AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತೊಂದರೆ ಕೊಡಬೇಕೆಂದಿದ್ದರೆ ನನಗೆ ಕೊಡಿ, ಬಂಗಾಳದ ನಾಗರಿಕರಿಗೆ ಕೊಡಬೇಡಿ; ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕಿಸಿದ ಪ್ರಧಾನಿ ಮೋದಿ

ನನ್ನ ದೇವಸ್ಥಾನಗಳ ಭೇಟಿಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಳಿ ಸಹಿಸಲು ಸಾಧ್ಯವಾಗಲಿಲ್ಲ. ಹಾಗಾದರೆ ಅವರಿಗೆ, ದೇವಸ್ಥಾನಗಳಿಗೆ ಭೇಟಿ ನೀಡುವುದು ಎಂದರೇ ಇಷ್ಟವಿಲ್ಲವೇ ಎಂದು ಪ್ರಧಾನಿ ಮೋದಿ ಟೀಕಿಸಿದರು.

ನಿಮಗೆ ತೊಂದರೆ ಕೊಡಬೇಕೆಂದಿದ್ದರೆ ನನಗೆ ಕೊಡಿ, ಬಂಗಾಳದ ನಾಗರಿಕರಿಗೆ ಕೊಡಬೇಡಿ; ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
guruganesh bhat
| Edited By: |

Updated on:Apr 01, 2021 | 4:48 PM

Share

ಕೊಲ್ಕತ್ತಾ: ಟಿಎಂಸಿ ಪಕ್ಷದ ಕಾರ್ಯಕರ್ತರಿಂದ ತೊಂದರೆಗೀಡಾದ ಪಶ್ಚಿಮ ಬಂಗಾಳದ ಸಾವಿರಾರು ತಾಯಂದಿರ, ಸಹೋದರಿಯರ ಪ್ರತೀಕವೇ ಶೋಭಾ ಮಜೂಮ್ದಾರ್. ಅವರ ಸಾವಿಗೆ ಕಾರಣವಾದವರ ವಿರುದ್ಧ ಬಂಗಾಳದ ಮತದಾರರು ನಿರ್ಧಾರ ತಳೆಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಜಯನಗರದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಭಾಷಣದಲ್ಲಿ ಹೇಳಿದರು. ‘ಮಮತಾ ಬ್ಯಾನರ್ಜಿಯವರೇ, ನಿಮಗೆ ಯಾರಿಗಾದರೂ ಸಮಸ್ಯೆ ಉಂಟುಮಾಡಬೇಕು ಎಂದಿದ್ದರೆ, ನನಗೆ ಮಾಡಿ. ಅದನ್ನು ಬಿಟ್ಟು ಜನಸಾಮಾನ್ಯರಿಗೆ ತೊಂದರೆ ನೀಡಬೇಡಿ. ರಾಮಕೃಷ್ಣ ಪರಮಹಂಸ, ಚೈತನ್ಯ ಮಹಾಪ್ರಭು ಮತ್ತು ಸ್ವಾಮಿ ವಿವೇಕಾನಂದ ಮೊದಲಾದ ವ್ಯಕ್ತಿತ್ವಗಳ ಹಿನ್ನೆಲೆಯ ಪಶ್ಚಿಮ ಬಂಗಾಳದ ಸಾಮಾನ್ಯ ಜನರಿಗೆ ಸಮಸ್ಯೆ ಕೊಡಲು ನಾನು ಬಿಡುವುದಿಲ್ಲ’ ಎಂದು ಪ್ರಧಾನಿ ಮೋದಿ ಗುಡುಗಿದರು.

ಮೊದಲ ಹಂತದ ಚುನಾವಣೆಯ ವೇಳೆಯಲ್ಲಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಹೊರಗಿನ ನಾಯಕರಿಗೆ ಪತ್ರ ಬರೆದು ಬೆಂಬಲ ಕೋರಿದರು. ಆದರೆ  ಕೆಲ ದಿನಗಳ ಮುನ್ನ ಪಶ್ಚಿಮ ಬಂಗಾಳದ ಹೊರಗಿನ ಕೆಲವು ನಾಯಕರನ್ನು  ಮಮತಾ ಬ್ಯಾನರ್ಜಿ ಹೊರಗಿನವರು ಎಂದು ದೂಷಿಸಿದ್ದರು.  ಹೀಗೆ ಪತ್ರ ಬರೆದಿದ್ದ ಅವರೇ, ಸ್ವತಃ ಪಶ್ಚಿಮ ಬಂಗಾಳದ ಹೊರಗಿನ ನಾಯಕರ ಬೆಂಬಲ ಕೋರುವ ಮೂಲಕ ತಮ್ಮ ದ್ವಂದ್ವ ಮುಖವನ್ನು ಸಾಬೀತುಪಡಿಸಿದರು ಎಂದು ಪ್ರಧಾನಿ ಮೋದಿ ಟಿಎಂಸಿ ಮುಖ್ಯಸ್ಥೆಯ ವಿರುದ್ಧ ಹರಿಹಾಯ್ದರು.

ಕೆಲ ದಿನಗಳ ಹಿಂದೆ ನಾನು ಬಾಂಗ್ಲಾದೇಶಕ್ಕೆ ತೆರಳಿದ್ದ ವೇಳೆ ಅಲ್ಲಿನ ಹಿಂದೂ ದೇವಾಲಯಗಳಿಗೆ ಭೇಟಿಯಿತ್ತು ದರ್ಶನ ಪಡೆದಿದ್ದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾನು ಬಾಂಗ್ಲಾದೇಶ ದೇವಸ್ಥಾನಗಳಿಗೆ ಭೇಟಿ ನೀಡಿದ್ದನ್ನು ಟೀಕಿಸಿದರು. ಅವರಿಗೆ ನನ್ನ ದೇವಸ್ಥಾನಗಳ ಭೇಟಿಯನ್ನು ಸಹಿಸಲು ಸಾಧ್ಯವಾಗಲಿಲ್ಲ. ಹಾಗಾದರೆ ಅವರಿಗೆ, ದೇವಸ್ಥಾನಗಳಿಗೆ ಭೇಟಿ ನೀಡುವುದು ಎಂದರೇ ಇಷ್ಟವಿಲ್ಲವೇ ಎಂದು ಪ್ರಧಾನಿ ಮೋದಿ ಟೀಕಿಸಿದರು.

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

Fact Check: ಪಶ್ಚಿಮ ಬಂಗಾಳದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಜನರನ್ನು ಆಕರ್ಷಿಸಲು ಖಾಲಿ ಕುರ್ಚಿಯಲ್ಲಿ ಊಟದ ಪೊಟ್ಟಣ, ವೈರಲ್ ಆಗಿದ್ದು ಹಳೇ ಫೋಟೊ

Published On - 3:57 pm, Thu, 1 April 21

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​