AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಚಿದರೆ ಇನ್ನಷ್ಟು ಹುಡುಗರನ್ನು ಕರೆಯುತ್ತೇನೆಂದರು; ಬಂಗಾಳದ ಅತ್ಯಾಚಾರದ ಭಯಾನಕತೆ ನೆನಪಿಸಿಕೊಂಡ ಸಂತ್ರಸ್ತೆ

ಪಶ್ಚಿಮ ಬಂಗಾಳದ ದುರ್ಗಾಪುರದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಅಂದು ನಡೆದ ಭಯಾನಕತೆಯನ್ನು ನೆನಪಿಸಿಕೊಂಡಿದ್ದಾರೆ. ದುರ್ಗಾಪುರದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ, ತನ್ನ ಹಾಸ್ಟೆಲ್ ಪಕ್ಕದ ಕಾಡಿನೊಳಗೆ ಪುರುಷರು ತನ್ನನ್ನು ಹೇಗೆ ಬೆನ್ನಟ್ಟಿ ಬಂದರು, ಹೇಗೆಲ್ಲ ಬಲವಂತಪಡಿಸಿ ಹಲ್ಲೆ ನಡೆಸಿದರು ಎಂಬುದನ್ನು ವಿವರಿಸಿದ್ದಾರೆ.

ಕಿರುಚಿದರೆ ಇನ್ನಷ್ಟು ಹುಡುಗರನ್ನು ಕರೆಯುತ್ತೇನೆಂದರು; ಬಂಗಾಳದ ಅತ್ಯಾಚಾರದ ಭಯಾನಕತೆ ನೆನಪಿಸಿಕೊಂಡ ಸಂತ್ರಸ್ತೆ
Durgapur Gang Rape
ಸುಷ್ಮಾ ಚಕ್ರೆ
|

Updated on: Oct 14, 2025 | 4:15 PM

Share

ಕೊಲ್ಕತ್ತಾ, ಅಕ್ಟೋಬರ್ 14: ಪಶ್ಚಿಮ ಬಂಗಾಳದ ದುರ್ಗಾಪುರದ (Durgapur Horror) ಖಾಸಗಿ ಕಾಲೇಜಿನ ಬಳಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆಯ ಸಮಯದಲ್ಲಿ ನಡೆದ ಹಲ್ಲೆಯನ್ನು ವಿವರಿಸಿದ್ದಾರೆ. ಅತ್ಯಾಚಾರ ನಡೆಸಿದ ಯುವಕರು ನನ್ನನ್ನು ಹತ್ತಿರದ ಕಾಡಿನೊಳಗೆ ಕರೆದುಕೊಂಡು ಹೋದರು ಎಂದ ಆಕೆ ಅವರು ತನ್ನ ಮೇಲೆ ಹೇಗೆಲ್ಲ ದಾಳಿ ಮಾಡಿ ಬಲವಂತಪಡಿಸಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಚಿಕಿತ್ಸೆ ನೀಡುತ್ತಿರುವ ವೈದ್ಯರ ಮುಂದೆ ಆಕೆ ಈ ಹೇಳಿಕೆ ನೀಡಿದ್ದಾರೆ. “ಅವರು ತಮ್ಮ ಕಾರನ್ನು ಬಿಟ್ಟು ನಮ್ಮ ಕಡೆಗೆ ಬರುತ್ತಿರುವುದನ್ನು ನಾವು ಗಮನಿಸಿದೆವು. ಆಗ ನಾವು ಕಾಡಿನ ಕಡೆಗೆ ಓಡಲು ಪ್ರಾರಂಭಿಸಿದೆವು. ನಂತರ ಆ ಮೂವರು ನಮ್ಮ ಹಿಂದೆ ಓಡಿ ಬಂದು ನನ್ನನ್ನು ಹಿಡಿದು ಕಾಡಿನೊಳಗೆ ಎಳೆದೊಯ್ದರು” ಎಂದು ಆ ಯುವತಿ ಹೇಳಿದ್ದಾರೆ.

ಇದನ್ನೂ ಓದಿ: ಹುಡುಗಿಯರು ರಾತ್ರಿ ಹೊರಗೆ ಹೋಗಬಾರದು; ಅತ್ಯಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಶಾಕಿಂಗ್ ಹೇಳಿಕೆ

“ಅವರು ನನ್ನನ್ನು ಹಿಂದಿನಿಂದ ಹಿಡಿದು, ನನ್ನ ಫೋನ್ ತೆಗೆದುಕೊಂಡು ನನ್ನ ಸ್ನೇಹಿತನಿಗೆ ಕರೆ ಮಾಡಲು ಹೇಳಿದರು. ಅವನು ಬರದಿದ್ದಾಗ, ಅವರು ನನ್ನನ್ನು ಮಲಗಲು ಒತ್ತಾಯಿಸಿದರು. ನಾನು ಕಿರುಚಿದೆ. ಆಗ ನಾನು ಶಬ್ದ ಮಾಡಿದರೆ, ಅವರು ಇನ್ನಷ್ಟು ಪುರುಷರನ್ನು ಕರೆಯುತ್ತೇವೆ ಎಂದು ಹೆದರಿಸಿದರು. ಆದ್ದರಿಂದ ನಾನು ಹೆದರಿ ಸುಮ್ಮನಾದೆ” ಎಂದು ಆಕೆ ವೈದ್ಯರಿಗೆ ಹೇಳಿದ್ದಾರೆ.

ಒಡಿಶಾದ ಜಲೇಶ್ವರದ 23 ವರ್ಷದ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ರಾತ್ರಿ ಖಾಸಗಿ ವೈದ್ಯಕೀಯ ಕಾಲೇಜಿನ ಕ್ಯಾಂಪಸ್‌ನ ಹೊರಗೆ ಸಾಮೂಹಿಕ ಅತ್ಯಾಚಾರ ಮಾಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ