AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಚಿದರೆ ಇನ್ನಷ್ಟು ಹುಡುಗರನ್ನು ಕರೆಯುತ್ತೇನೆಂದರು; ಬಂಗಾಳದ ಅತ್ಯಾಚಾರದ ಭಯಾನಕತೆ ನೆನಪಿಸಿಕೊಂಡ ಸಂತ್ರಸ್ತೆ

ಪಶ್ಚಿಮ ಬಂಗಾಳದ ದುರ್ಗಾಪುರದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಅಂದು ನಡೆದ ಭಯಾನಕತೆಯನ್ನು ನೆನಪಿಸಿಕೊಂಡಿದ್ದಾರೆ. ದುರ್ಗಾಪುರದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ, ತನ್ನ ಹಾಸ್ಟೆಲ್ ಪಕ್ಕದ ಕಾಡಿನೊಳಗೆ ಪುರುಷರು ತನ್ನನ್ನು ಹೇಗೆ ಬೆನ್ನಟ್ಟಿ ಬಂದರು, ಹೇಗೆಲ್ಲ ಬಲವಂತಪಡಿಸಿ ಹಲ್ಲೆ ನಡೆಸಿದರು ಎಂಬುದನ್ನು ವಿವರಿಸಿದ್ದಾರೆ.

ಕಿರುಚಿದರೆ ಇನ್ನಷ್ಟು ಹುಡುಗರನ್ನು ಕರೆಯುತ್ತೇನೆಂದರು; ಬಂಗಾಳದ ಅತ್ಯಾಚಾರದ ಭಯಾನಕತೆ ನೆನಪಿಸಿಕೊಂಡ ಸಂತ್ರಸ್ತೆ
Durgapur Gang Rape
ಸುಷ್ಮಾ ಚಕ್ರೆ
|

Updated on: Oct 14, 2025 | 4:15 PM

Share

ಕೊಲ್ಕತ್ತಾ, ಅಕ್ಟೋಬರ್ 14: ಪಶ್ಚಿಮ ಬಂಗಾಳದ ದುರ್ಗಾಪುರದ (Durgapur Horror) ಖಾಸಗಿ ಕಾಲೇಜಿನ ಬಳಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆಯ ಸಮಯದಲ್ಲಿ ನಡೆದ ಹಲ್ಲೆಯನ್ನು ವಿವರಿಸಿದ್ದಾರೆ. ಅತ್ಯಾಚಾರ ನಡೆಸಿದ ಯುವಕರು ನನ್ನನ್ನು ಹತ್ತಿರದ ಕಾಡಿನೊಳಗೆ ಕರೆದುಕೊಂಡು ಹೋದರು ಎಂದ ಆಕೆ ಅವರು ತನ್ನ ಮೇಲೆ ಹೇಗೆಲ್ಲ ದಾಳಿ ಮಾಡಿ ಬಲವಂತಪಡಿಸಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಚಿಕಿತ್ಸೆ ನೀಡುತ್ತಿರುವ ವೈದ್ಯರ ಮುಂದೆ ಆಕೆ ಈ ಹೇಳಿಕೆ ನೀಡಿದ್ದಾರೆ. “ಅವರು ತಮ್ಮ ಕಾರನ್ನು ಬಿಟ್ಟು ನಮ್ಮ ಕಡೆಗೆ ಬರುತ್ತಿರುವುದನ್ನು ನಾವು ಗಮನಿಸಿದೆವು. ಆಗ ನಾವು ಕಾಡಿನ ಕಡೆಗೆ ಓಡಲು ಪ್ರಾರಂಭಿಸಿದೆವು. ನಂತರ ಆ ಮೂವರು ನಮ್ಮ ಹಿಂದೆ ಓಡಿ ಬಂದು ನನ್ನನ್ನು ಹಿಡಿದು ಕಾಡಿನೊಳಗೆ ಎಳೆದೊಯ್ದರು” ಎಂದು ಆ ಯುವತಿ ಹೇಳಿದ್ದಾರೆ.

ಇದನ್ನೂ ಓದಿ: ಹುಡುಗಿಯರು ರಾತ್ರಿ ಹೊರಗೆ ಹೋಗಬಾರದು; ಅತ್ಯಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಶಾಕಿಂಗ್ ಹೇಳಿಕೆ

“ಅವರು ನನ್ನನ್ನು ಹಿಂದಿನಿಂದ ಹಿಡಿದು, ನನ್ನ ಫೋನ್ ತೆಗೆದುಕೊಂಡು ನನ್ನ ಸ್ನೇಹಿತನಿಗೆ ಕರೆ ಮಾಡಲು ಹೇಳಿದರು. ಅವನು ಬರದಿದ್ದಾಗ, ಅವರು ನನ್ನನ್ನು ಮಲಗಲು ಒತ್ತಾಯಿಸಿದರು. ನಾನು ಕಿರುಚಿದೆ. ಆಗ ನಾನು ಶಬ್ದ ಮಾಡಿದರೆ, ಅವರು ಇನ್ನಷ್ಟು ಪುರುಷರನ್ನು ಕರೆಯುತ್ತೇವೆ ಎಂದು ಹೆದರಿಸಿದರು. ಆದ್ದರಿಂದ ನಾನು ಹೆದರಿ ಸುಮ್ಮನಾದೆ” ಎಂದು ಆಕೆ ವೈದ್ಯರಿಗೆ ಹೇಳಿದ್ದಾರೆ.

ಒಡಿಶಾದ ಜಲೇಶ್ವರದ 23 ವರ್ಷದ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ರಾತ್ರಿ ಖಾಸಗಿ ವೈದ್ಯಕೀಯ ಕಾಲೇಜಿನ ಕ್ಯಾಂಪಸ್‌ನ ಹೊರಗೆ ಸಾಮೂಹಿಕ ಅತ್ಯಾಚಾರ ಮಾಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು