AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್, ಕಮ್ಯೂನಿಸ್ಟರು ಬಿಜೆಪಿ ಪರ ಕೆಲಸ ಮಾಡ್ತಿದಾರೆ, ಅವರಿಗೆ ವೋಟ್ ಹಾಕಬೇಡಿ: ಮಮತಾ ಬ್ಯಾನರ್ಜಿ ಕರೆ

Lok Sabha Elections 2024: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಟಿಎಂಸಿ, ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಪರಸ್ಪರ ಬದ್ಧವೈರಿಗಳೇ ಆಗಿವೆ. ಮಮತಾ ಬ್ಯಾನರ್ಜಿ ಚುನಾವಣಾ ಭಾಷಣವೊಂದರಲ್ಲಿ ಮಾತನಾಡುತ್ತಾ, ಬಂಗಾಳದಲ್ಲಿ ಬಿಜೆಪಿಯನ್ನು ಗೆಲ್ಲಲು ಬಯಸದವರು ಕಾಂಗ್ರೆಸ್ ಮತ್ತು ಸಿಪಿಐಎಂಗೆ ಮತ ಹಾಕಬಾರದು ಎಂದು ಕರೆ ನೀಡಿದ್ದಾರೆ. ಈ ಎರಡು ಪಕ್ಷಗಳು ಬಂಗಾಳದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿವೆ. ಈ ಪಕ್ಷಗಳಿಗೆ ಮತ ಹಾಕದಿರಿ ಎಂದು ಮುರ್ಶಿದಾಬಾದ್​ನಲ್ಲಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್, ಕಮ್ಯೂನಿಸ್ಟರು ಬಿಜೆಪಿ ಪರ ಕೆಲಸ ಮಾಡ್ತಿದಾರೆ, ಅವರಿಗೆ ವೋಟ್ ಹಾಕಬೇಡಿ: ಮಮತಾ ಬ್ಯಾನರ್ಜಿ ಕರೆ
ಮಮತಾ ಬ್ಯಾನರ್ಜಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 19, 2024 | 6:34 PM

Share

ಕೋಲ್ಕತಾ, ಏಪ್ರಿಲ್ 19: ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟ ರಚನೆ ಆಗಲು ನಾನೇ ಕಾರಣ. ಇಂಡಿಯಾ (INDIA) ಎಂದು ಮೈತ್ರಿಕೂಟಕ್ಕೆ ಹೆಸರು ಸೂಚಿಸಿದ್ದೇ ನಾನು. ಆದರೆ ಪಶ್ಚಿಮ ಬಂಗಾಳದಲ್ಲಿ ಸಿಪಿಐಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ. ಬಂಗಾಳದಲ್ಲಿ ಯಾರೂ ಕೂಡ ಈ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕರೆ ನೀಡಿರುವ ಘಟನೆ ವರದಿಯಾಗಿದೆ. ಮುರ್ಷಿದಾಬಾದ್​ನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಭಾಷಣ ಮಾಡುವ ವೇಳೆ ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಕೂಟದಲ್ಲಿನ ಒಡಕನ್ನು ಜಾಹೀರುಗೊಳಿಸಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ನಾನೇ ಇಂಡಿಯಾ ಮೈತ್ರಿಕೂಟ ಮಾಡಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಯಾವ ಇಂಡಿಯಾ ಕೂಟ ಇಲ್ಲ. ನೀವು ಬಿಜೆಪಿಯನ್ನು ಸೋಲಿಸಬೇಕೆಂದಿದ್ದರೆ ಕಾಂಗ್ರೆಸ್ ಮತ್ತು ಸಿಪಿಐಎಂ ಪಕ್ಷಕ್ಕೆ ಮತ ಹಾಕಬೇಡಿ. ಈ ಎರಡು ಪಕ್ಷಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ: ದೂರು ದಾಖಲು

ಮುರ್ಶಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ದಿನದಂದು ಸಂಭವಿಸಿದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ದೀದಿ, ಇದು ಪೂರ್ವಯೋಜಿತ ಕೃತ್ಯವಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತು ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಮುರ್ಶಿದಾಬಾದ್​ನಲ್ಲಿ ಹಿಂದೂಗಳನ್ನು ರಕ್ಷಿಸಲು ಮುಖ್ಯಮಂತ್ರಿ ವಿಫಲರಾಗಿದ್ದಾರೆ. ಇದರ ಜವಾಬ್ದಾರಿ ಅವರು ಹೊರಬೇಕು. ಅವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಬಿಜೆಪಿ ಆರೋಪಿಸುತ್ತಿದೆ.

ಇದನ್ನೂ ಓದಿ: Lok Sabha Polls: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ ಮತದಾನ ಬಹಿಷ್ಕಾರ ಬಹುತೇಕ ಯಶಸ್ವಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈಗ ಟಿಎಂಸಿಗೆ ಪರ್ಯಾಯ ಶಕ್ತಿಯಾಗಿ ಬೆಳೆದಿದೆ. ಒಂದು ಕಾಲದಲ್ಲಿ ಮಾರ್ಕ್ಸ್​ವಾದಿ ಕಮ್ಯೂನಿಸ್ಟ್ ಪಕ್ಷದ ಪೂರ್ಣ ಪ್ರಾಬಲ್ಯ ಇದ್ದ ಈ ರಾಜ್ಯ ಕಳೆದ ಎರಡು ದಶಕದಿಂದ ಟಿಎಂಸಿಮಯವಾಗಿದೆ. ಪ್ರಮುಖ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈಗ ನಾಲ್ಕನೇ ಸ್ಥಾನಕ್ಕೆ ಸರ್ಕಸ್ ನಡೆಸುವಂತಾಗಿದೆ. ಒಂದು ಕಾಲದಲ್ಲಿ ಹೇಳಹೆಸರಿಲ್ಲದಂತಿದ್ದ ಬಿಜೆಪಿ ಪಕ್ಷ ಈಗ ಟಿಎಂಸಿಗೆ ಪರ್ಯಾಯವಾಗುವ ನಿಟ್ಟಿನಲ್ಲಿ ಬೆಳೆಯುತ್ತಿದೆ.

ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳ ವಿರುದ್ಧವೇ ಹೋರಾಡುತ್ತ ಅಧಿಕಾರಕ್ಕೆ ಬಂದಿದ್ದು ಟಿಎಂಸಿ. ಈಗ ಈ ಮೂರು ಪಕ್ಷಗಳೂ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವುದು ಕುತೂಹಲ. ಹಾಗೆಯೇ, ಕೇರಳದಲ್ಲಿ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಹಾವು ಮುಂಗೂಸಿ ಇದ್ದಂತೆ. ಆದರೂ ಇವು ಇಂಡಿಯಾ ಮೈತ್ರಿಕೂಟದ ಭಾಗವಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ