಗೋರ್​ರೇ ಕರೆದಿದ್ದರು ಎಂದು ಹೇಳಿದ್ದಾರೆ.

ಹಾಗೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡೇ ಪಶ್ಚಿಮಬಂಗಾಳಕ್ಕೆ ಬರುತ್ತಿದ್ದಾರೆ ಎಂದೂ ಟೀಕಿಸಿದ್ದಾರೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ