AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021: ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಟಿಎಂಸಿ; ಈ ಬಾರಿ ಶೇ.30ರಷ್ಟು ಹೊಸಬರಿಗೆ ಟಿಕೆಟ್​ !

ಟಿಎಂಸಿ ಪಕ್ಷ ಈ ಬಾರಿ ತಳಮಟ್ಟದ ಸಮೀಕ್ಷೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಇದರಲ್ಲಿ ಈಗಾಗಲೇ 60 ವರ್ಷ ದಾಟಿದ ಹಲವು  ಹಾಲಿ ಶಾಸಕರನ್ನು ಕೈಬಿಡಲಾಗಿದೆ. ಅದರಲ್ಲೂ 80ವರ್ಷ ಮೇಲ್ಪಟ್ಟ ಯಾರಿಗೂ ಟಿಕೆಟ್​ ನೀಡುತ್ತಿಲ್ಲ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

West Bengal Election 2021: ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಟಿಎಂಸಿ; ಈ ಬಾರಿ ಶೇ.30ರಷ್ಟು ಹೊಸಬರಿಗೆ ಟಿಕೆಟ್​ !
ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)
Lakshmi Hegde
|

Updated on: Mar 02, 2021 | 1:22 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​ 6ರಂದು ಚುನಾವಣೆ ನಡೆಯಲಿದ್ದು, ಅಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇನ್ನೆರಡು ಮೂರು ದಿನಗಳಲ್ಲಿ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಈ ಸಂಬಂಧ ನಿನ್ನೆ (ಮಾ.1)ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ನಡೆದಿದೆ. ಮಮತಾ ಬ್ಯಾನರ್ಜಿಯವ ದಕ್ಷಿಣ ಕೋಲ್ಕತ್ತದ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬಲಾಢ್ಯ ಪಕ್ಷ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಿಂದ ಗಮನಾರ್ಹವಾಗಿ ತನ್ನ ವಿಸ್ತಾರವನ್ನು ಹೆಚ್ಚು ಮಾಡುತ್ತಿದೆ. ಈ ಬಾರಿ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿಸಿಕೊಂಡಿರುವ ಬಿಜೆಪಿ ನಾಯಕರು ಪದೇಪದೆ ಅಲ್ಲಿಗೆ ಭೇಟಿ ನೀಡಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದಾರೆ. ಇನ್ನು ಬಿಜೆಪಿ ಯುವ ರಾಜಕಾರಣಿಗಳಿಗೆ ಮಣೆ ಹಾಕುವ ಒಂದು ಪರಿಪಾಠವನ್ನು ಬೆಳೆಸಿಕೊಂಡಿದ್ದು, ಪ್ರತಿ ರಾಜ್ಯಗಳ, ಲೋಕಸಭಾ ಚುನಾವಣೆಯಲ್ಲೂ ಈ ಪ್ರಯೋಗ ಮಾಡಿಕೊಂಡೇಬಂದಿದೆ. ಇದೀಗ ಟಿಎಂಸಿ ಕೂಡ ಇದೇ ಕ್ರಮ ಅಳವಡಿಸಿಕೊಳ್ಳಲು ಮುಂದಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ಟಿಎಂಸಿ ಪಕ್ಷ ಈ ಬಾರಿ ತಳಮಟ್ಟದ ಸಮೀಕ್ಷೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಇದರಲ್ಲಿ ಈಗಾಗಲೇ 60 ವರ್ಷ ದಾಟಿದ ಹಲವು  ಹಾಲಿ ಶಾಸಕರನ್ನು ಕೈಬಿಡಲಾಗಿದೆ. ಅದರಲ್ಲೂ 80ವರ್ಷ ಮೇಲ್ಪಟ್ಟ ಯಾರಿಗೂ ಟಿಕೆಟ್​ ನೀಡುತ್ತಿಲ್ಲ. ಹೆಚ್ಚಾಗಿ ಮಹಿಳೆಯರು ಮತ್ತು ಯುವಮುಖಂಡರನ್ನೇ ಆಯ್ಕೆ ಮಾಡಿದೆ ಎನ್ನಲಾಗಿದೆ. ಬಿಜೆಪಿಗೆ ಸೇರಿದ 19 ಶಾಸಕರ ಕ್ಷೇತ್ರಗಳನ್ನೂ ಸೇರಿಸಿ, ಶೇ.30ರಷ್ಟು ಹೊಸ ಮುಖಗಳಿಗೆ ಟಿಕೆಟ್​ ನೀಡಲು ಪಕ್ಷ ನಿರ್ಧರಿಸಿದೆ ಎಂದು ಹಿರಿಯ ಟಿಎಂಸಿ ಮುಖಂಡರೊಬ್ಬರು ತಿಳಿಸಿದ್ದಾಗಿ ರಾಷ್ಟ್ರೀಯ ಮಾಧ್ಯವೊಂದು ವರದಿ ಮಾಡಿದೆ.

ಟಿಎಂಸಿಯಲ್ಲಿ 60 ವರ್ಷ ಮೇಲ್ಪಟ್ಟ ಅನೇಕ ಶಾಸಕರಿದ್ದಾರೆ. ಸದ್ಯ ಅಧಿಕಾರದಲ್ಲಿ ಇರುವ ಪ್ರತಿಯೊಬ್ಬ ಟಿಎಂಸಿ ಶಾಸಕನ 5 ವರ್ಷಗಳ ಕಾರ್ಯ, ಅವರ ಕ್ಷೇತ್ರದಲ್ಲಿ ಅವರಿಗೆ ಇರುವ ಫಾಲೋವರ್ಸ್​, ಅವರ ಬಗ್ಗೆ ಮತದಾರರಿಗೆ ಇರುವ ಅಭಿಪ್ರಾಯಗಳನ್ನೆಲ್ಲ ಸಮೀಕ್ಷೆ ಮಾಡಲಾಗಿತ್ತು. ಈ ವರದಿಯನ್ನೂ ಅನ್ವಯ ಮಾಡಿಕೊಂಡು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ತಯಾರಿಕೆ ಮಾಡಲಾಗಿದೆ. ಆದರೆ ಇಲ್ಲಿ ಮಮತಾ ಬ್ಯಾನರ್ಜಿಯವರೇ ಟಿಎಂಸಿ ಸುಪ್ರಿಮೋ ಆಗಿದ್ದು, ಕೊನೆಗೆ ಅವರೇ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಈಗಾಗಲೇ ಟಿಎಂಸಿಯಿಂದ ಬಿಜೆಪಿಗೆ ಹಲವರು ಸೇರಿದ್ದು, ಇದೀಗ ಚುನಾವಣೆಯಲ್ಲಿ ಟಿಕೆಟ್​ ನೀಡದಿದ್ದರೆ ಏನಾಗಬಹುದು? ಮತ್ತೆಷ್ಟು ಜನ ಬಿಜೆಪಿಗೆ ಹೋಗಬಹುದು? ಎಂಬ ಪ್ರಶ್ನೆಯೂ ಎದ್ದಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!