AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ

Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಗ್ಯಾಸ್ ಸಿಲಿಂಡರ್ (LPG) ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ನಡೆಸಿದರು.

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ
ಮಮತಾ ಬ್ಯಾನರ್ಜಿ
Follow us
TV9 Web
| Updated By: ganapathi bhat

Updated on:Apr 06, 2022 | 7:21 PM

ಕೋಲ್ಕತ್ತಾ: ಬಿಜೆಪಿ ಮತ ಕೊಂಡುಕೊಳ್ಳಲು ಬಯಸುತ್ತಿದೆ. ಅವರು ನಿಮ್ಮ ಮತ ಕೊಳ್ಳಲು ಬಂದರೆ ಅವರು ನೀಡುವ ಹಣ ಪಡೆದುಕೊಳ್ಳಿ. ಬಳಿಕ, ನಿಮ್ಮ ಮತವನ್ನು ತೃಣಮೂಲ ಕಾಂಗ್ರೆಸ್ (TMC)ಗೆ ನೀಡಿ ಎಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಇಂದು (ಮಾರ್ಚ್ 7) ಮಮತಾ ಬ್ಯಾನರ್ಜಿ ತಿಳಿಸಿದರು. ನಾವು ಆಟಕ್ಕೆ ತಯಾರಿದ್ದೇವೆ ಎಂದು ಬಿಜೆಪಿ ವಿರುದ್ಧ ಸಮರ ಸಾರಿದರು.

ನರೇಂದ್ರ ಮೋದಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೆಂದು ಹೇಳುತ್ತಾರೆ. ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಇತರ ರಾಜ್ಯಗಳನ್ನು ನೋಡಬೇಕು. ಪಶ್ಚಿಮ ಬಂಗಾಳದಲ್ಲಿ ಮಹಿಳಾ ಸುರಕ್ಷತೆ ಇದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಗ್ಯಾಸ್ ಸಿಲಿಂಡರ್ (LPG) ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ಕೈಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ,  ಸತತವಾಗಿ ಆಗುತ್ತಿರುವ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ನಾವೂ ಪಶ್ಚಿಮ ಬಂಗಾಳಕ್ಕೆ ಹೋಗುತ್ತೇವೆ: ರಾಕೇಶ್ ಟಿಕಾಯತ್ ಸರ್ಕಾರ ಕೋಲ್ಕತ್ತಾಗೆ ತೆರಳಿದೆ. ನಾವು ಕೂಡ ಮಾರ್ಚ್ 13ರಂದು ಪಶ್ಚಿಮ ಬಂಗಾಳಕ್ಕೆ ಹೋಗುತ್ತೇವೆ. ಅಲ್ಲಿನ ರೈತರ ಜೊತೆ ಮಾತನಾಡುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ ಪ್ರಚಾರ ಟಿಎಂಸಿ ಖೇಲ್ ಖತಮ್, ವಿಕಾಸ್ ಶುರು. ಯಾವುದೇ ಭಯವಿಲ್ಲದೆ ಧೈರ್ಯವಾಗಿ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಇಂದು (ಮಾರ್ಚ್ 7) ಹೇಳಿದ್ದಾರೆ. ಕೆಟ್ಟ ಆಡಳಿತದ ವಿರುದ್ಧ ಮತ ಚಲಾಯಿಸಿ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ನನ್ನ ವಿರೋಧಿಗಳು ನಾನು ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ. ನಾವು ಯಾರೊಂದಿಗೆ ಬೆಳೆದೆವೋ ಅವರು ನಮ್ಮ ಗೆಳೆಯರಾಗಿರುತ್ತಾರೆ. ನಾನು ಬಡತನದೊಂದಿಗೆ ಬೆಳೆದವನು. ಹಾಗಾಗಿ, ಬಡವರ ಕಷ್ಟ ನನಗೆ ಅರ್ಥವಾಗುತ್ತದೆ. ನಾನು ನನ್ನ ಗೆಳೆಯರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ’ ಎಂದು ಮೋದಿ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್​ನವರು ಬಹಳ ಅನುಭವಿಗಳು. ಅವರು ಬಹು ಚೆನ್ನಾಗಿ ಆಟ ಆಡುತ್ತಾರೆ. ಭ್ರಷ್ಟಾಚಾರ ಮಾಡಿ ಬಂಗಾಳವನ್ನು ಲೂಟಿ ಮಾಡುತ್ತಾರೆ. ಅಂಫಾನ್​ಗೆ ಕಳುಹಿಸಿದ ಪರಿಹಾರ ಧನದಲ್ಲಿ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ನಡೆಸುವ ಬದಲು, ಜನರನ್ನು ಒಡೆಯುತ್ತಿದ್ದೀರಿ. ಧರ್ಮದ ಹೆಸರಲ್ಲಿ ಜನರನ್ನು ಬೇರ್ಪಡಿಸುತ್ತಿದ್ದೀರಿ ಎಂದು ಟಿಎಂಸಿ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: West Bengal Assembly Elections 2021: ದಿನದ 24 ಗಂಟೆಯೂ ಬಂಗಾಳದ ಅಭಿವೃದ್ಧಿಗೆ ಶ್ರಮಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ: West Bengal Assembly Elelctions 2021: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೇರ್ಪಡೆ

Published On - 6:53 pm, Sun, 7 March 21

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್