AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election Result 2021: ಟಿಎಂಸಿ 202, ಬಿಜೆಪಿ 77 ಸೀಟುಗಳಲ್ಲಿ ಮುನ್ನಡೆ; ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಹಿನ್ನಡೆ

West Bengal Assembly Election Result 2021: ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿ ಪ್ರಕಾರ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 202 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ 77 ಸೀಟುಗಳಲ್ಲಿ ಮುಂದಿದೆ.

West Bengal Election Result 2021: ಟಿಎಂಸಿ 202, ಬಿಜೆಪಿ 77 ಸೀಟುಗಳಲ್ಲಿ ಮುನ್ನಡೆ; ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಹಿನ್ನಡೆ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
|

Updated on:May 02, 2021 | 1:27 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿ ಪ್ರಕಾರ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 202 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ 77 ಸೀಟುಗಳಲ್ಲಿ ಮುಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ 3000ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಹಿಂದೆ ಇದ್ದಾರೆ. ರಾಷ್ಟ್ರೀಯ ಸೆಕ್ಯುಲರ್ ಮಜಲಿಸ್ ಪಕ್ಷ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು ಇಬ್ಬರು ಪಕ್ಷೇತರರು ಮುಂದೆ ಇದ್ದಾರೆ.

ಬಿಜೆಪಿಯ ಮಿತ್ರ ಪಕ್ಷ ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ಪುರುಲಿಯಾ ಜಿಲ್ಲೆಯ ಬಾಘಮುಂಡಿಯಲ್ಲಿ ಮುನ್ನಡೆ ಸಾಧಿಸಿದೆ .ಇನ್ನುಳಿದಂತೆ ಟಿಎಂಸಿ ನಾಯಕ ಮದನ್ ಮಿತ್ರಾ ಅವರು ಕಮರ್ ಹಟಿ ಚುನಾವಣಾ ಕ್ಷೇತ್ರದಲ್ಲಿ 8,138 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ . ಬಿಜೆಪಿ ನೇತಾರ ಆನಿಂದ್ಯಾ ಬ್ಯಾನರ್ಜಿ ಈ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

West Bengal Election ಡಾರ್ಜಲಿಂಗ್​ನಲ್ಲಿ ಪಕ್ಷೇತರರು ಮುಂದು ಡಾರ್ಜಲಿಂಗ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಕೇಶವ್ ರಾಜ್ ಶರ್ಮಾ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ನೀರಜ್ ತಮಂಗ್ ಜಿಂಬ ನಿಧಾನವಾಗಿ ಮತಗಳ ಅಂತರ ಕಡಿಮೆ ಮಾಡುತ್ತಾ ಮುಂದೆ ಸಾಗುತ್ತಿದ್ದಾರೆ ಎಂದಿದೆ.

ಭಬಾನಿಪುರ್ ಕ್ಷೇತ್ರದಲ್ಲಿ ಟಿಎಂಸಿ ಪಕ್ಷದ ಶೋಭನ್ ದೇಬ್ ಚಟ್ಟೋಪಾಧ್ಯಾಯ್ ಮುನ್ನಡೆ ಭಬಾನಿಪುರ್ ಕ್ಷೇತ್ರದಲ್ಲಿ ಟಿಎಂಸಿ ಪಕ್ಷದ ಶೋಭನ್ ದೇಬ್ ಚಟ್ಟೋಪಾಧ್ಯಾಯ್ ಅವರು 10,000 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕೊಲ್ಕತ್ತಾದಲ್ಲಿ ಟಿಎಂಸಿ ಸಂಭ್ರಮ 202 ಸೀಟುಗಳಲ್ಲಿ ಮುನ್ನಡೆ ಸಾಧಿಸಿರುವ ಟಿಎಂಸಿ ಪಕ್ಷದ ಕಾರ್ಯಕರ್ತರು ಕೊಲ್ಕತ್ತಾದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ.

ಬಿಜೆಪಿಗೆ ಟಾಂಗ್ ನೀಡಿದ ಟಿಎಂಸಿ ಸಂಸದ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಟಿಎಂಸಿ 200ಕ್ಕಿಂಚಲೂ ಹೆಚ್ಚು ಸೀಟುಗಳಲ್ಲಿ ಮುನ್ನಡೆ ಸಾಧಿಸಿದಾಗ ಟಿಎಂಸಿ ಸಂಸದ ಡೆರಿಕ್ ಒ ಬ್ರೇನ್ ಅಮಿತ್ ಶಾ ಭಾಷಣದ ತುಣುಕೊಂದನ್ನು ಟ್ವೀಟ್ ಮಾಡಿ ಕಿಚಾಯಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200 ಸೀಟು ದಾಟಲಿದೆ ಎಂದು ಭಾಷಣವೊಂದರಲ್ಲಿ ಅಮಿತ್ ಶಾ ಹೇಳುವ ವಿಡಿಯೊ ಇದಾಗಿದೆ.

ಸ್ಪಪನ್ ದಾಸ್ ಗುಪ್ತಾ ಹಿನ್ನಡೆ ಲೇಖಕ, ಬಿಜೆಪಿ ನಾಯಕ ಸ್ವಪನ್ ದಾಸ್ ಗುಪ್ತಾ ಅವರು ಟಿಎಂಸಿ ರಾಮೇಂದು ಸಿನ್ಹಾರೇ ಅವರ ವಿರುದ್ಧ 5,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

ಫಲಿತಾಂಶದ ಬಗ್ಗೆ ಈಗಲೇ ಹೇಳಲಾಗದು. ಇನ್ನೂ ಹಲವು ಸುತ್ತುಗಳು ಬಾಕಿ ಇವೆ.  ಸಂಜೆ ಹೊತ್ತಿಗೆ ಸ್ಪಷ್ಟ ಚಿತ್ರಣಸಿಗಲಿದೆ . ನಾವು ಮೂರು ಸೀಟುಗಳಿಂದ ಆರಂಭಿಸಿದ್ದೆವು. 100  ಸೀಟು ಕೂಡಾ ಸಿಗದು ಎಂದು ಟಿಎಂಸಿ  ಸವಾಲೆಸೆದಿತ್ತು . ನಾವು 100ರ ಗಡಿ ದಾಟಿದ್ದೇವೆ. ನಾವು ಮ್ಯಾಜಿಕ್ ನಂಬರ್ ಕೂಡಾ ದಾಟುತ್ತೇವೆ ಎಂದು  ಬಿಜೆಪಿ ನಾಯಕ  ಕೈಲಾಶ್ ವಿಜಯ್​ವರ್ಗಿಯಾ  ಹೇಳಿದ್ದಾರೆ.

ಇದನ್ನೂ ಓದಿ: West Bengal Assembly Elections Exit Poll: ದೀದಿ ವರ್ಸಸ್ ಮೋದಿ ಕದನದ ಕ್ಲೈಮಾಕ್ಸ್ ಮುಂಚಿನ ರಿಸಲ್ಟ್ಸ್

(West Bengal Election Results 2021 TMC leading in over 190 seats Mamata Banerjee trailing in Nandigram)

Published On - 12:46 pm, Sun, 2 May 21

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ