AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ

ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗೃಹ ಸಚಿವ ಅಮಿತ್ ಶಾ ಅವರು ಮಾಡಿರುವ ಆರೋಪಗಳಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)  ಉತ್ತರ ನೀಡಿದ್ದಾರೆ.

ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ	ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿImage Credit source: Economic Times
ನಯನಾ ರಾಜೀವ್
|

Updated on:Aug 04, 2023 | 11:06 AM

Share

ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗೃಹ ಸಚಿವ ಅಮಿತ್ ಶಾ ಅವರು ಮಾಡಿರುವ ಆರೋಪಗಳಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)  ಉತ್ತರ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ಇಂಡಿಯಾ ವಿರುದ್ಧ ಆರೋಪ ಮಾಡಿದ್ದರು. ಈ ವಿಪಕ್ಷಗಳಿಗೆ ಲೋಕತಂತ್ರದ ಚಿಂತೆಯೂ ಇಲ್ಲ, ದೇಶದ ಚಿಂತೆಯೂ ಇಲ್ಲ, ಜನರ ಬಗ್ಗೆ ಕಾಳಜಿಯೂ ಇಲ್ಲ, ಅವರಿಗೆ ಕೇವಲ ತಮ್ಮ ಮೈತ್ರಿಯ ಬಗ್ಗೆ ಮಾತ್ರ ಚಿಂತೆ ಇದೆ. ನೀವೆಷ್ಟು ಬೇಕಾದರೂ ಮೈತ್ರಿ ಮಾಡಿಕೊಳ್ಳಿ ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರೇ ಮತ್ತೆ ಗೆದ್ದು ಬರುತ್ತಾರೆ ಎಂದು ಹೇಳಿದ್ದರು.

ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಾತನಾಡಿ, ನಾನು ಪಕ್ಷಗಳಿಗೆ ಮನವಿ ಮಾಡುತ್ತಿದ್ದೇನೆ, ನೀವು ಮೈತ್ರಿ ಮಾಡಿಕೊಂಡಿದ್ದೀರಾ ಎಂದ ಮಾತ್ರಕ್ಕೆ ದೆಹಲಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಮರ್ಥನೆ ಮಾಡಿಕೊಳ್ಳಬೇಡಿ, ಯಾಕೆಂದರೆ ಮೋದಿಯವರು ಮೈತ್ರಿ ಇಲ್ಲದೆಯೂ ಪೂರ್ಣ ಬಹುಮತದಿಂದ ಚುನಾವಣೆ ಗೆಲ್ಲುತ್ತಾರೆ ಎಂದು ಹೇಳಿದರು.

ಮತ್ತಷ್ಟು ಓದಿ: ದೆಹಲಿ ಬಗ್ಗೆ ಯೋಚಿಸಿ, ಮೈತ್ರಿ ಬಗ್ಗೆ ಅಲ್ಲ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಗೆಲುವು ಎಂದರೆ ಇಂಡಿಯಾ ಮೈತ್ರಿ ಕೂಟದ ಗೆಲುವುದು ಕೂಡ ಎಂದಿದ್ದಾರೆ. ನಮ್ಮ ಮೈತ್ರಿ ಹೊಸತು, ದೇಶಾದ್ಯಂತ ನಾವಿದ್ದೇವೆ, ನಿರುದ್ಯೋಗ, ವಿಪತ್ತು, ಕೋಮು ಉದ್ವಿಗ್ನತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿ ಇಂಡಿಯಾ ಗೆಲ್ಲಲೇಬೇಕು. ಭಾರತ ನಮ್ಮ ಮಾತೃಭೂಮಿ ಹಾಗೂ ಇಂಡಿಯಾ ಮೈತ್ರಿಕೂಟ ಕೂಡ ಮಾತೃಭೂಮಿಗಾಗಿಯೇ ನಿರ್ಮಿಸಲಾಗಿದೆ. ಹೀಗಾಗಿ ಇನ್ನುಮುಂದೆ ಎನ್​ಡಿಎಗೆ ಯಾವುದೇ ಮೌಲ್ಯವಿರುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಹಿಂಸಾಚಾರವನ್ನು ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ ಅವರು, ಮುಂದಿನ ವರ್ಷದ ರಾಷ್ಟ್ರೀಯ ಚುನಾವಣೆಯಲ್ಲಿ ತಮ್ಮ ಮೈತ್ರಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಯೋತ್ಪಾದನೆ ಸೃಷ್ಟಿಸುವುದು ಅವರ ಸಂಪ್ರದಾಯವೇ ಹೊರತು, ಸಂವಿಧಾನ ರಕ್ಷಿಸುವುದಲ್ಲ, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರನ್ನು ಹಿಂಸಿಸಲಾಗುತ್ತಿದೆ ಎಂದು ಬ್ಯಾನರ್ಜಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:01 am, Fri, 4 August 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ