AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections: ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ

ಬಿಜೆಪಿ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಬಂಗಾಳದ ಜನರು ಹಾಜರಾಗುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಮಲ ಅರಳುತ್ತದೆ ಎಂಬುದಕ್ಕೆ ಇದೇ ಸೂಚನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಂಚ್​ಪೋಟಾದಲ್ಲಿ ಹೇಳಿದ್ದಾರೆ.

West Bengal Elections: ಪಶ್ಚಿಮ ಬಂಗಾಳ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ
ಬಿಜೆಪಿ ರೋಡ್​ ಶೋನಲ್ಲಿ ಸ್ಕೂಟರ್ ಓಡಿಸಿದ ಸ್ಮೃತಿ ಇರಾನಿ
TV9 Web
| Updated By: ganapathi bhat|

Updated on:Apr 06, 2022 | 7:41 PM

Share

ಕೋಲ್ಕತ್ತಾ: ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಇಂದು (ಫೆ.26) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಂದು ದಿನದ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಪಂಚ್​ಪೋಟಾದಲ್ಲಿ ಸ್ಮೃತಿ ಇರಾನಿ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ರೋಡ್​ಶೋನಲ್ಲಿ ಪಾಲ್ಗೊಂಡು ಸ್ಕೂಟರ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಸ್ಮೃತಿ ಇರಾನಿ, ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತೀಯ ಜನತಾ ಪಾರ್ಟಿ (BJP) ಪ್ರಚಾರ ಯಾತ್ರೆಗಳಿಗೆ ಅಥವಾ ಸಮಾರಂಭಗಳಿಗೆ ಪಶ್ಚಿಮ ಬಂಗಾಳದ ಜನರು ಬಹಳಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಬಂಗಾಳದ ಜನರು ಹಾಜರಾಗುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಮಲ ಅರಳುತ್ತದೆ ಎಂಬುದಕ್ಕೆ ಇದೇ ಸೂಚನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಂಚ್​ಪೋಟಾದಲ್ಲಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ನಡೆದ ಹಿಂಸಾಚಾರಗಳು ಮತ್ತು ಪ್ರಜಾಪ್ರಭುತ್ವದ ಧ್ವನಿಗಳು ತೃಣಮೂಲ ಕಾಂಗ್ರೆಸ್ ಪಕ್ಷವನ್ನು (TMC) ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುತ್ತಾರೆ ಎಂದು ಸ್ಮೃತಿ ಇರಾನಿ ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ರೋಡ್​ಶೋನಲ್ಲಿ ಸ್ಕೂಟರ್ ಚಲಾಯಿಸಿದ ಸ್ಮೃತಿ ಇರಾನಿ

ಈ ಹಿಂದೆಯೂ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದ ಸ್ಮೃತಿ ಇರಾನಿ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಂತರಿಕ ಜಗಳವನ್ನು ಉತ್ತೇಜಿಸುವ ಮತ್ತು ಜೈ ಶ್ರೀರಾಮ್ ಘೋಷಣೆಯನ್ನು ದ್ವೇಷಿಸುವ ಪಕ್ಷವಾದ ಟಿಎಂಸಿಯಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದರು. ಹೌರಹ್​ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಸ್ಮೃತಿ ಇರಾನಿ, ದೀದೀ..ನೀವು ಜೈ ಶ್ರೀರಾಮ್​ ಎಂಬ ಘೋಷಣೆಯನ್ನು ವರ್ಜಿಸಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮರಾಜ್ಯ ಪರಿಕಲ್ಪನೆ ಪಶ್ಚಿಮ ಬಂಗಾಳದ ಬಾಗಿಲನ್ನೂ ಬಡಿಯುತ್ತಿದೆ ಎಂದು ಹೇಳಿದ್ದರು.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನಿಂದ ಬರೀ ಭ್ರಷ್ಟಾಚಾರವೇ ನಡೆಯುತ್ತಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದ ಸುಮಾರು 8 ತಿಂಗಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ 80 ಕೋಟಿ ಜನರಿಗೆ ಅನುಕೂಲವಾಗುವಂತೆ ಪಡಿತರ ನೀಡಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಇದನ್ನು ಫಲಾನುಭವಿಗಳಿಗೆ ತಲುಪಿಸದೆ ಲೂಟಿ ಮಾಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳವನ್ನು ಸೋನಾರ್ ಬಾಂಗ್ಲಾ ಮಾಡುತ್ತೇವೆ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಭರವಸೆ

PM Modi in West Bengal: ಪಶ್ಚಿಮ ಬಂಗಾಳದ ಜನರು ಬದಲಾವಣೆ ಬಯಸುತ್ತಿದ್ದಾರೆ: ನರೇಂದ್ರ ಮೋದಿ

Published On - 5:07 pm, Fri, 26 February 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ