AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೃಂದಾವನ್ ಕರ್ಮಾಕರ್ (52) ಎಂದು ಗುರುತಿಸಲಾಗಿರುವ ವ್ಯಕ್ತಿ ಮೊದಲು ತನ್ನ ಕುಟುಂಬ ಸದಸ್ಯರಿಗೆ ವಿಷ ಕುಡಿಸಿ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Nov 20, 2023 | 9:16 AM

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೃಂದಾವನ್ ಕರ್ಮಾಕರ್ (52) ಎಂದು ಗುರುತಿಸಲಾಗಿರುವ ವ್ಯಕ್ತಿ ಮೊದಲು ತನ್ನ ಕುಟುಂಬ ಸದಸ್ಯರಿಗೆ ವಿಷ ಕುಡಿಸಿ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಆತಂಕ ವ್ಯಕ್ತಪಡಿಸಿದ ನಂತರ ಪೊಲೀಸರು ಖರ್ದಾಹ್‌ನ ಎಂಎಸ್ ಮುಖರ್ಜಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ತೆರಳಿದರು. ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಲು ಬಾಗಿಲು ಒಡೆದು ನೋಡಿದಾಗ ನಾಲ್ಕು ಶವಗಳು ಪತ್ತೆಯಾಗಿವೆ.

ಕರ್ಮಾಕರ್ ಅವರ ಮೃತದೇಹವು ಫ್ಯಾನ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುಟುಂಬ ಸದಸ್ಯರ ಮೃತದೇಹಗಳು – ಪತ್ನಿ ದೇಬಶ್ರೀ, 17 ವರ್ಷದ ಮಗಳು ದೇಬಲೀನಾ ಮತ್ತು ಎಂಟು ವರ್ಷದ ಮಗ ಉತ್ಸಾಹ್​ ಫ್ಲಾಟ್‌ನ ವಿವಿಧ ಸ್ಥಳಗಳಲ್ಲಿ ಪತ್ತೆಯಾಗಿವೆ.

ಮತ್ತಷ್ಟು ಓದಿ: ದೀಪಾವಳಿಗೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

ಕಟ್ಟಡದಲ್ಲಿ ನೀರಿನ ಪಂಪ್ ನಿರ್ವಹಿಸುವ ವ್ಯಕ್ತಿ ಕೀಲಿಗಾಗಿ ಕರ್ಮಾಕರ್ ಅವರ ಫ್ಲಾಟ್‌ಗೆ ಹೋಗಿದ್ದರು. ಕಾಲಿಂಗ್ ಬೆಲ್ ಎಷ್ಟೇ ಪ್ರೆಸ್​ ಮಾಡಿದರೂ ಆ ಕಡೆಯಿಂದ ಉತ್ತರವಿರಲಿಲ್ಲ, ದುರ್ವಾಸನೆಯನ್ನು ಗಮನಿಸಿ ಸ್ಥಳೀಯ ಕೌನ್ಸಿಲರ್‌ಗೆ ಮಾಹಿತಿ ನೀಡಿದರು, ಬಳಿಕ ಅವರು ಪೊಲೀಸರಿಗೆ ಕರೆ ಮಾಡಿದ್ದರು.

ಪೊಲೀಸರು ಬಾಗಿಲು ಒಡೆದು ಒಳಗೆ ತೆರಳಿದಾಗ ನಾಲ್ವರ ಶವ ಪತ್ತೆಯಾಗಿದೆ.ಈ ಘಟನೆ ಅಕ್ಕಪಕ್ಕದ ಜನರನ್ನು ಬೆಚ್ಚಿ ಬೀಳಿಸಿದೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಪತಿ ತನ್ನ ಹೆಂಡತಿಗೆ ವಿವಾಹೇತರ ಸಂಬಂಧವಿದೆ ಎಂದು ಸ್ನೇಹಿತರ ಬಳಿ ಹೇಳಿಕೊಂಡಿದ್ದ, ಅದನ್ನು ಸಹಿಸಲಾಗದೆ ಈ ಹೆಜ್ಜೆ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ