AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಮುರ್ಷಿದಾಬಾದ್‌ಗೆ ಭೇಟಿ ನೀಡದಿದ್ದಕ್ಕೆ ಬಿಜೆಪಿ ಟೀಕೆ

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಏಪ್ರಿಲ್ 11ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು. ತಮಿಳುನಾಡು ರಾಜ್ಯಪಾಲರು ಮತ್ತು ವಕ್ಫ್ ಕಾನೂನನ್ನು ಒಳಗೊಂಡ ಸುಪ್ರೀಂ ಕೋರ್ಟ್ ಆದೇಶಗಳ ಹಿನ್ನೆಲೆಯಲ್ಲಿ ನ್ಯಾಯಾಂಗವು ಕಾರ್ಯಾಂಗ ಮತ್ತು ಸಂಸದೀಯ ಜಾಗವನ್ನು ಅತಿಕ್ರಮಿಸುತ್ತಿದೆ ಎಂಬ ಇತ್ತೀಚಿನ ಆರೋಪಗಳು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಧ್ವನಿಸಿದವು.

ಮಮತಾ ಬ್ಯಾನರ್ಜಿ ಮುರ್ಷಿದಾಬಾದ್‌ಗೆ ಭೇಟಿ ನೀಡದಿದ್ದಕ್ಕೆ ಬಿಜೆಪಿ ಟೀಕೆ
Mamta Banerjee
ಸುಷ್ಮಾ ಚಕ್ರೆ
|

Updated on: Apr 21, 2025 | 6:04 PM

Share

ಕೊಲ್ಕತ್ತಾ, ಏಪ್ರಿಲ್ 21: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅವರ ಮೇಲೆ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತೀವ್ರ ವಾಗ್ದಾಳಿ ನಡೆಸಿದ್ದು, ಹಿಂದೂಗಳ ಮೇಲಿನ ದ್ವೇಷದಿಂದಾಗಿ ಮುರ್ಷಿದಾಬಾದ್ ಹಿಂಸಾಚಾರದಲ್ಲಿ ಸಾವನ್ನಪ್ಪಿದವರು ಮತ್ತು ಗಾಯಗೊಂಡವರನ್ನು ಅವರು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.

ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಸಂಸದ ಮತ್ತು ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, “ಮಮತಾ ಬ್ಯಾನರ್ಜಿ ಹಿಂದೂಗಳನ್ನು ದ್ವೇಷಿಸುತ್ತಾರೆ” ಎಂದು ಟೀಕಿಸಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ಮುರ್ಷಿದಾಬಾದ್‌ಗೆ ಮಮತಾ ಬ್ಯಾನರ್ಜಿ ಭೇಟಿ ನೀಡದಿರುವ ಬಗ್ಗೆ ಬಿಜೆಪಿ ನಾಯಕರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

“ಮುಸ್ಲಿಮರ ವಿರುದ್ಧ ಇಂತಹ ದೌರ್ಜನ್ಯಗಳು ನಡೆದಿದ್ದರೆ ಮಮತಾ ಬ್ಯಾನರ್ಜಿ ಅಲ್ಲಿ ಆಂದೋಲನ ನಡೆಸಿ ಅಲ್ಲಿಯೇ ಬೀಡು ಬಿಡುತ್ತಿದ್ದರು. ಆದರೆ, ಹಿಂದೂಗಳನ್ನು ಅವರು ಬೇಕೆಂದೇ ನಿರ್ಲಕ್ಷ್ಯಿಸಿದ್ದಾರೆ” ಎಂದು ಸಂಬಿತ್ ಪಾತ್ರಾ ಆರೋಪಿಸಿದರು.

ಮುರ್ಷಿದಾಬಾದ್ ಹಿಂಸಾಚಾರದ ಇಬ್ಬರು ಮೃತರು ಹಿಂದೂಗಳಾಗಿರುವುದರಿಂದ ಟಿಎಂಸಿ ಅವರನ್ನು ನಿರ್ಲಕ್ಷ್ಯಿಸಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ಏಪ್ರಿಲ್ 11ರಂದು ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು. ಈ ಪ್ರತಿಭಟನೆ ಹಿಂಸಾತ್ಮಕವಾಯಿತು. ಇದರ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದರು, ಹಲವಾರು ಜನರಿಗೆ ಗಾಯಗಳಾಯಿತು ಮತ್ತು ಆಸ್ತಿಪಾಸ್ತಿ ಹಾನಿಯಾಯಿತು. ಸುರಕ್ಷತೆಗಾಗಿ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ