AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಗರ್ಭದಿಂದ ಹೊರಬಂದ ಭ್ರೂಣ

ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದಲ್ಲಿ ಗರ್ಭಿಣಿ ಆನೆಯೊಂದಕ್ಕೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಪಶ್ಚಿಮ ಬಂಗಾಳ: ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಗರ್ಭದಿಂದ ಹೊರಬಂದ ಭ್ರೂಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2023 | 3:18 PM

Share

ಅಲಿಪುರ್ದೂರ್, ಆ.10 : ರೈಲ್ವೆ ಅಪಘಾತಗಳಿಂದ ಆನೆಗಳನ್ನು ರಕ್ಷಣೆ ಮಾಡಲು ಮತ್ತು ಇಂತಹ ಘಟನೆಗಳನ್ನು ತಡೆಯಲು ಭಾರತೀಯ ರೈಲ್ವೇ ಇಲಾಖೆ ಕಠಿಣ ಕ್ರಮಗಳನ್ನು ತಂದಿದೆ. ಆದರೆ ಇಂದು (ಆ,10) ಮುಂಜಾನೆ ಪಶ್ಚಿಮ ಬಂಗಾಳ(West Bengal) ಅಲಿಪುರ್ದೂರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದಲ್ಲಿ ಗರ್ಭಿಣಿ ಆನೆಯೊಂದಕ್ಕೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಬೆಳಿಗ್ಗೆ 3:00 ಗಂಟೆಗೆ ಈ ಘಟನೆ ನಡೆದಿದ್ದು, ರಾತ್ರಿ ವೇಳೆ ಡಾಲಮೈಟ್​​ನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ರೈಲು ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದಿದೆ. ಆದರೆ ಭಾರತೀಯ ರೈಲ್ವೇ ಇಲಾಖೆಯ ನಿಯಮದ ಪ್ರಕಾರ ರಾತ್ರಿ ಹೊತ್ತು ಗೂಡ್ಸ್ ರೈಲುಗಳು ಓಡಾಡುವಂತಿಲ್ಲ. ಸರಕು ರೈಲುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ, ಜತೆಗೆ ವೇಗದ ನಿರ್ಬಂಧಗಳೂ ಇವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ ಜಾಖರ್ ಸುದ್ದಿಗಾರರಿಗೆ ತಿಳಿಸಿದರು.

ರೈಲ್ವೆ ದಾಖಲೆ ಮೂಲಕ ರೈಲಿನ ವೇಗದ ಬಗ್ಗೆ ನೋಡಬಹುದು, ಆದರೆ ಇದರಿಂದ ಗರ್ಭಿಣಿ ಆನೆ ಸಾವನ್ನಪ್ಪಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ, ಅನೆಯ ಹೊಟ್ಟೆಯಲ್ಲಿದ್ದ ಭ್ರೂಣವು ಸಂಪೂರ್ಣವಾಗಿ ಹೊರಬಂದಿದ್ದು, ಸಾವನ್ನಪ್ಪಿರುವ ಆನೆಯನ್ನು ಗೂಡ್ಸ್ ರೈಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ ಜಾಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಹುಲಿಗಳ ಜೊತೆಗೆ ಅತಿ ಹೆಚ್ಚು ಆನೆಗಳೂ ಇರುವುದು ಬಂಡಿಪುರದಲ್ಲೇ!

ಸ್ಥಳೀಯರ ಪ್ರಕಾರ, ಗರ್ಭಿಣಿ ಆನೆಯೊಂದು ಚಪ್ರಮರಿ ಮೀಸಲು ಅರಣ್ಯದೊಳಗೆ ಹೋಗಲು ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ, ಪ್ರತಿದಿನ ಈ ರೈಲು ಮಾರ್ಗದಲ್ಲೇ ಆನೆಗಳು ಹಾದುಹೋಗುತ್ತದೆ. ವರದಿಗಳ ಪ್ರಕಾರ ಇಂದು ಮುಂಜಾನೆ ಅಲಿಪುರ್‌ದೌರ್‌ನಿಂದ ಸಿಲಿಗುರಿಗೆ ಹೊರಟಿದ್ದ ಡಾಲಮೈಟ್ ತುಂಬಿದ ಗೂಡ್ಸ್ ರೈಲು ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದು ಆನೆ ಸ್ಥಳದಲ್ಲಿ ಮೃತಪಟ್ಟಿದೆ ಎಂದು ಹೇಳಿದೆ.

ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದು. ಮರಣೋತ್ತರ ಪರೀಕ್ಷೆಯ ನಂತರ ತಾಯಿ ಮತ್ತು ಆನೆಯ ಭ್ರೂಣವನ್ನು ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ದೇಶದ ಆನೆಗಳ ಜನಸಂಖ್ಯೆಯ ಸುಮಾರು 2% ನಷ್ಟು ನೆಲೆಯಾಗಿರುವ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ