AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಗರ್ಭದಿಂದ ಹೊರಬಂದ ಭ್ರೂಣ

ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದಲ್ಲಿ ಗರ್ಭಿಣಿ ಆನೆಯೊಂದಕ್ಕೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಪಶ್ಚಿಮ ಬಂಗಾಳ: ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಗರ್ಭದಿಂದ ಹೊರಬಂದ ಭ್ರೂಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2023 | 3:18 PM

Share

ಅಲಿಪುರ್ದೂರ್, ಆ.10 : ರೈಲ್ವೆ ಅಪಘಾತಗಳಿಂದ ಆನೆಗಳನ್ನು ರಕ್ಷಣೆ ಮಾಡಲು ಮತ್ತು ಇಂತಹ ಘಟನೆಗಳನ್ನು ತಡೆಯಲು ಭಾರತೀಯ ರೈಲ್ವೇ ಇಲಾಖೆ ಕಠಿಣ ಕ್ರಮಗಳನ್ನು ತಂದಿದೆ. ಆದರೆ ಇಂದು (ಆ,10) ಮುಂಜಾನೆ ಪಶ್ಚಿಮ ಬಂಗಾಳ(West Bengal) ಅಲಿಪುರ್ದೂರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದಲ್ಲಿ ಗರ್ಭಿಣಿ ಆನೆಯೊಂದಕ್ಕೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಬೆಳಿಗ್ಗೆ 3:00 ಗಂಟೆಗೆ ಈ ಘಟನೆ ನಡೆದಿದ್ದು, ರಾತ್ರಿ ವೇಳೆ ಡಾಲಮೈಟ್​​ನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ರೈಲು ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದಿದೆ. ಆದರೆ ಭಾರತೀಯ ರೈಲ್ವೇ ಇಲಾಖೆಯ ನಿಯಮದ ಪ್ರಕಾರ ರಾತ್ರಿ ಹೊತ್ತು ಗೂಡ್ಸ್ ರೈಲುಗಳು ಓಡಾಡುವಂತಿಲ್ಲ. ಸರಕು ರೈಲುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ, ಜತೆಗೆ ವೇಗದ ನಿರ್ಬಂಧಗಳೂ ಇವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ ಜಾಖರ್ ಸುದ್ದಿಗಾರರಿಗೆ ತಿಳಿಸಿದರು.

ರೈಲ್ವೆ ದಾಖಲೆ ಮೂಲಕ ರೈಲಿನ ವೇಗದ ಬಗ್ಗೆ ನೋಡಬಹುದು, ಆದರೆ ಇದರಿಂದ ಗರ್ಭಿಣಿ ಆನೆ ಸಾವನ್ನಪ್ಪಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ, ಅನೆಯ ಹೊಟ್ಟೆಯಲ್ಲಿದ್ದ ಭ್ರೂಣವು ಸಂಪೂರ್ಣವಾಗಿ ಹೊರಬಂದಿದ್ದು, ಸಾವನ್ನಪ್ಪಿರುವ ಆನೆಯನ್ನು ಗೂಡ್ಸ್ ರೈಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ ಜಾಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಹುಲಿಗಳ ಜೊತೆಗೆ ಅತಿ ಹೆಚ್ಚು ಆನೆಗಳೂ ಇರುವುದು ಬಂಡಿಪುರದಲ್ಲೇ!

ಸ್ಥಳೀಯರ ಪ್ರಕಾರ, ಗರ್ಭಿಣಿ ಆನೆಯೊಂದು ಚಪ್ರಮರಿ ಮೀಸಲು ಅರಣ್ಯದೊಳಗೆ ಹೋಗಲು ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ, ಪ್ರತಿದಿನ ಈ ರೈಲು ಮಾರ್ಗದಲ್ಲೇ ಆನೆಗಳು ಹಾದುಹೋಗುತ್ತದೆ. ವರದಿಗಳ ಪ್ರಕಾರ ಇಂದು ಮುಂಜಾನೆ ಅಲಿಪುರ್‌ದೌರ್‌ನಿಂದ ಸಿಲಿಗುರಿಗೆ ಹೊರಟಿದ್ದ ಡಾಲಮೈಟ್ ತುಂಬಿದ ಗೂಡ್ಸ್ ರೈಲು ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದು ಆನೆ ಸ್ಥಳದಲ್ಲಿ ಮೃತಪಟ್ಟಿದೆ ಎಂದು ಹೇಳಿದೆ.

ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದು. ಮರಣೋತ್ತರ ಪರೀಕ್ಷೆಯ ನಂತರ ತಾಯಿ ಮತ್ತು ಆನೆಯ ಭ್ರೂಣವನ್ನು ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ದೇಶದ ಆನೆಗಳ ಜನಸಂಖ್ಯೆಯ ಸುಮಾರು 2% ನಷ್ಟು ನೆಲೆಯಾಗಿರುವ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?