AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi – Mamata Meet: ಪ್ರಧಾನಿ ಮೋದಿ ಭೇಟಿ ಮಾಡಿದ ಮಮತಾ ಬ್ಯಾನರ್ಜಿ; ಬಿಎಸ್‌ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಹಿಂಪಡೆಯಲು ಒತ್ತಾಯ

ಭೇಟಿ ನಂತರ ಮಾಧ್ಯಮದವರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಗಡಿ ಭದ್ರತಾ ಪಡೆಗಳ (BSF) ನ್ಯಾಯವ್ಯಾಪ್ತಿಯ ವಿವಾದಾತ್ಮಕ ವಿಸ್ತರಣೆ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

PM Modi - Mamata Meet: ಪ್ರಧಾನಿ ಮೋದಿ ಭೇಟಿ ಮಾಡಿದ ಮಮತಾ ಬ್ಯಾನರ್ಜಿ; ಬಿಎಸ್‌ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಹಿಂಪಡೆಯಲು ಒತ್ತಾಯ
ಮಮತಾ ಬ್ಯಾನರ್ಜಿ- ನರೇಂದ್ರ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 24, 2021 | 6:48 PM

Share

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ನಂತರ ಮಾಧ್ಯಮದವರಲ್ಲಿ ಮಾತನಾಡಿದ ಮಮತಾ, ಗಡಿ ಭದ್ರತಾ ಪಡೆಗಳ (BSF) ನ್ಯಾಯವ್ಯಾಪ್ತಿಯ ವಿವಾದಾತ್ಮಕ ವಿಸ್ತರಣೆ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ. “ರಾಜ್ಯಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ನಾನು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೇನೆ. ನಾವು ಬಿಎಸ್‌ಎಫ್‌ನ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿಷಯದ ಬಗ್ಗೆಯೂ ಮಾತನಾಡಿದ್ದೇವೆ ಮತ್ತು ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದೇವೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ನವದೆಹಲಿಗೆ ನಾಲ್ಕು ದಿನಗಳ ಭೇಟಿಯಲ್ಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ಅವರು ಹಲವಾರು ರಾಜಕಾರಣಿಗಳನ್ನು ಭೇಟಿಯಾದರು ಮತ್ತು ತೃಣಮೂಲದ ರಾಷ್ಟ್ರೀಯ ಹೆಜ್ಜೆಗುರುತನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಂಡರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಾಲ್ಗೊಳ್ಳುವಿಕೆಯ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಅಗತ್ಯವಿದ್ದರೆ ಸಹಾಯ ಮಾಡಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು ಬ್ಯಾನರ್ಜಿ ಹೇಳಿದರು.

“ಅಖಿಲೇಶ್ ಅವರಿಗೆ ನಮ್ಮ ಸಹಾಯ ಅಗತ್ಯವಿದ್ದರೆ ನಾವು ಸಹಾಯವನ್ನು ನೀಡಲು ಸಿದ್ಧರಿದ್ದೇವೆ” ಎಂದು ಅವರು ಹೇಳಿದರು. ಸಮಾಜವಾದಿ ಪಕ್ಷ ಮುಖ್ಯಸ್ಥರು ರಾಜ್ಯದಲ್ಲಿ ಪುನರಾಗಮನ ಮಾಡಲು ಚುನಾವಣಾ ಪೂರ್ವ ಮೈತ್ರಿಗಳನ್ನು ಹೊಲಿಯಲು ವೇಗವಾಗಿ ಚಲಿಸುತ್ತಿದ್ದಾರೆ.

ತೃಣಮೂಲ ಮುಖ್ಯಸ್ಥರು ಈ ತಿಂಗಳ ಕೊನೆಯಲ್ಲಿ ಮುಂಬೈಗೆ ಭೇಟಿ ನೀಡಲಿದ್ದು ಅಲ್ಲಿ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಮಮತಾ ಬ್ಯಾನರ್ಜಿ-ಸುಬ್ರಹ್ಮಣಿಯನ್ ಸ್ವಾಮಿ ಭೇಟಿ; ಕುತೂಹಲ ಮೂಡಿಸಿದ ಬಿಜೆಪಿ ಮುಖಂಡನ ಮಾತುಗಳು

Published On - 6:34 pm, Wed, 24 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ