AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಸಂಸದೆ ಮಹುವಾ ಮೊಯಿತ್ರಾರನ್ನು ತರಾಟೆಗೆ ತೆಗೆದುಕೊಂಡ ಮಮತಾ ಬ್ಯಾನರ್ಜಿ

Mahua Moitra ಮಹುವಾ, ನಾನು ಇಲ್ಲಿ ಸ್ಪಷ್ಟ ಸಂದೇಶವನ್ನು ನೀಡಲು ಬಯಸುತ್ತೇನೆ. ಯಾರ ವಿರುದ್ಧ ಯಾರು ಎಂದು ನೋಡುವ ಅಗತ್ಯವಿಲ್ಲ. ಯಾರಾದರೂ ಒಬ್ಬ ವ್ಯಕ್ತಿಯನ್ನು ಇಷ್ಟಪಡದಿದ್ದರೆ, ಅವನು ಅಥವಾ ಅವಳು ಕೆಲವು ಜನರನ್ನು ಯೂಟ್ಯೂಬ್‌ನಲ್ಲಿ ಅಥವಾ ಪತ್ರಿಕೆಗಳಲ್ಲಿ ಸುದ್ದಿಗಾಗಿ ಕಳುಹಿಸುತ್ತಾರೆ...

ಸಾರ್ವಜನಿಕವಾಗಿ ಸಂಸದೆ ಮಹುವಾ ಮೊಯಿತ್ರಾರನ್ನು ತರಾಟೆಗೆ ತೆಗೆದುಕೊಂಡ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ-ಮೊಹುವಾ ಮೊಯಿತ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 10, 2021 | 6:00 PM

Share

ನದಿಯಾ(ಪಶ್ಚಿಮ ಬಂಗಾಳ): ಸ್ಥಳೀಯ ಸಂಸ್ಥೆಗಳ ಚುನಾವಣೆಗೆ (civic polls) ಮುನ್ನ ನದಿಯಾದಲ್ಲಿ(Nadia)  ಟಿಎಂಸಿ (TMC) ಆಂತರಿಕ ಕಲಹ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾಬ್ಯಾನರ್ಜಿ (Mamata Banerjee) ಅವರು ಗುರುವಾರ ಆಡಳಿತಾತ್ಮಕ ಸಭೆಯಲ್ಲಿ ಕೃಷ್ಣನಗರ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಸಭೆಯಲ್ಲಿ ಬ್ಯಾನರ್ಜಿ ಅವರು ಪಕ್ಷದ ಕೃಷ್ಣನಗರದ ಅಧ್ಯಕ್ಷ (ಸಂಘಟನೆ) ಜಯಂತ್ ಷಾ ಅವರಲ್ಲಿ ಕಳೆದ ತಿಂಗಳು ಪ್ರತಿಭಟನೆಯ ಬಗ್ಗೆ ಕೇಳಿದರು. ಇದನ್ನು ಮೊಯಿತ್ರಾ ಅವರ ಬೆಂಬಲಿಗರು ತಮ್ಮ ವಿರುದ್ಧ ನಡೆಸಿದ್ದರು ಎಂದು ದೂರಿದ್ದರು. ವಸತಿ ಯೋಜನೆಗೆ ಫಲಾನುಭವಿಗಳ ಆಯ್ಕೆ ವಿಚಾರವಾಗಿ ಪ್ರತಿಭಟನೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಮೊಯಿತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ಟಿಎಂಸಿ ಮುಖ್ಯಸ್ಥರು, ಮಹುವಾ, ನಾನು ಇಲ್ಲಿ ಸ್ಪಷ್ಟ ಸಂದೇಶವನ್ನು ನೀಡಲು ಬಯಸುತ್ತೇನೆ. ಯಾರ ವಿರುದ್ಧ ಯಾರು ಎಂದು ನೋಡುವ ಅಗತ್ಯವಿಲ್ಲ. ಯಾರಾದರೂ ಒಬ್ಬ ವ್ಯಕ್ತಿಯನ್ನು ಇಷ್ಟಪಡದಿದ್ದರೆ, ಅವನು ಅಥವಾ ಅವಳು ಕೆಲವು ಜನರನ್ನು ಯೂಟ್ಯೂಬ್‌ನಲ್ಲಿ ಅಥವಾ ಪತ್ರಿಕೆಗಳಲ್ಲಿ ಸುದ್ದಿಗಾಗಿ ಕಳುಹಿಸುತ್ತಾರೆ. ಈ ರೀತಿಯ ರಾಜಕೀಯ ಒಂದು ದಿನಕ್ಕಾಗಬಹುದು ಆದರೆ ಶಾಶ್ವತವಲ್ಲ. ಅದೇ ವ್ಯಕ್ತಿ ಶಾಶ್ವತವಾಗಿ ಒಂದೇ ಸ್ಥಳದಲ್ಲಿ ಇರುತ್ತಾನೆ ಎಂದು ಒಪ್ಪಿಕೊಳ್ಳುವುದು ಸರಿಯಲ್ಲ. ಚುನಾವಣೆ ಬಂದಾಗ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಇಲ್ಲಿ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಒಗ್ಗಟ್ಟಿನ ರಾಜಕೀಯ ಸ್ಪರ್ಧೆಗೆ ತಯಾರಿ ನಡೆಸುವುದಾಗಿ ಮೊಯಿತ್ರಾ ಉತ್ತರಿಸಿದರು. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಬ್ಯಾನರ್ಜಿಯವರು ನದಿಯಾಗೆ ನೀಡಿದ ಮೊದಲ ಭೇಟಿ ಇದಾಗಿದೆ.

ಗೋವಾದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ಮೊಯಿತ್ರಾ ಅವರನ್ನು ಶಾಶ್ವತವಾಗಿ ಕರಾವಳಿ ರಾಜ್ಯಕ್ಕೆ ಸ್ಥಳಾಂತರಿಸಬಹುದು ಮತ್ತು ನದಿಯಾದಲ್ಲಿ ಅವರ ಪಕ್ಷದ ಜವಾಬ್ದಾರಿಗಳಿಂದ ಮುಕ್ತರಾಗಬಹುದು ಎಂದು ಹಿರಿಯ ಟಿಎಂಸಿ ನಾಯಕರೊಬ್ಬರು ಹೇಳಿದ್ದಾರೆ. ಮೊಯಿತ್ರಾ ಅಧ್ಯಕ್ಷರಾಗಿರುವ ನದಿಯಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಪಕ್ಷದ ನಾಯಕತ್ವವು ಸಂತೋಷವಾಗಿಲ್ಲ. ಜಿಲ್ಲೆಯಲ್ಲಿ 17 ವಿಧಾನಸಭಾ ಸ್ಥಾನಗಳಿದ್ದು, ಒಂಬತ್ತು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ.

ಇದನ್ನೂ ಓದಿ: ಜನರು ಇಂದಿರಾಜೀ ಅವರನ್ನು ಕ್ಷಮಿಸಿಲ್ಲ, ಮೋದಿಯವರನ್ನೂ ಕ್ಷಮಿಸಲಾರರು: ಮಮತಾ ಬ್ಯಾನರ್ಜಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ