AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಸಮಯದಲ್ಲಿ ಅನಾಥರಾದ ಮಕ್ಕಳ ಸಂಖ್ಯೆಯನ್ನು ನಾವು ನಂಬಲು ಸಿದ್ಧರಿಲ್ಲ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

Supreme Court: "ನೀವು (ಬಂಗಾಳ ಸರ್ಕಾರದ ವಕೀಲರು) ಕೇವಲ 27 ಮಕ್ಕಳನ್ನು ಮಾತ್ರ ಅನಾಥರು ಎಂದು ಹೇಳುತ್ತಿದ್ದರೆ ನಾವು ಹೇಳಿಕೆಯನ್ನು ದಾಖಲಿಸುತ್ತೇವೆ (ಆದರೆ) ಬಂಗಾಳ ದೊಡ್ಡ ರಾಜ್ಯ ... ಈ ಅಂಕಿ ಅಂಶವನ್ನು ನಂಬಲು ನಾವು ಸಿದ್ಧರಿಲ್ಲ" ಎಂದು ನ್ಯಾಯಾಲಯ ಹೇಳಿದೆ.

ಲಾಕ್‌ಡೌನ್ ಸಮಯದಲ್ಲಿ ಅನಾಥರಾದ ಮಕ್ಕಳ ಸಂಖ್ಯೆಯನ್ನು ನಾವು ನಂಬಲು ಸಿದ್ಧರಿಲ್ಲ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 27, 2021 | 4:49 PM

Share

ದೆಹಲಿ: ಕೊವಿಡ್ ಲಾಕ್‌ಡೌನ್ ಸಮಯದಲ್ಲಿ ಪೋಷಕರ ನಿಧನದಿಂದಾಗಿ ಅನಾಥರಾದ ಮಕ್ಕಳ ಬಗ್ಗೆ ಬಂಗಾಳ ಸರ್ಕಾರದ ಅಂಕಿಅಂಶಗಳು “ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಅದೇ ವೇಳೆ ಸರಿಯಾದ ಮಾಹಿತಿಯನ್ನು ಒದಗಿಸದಿದ್ದರೆ ತನಿಖೆಗೆ ಆದೇಶಿಸಬಹುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದು ಮಕ್ಕಳ ಕಲ್ಯಾಣ ವಿಷಯವಾಗಿದ್ದು, ಇದನ್ನು ರಾಜಕೀಯ ವಿಷಯವಾಗಿ ನೋಡಬಾರದು ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಇಬ್ಬರು ನ್ಯಾಯಾಧೀಶರ ಪೀಠ ಹೇಳಿದೆ.

ಲಾಕ್‌ಡೌನ್ ಸಮಯದಲ್ಲಿ 27 ಮಕ್ಕಳನ್ನು ಅನಾಥರಾಗಿದ್ದಾರೆ ಎಂದು ಈ ಹಿಂದೆ ಬಂಗಾಳ ಸರ್ಕಾರ ಹೇಳಿತ್ತು. ರಾಜ್ಯದ ಸಾಂಕ್ರಾಮಿಕ ಮತ್ತು ಗಾತ್ರದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ನ್ಯಾಯಾಲಯವು ಇದು ನಂಬಲಸಾಧ್ಯವಾಗಿದೆ ಎಂದಿದೆ.

“ನೀವು (ಬಂಗಾಳ ಸರ್ಕಾರದ ವಕೀಲರು) ಕೇವಲ 27 ಮಕ್ಕಳನ್ನು ಮಾತ್ರ ಅನಾಥರು ಎಂದು ಹೇಳುತ್ತಿದ್ದರೆ ನಾವು ಹೇಳಿಕೆಯನ್ನು ದಾಖಲಿಸುತ್ತೇವೆ (ಆದರೆ) ಬಂಗಾಳ ದೊಡ್ಡ ರಾಜ್ಯ … ಈ ಅಂಕಿ ಅಂಶವನ್ನು ನಂಬಲು ನಾವು ಸಿದ್ಧರಿಲ್ಲ” ಎಂದು ನ್ಯಾಯಾಲಯ ಹೇಳಿದೆ.  ಈ ಡೇಟಾವನ್ನು ಸಂಗ್ರಹ “ನಡೆಯುತ್ತಿರುವ” ಪ್ರಕ್ರಿಯೆ ಎಂದು ರಾಜ್ಯದ ವಕೀಲರು ಹೇಳಿದ್ದಾರೆ.

ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಬೇಡಿ ಮತ್ತು ಸಬೂಬು ಕೊಡಬೇಡಿ. ಪರಿಸ್ಥಿತಿಯ ತುರ್ತುನ್ನು ಅರ್ಥಮಾಡಿಕೊಳ್ಳಿ. ಅನಾಥರು ತಮ್ಮನ್ನು ತಾವೇ ರಕ್ಷಿಸಿಕೊಳ್ಳುವಲ್ಲಿ ಉಳಿದಿದ್ದಾರೆ. ಅವರನ್ನು ರಕ್ಷಿಸಬೇಕಾದವರು ನೀವು, ನಾವಲ್ಲ. ಮಕ್ಕಳಿಗೆ ಅವರ ಹಕ್ಕು ಸಿಗಬೇಕೆಂದು ನಾವು ಖಾತ್ರಿ ಎಂದು ನ್ಯಾಯಮೂರ್ತಿ ರಾವ್ ಹೇಳಿದ್ದಾರೆ.

“ಅಂತಹ ನಿಲುವನ್ನು ತೆಗೆದುಕೊಳ್ಳಬೇಡಿ. ಇದು ರಾಜಕೀಯ ವಿಷಯವಲ್ಲ, ಇದು ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದೆ.” ಎಂದು ಹೇಳಿದ ನ್ಯಾಯಾಲಯವು ಸಂಬಂಧಪಟ್ಟ ಸರ್ಕಾರಿ ಇಲಾಖೆಯ ಕಾರ್ಯದರ್ಶಿಗೆ ಅಫಿಡವಿಟ್ ಸಲ್ಲಿಸುವಂತೆ ಕೇಳಿಕೊಂಡಿತು.

ಇದನ್ನೂ ಓದಿ:ಯಡಿಯೂರಪ್ಪಗೆ ವಯಸ್ಸು 75 ವರ್ಷ: ಅವರಿಗೆ ಈಗ ಮದುವೆ ಮಾಡಿದ್ರೂ ಎರಡು ಮಕ್ಕಳಾಗುತ್ತದೆ- ಕಾಂಗ್ರೆಸ್ ಎಂಎಲ್​ಸಿ ಸಿ.ಎಂ. ಇಬ್ರಾಹಿಂ 

ಇದನ್ನೂ ಓದಿ: ‘ಅವರಿಗೆ ಬೇರೆ ಆಯ್ಕೆ ಇಲ್ಲ ಕೊವಿಡ್ ಸಾಂಕ್ರಾಮಿಕದ ನಡುವೆ ಭಿಕ್ಷಾಟನೆ ತಡೆಯುವ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

(West Bengal government data Of Orphaned Children was unacceptable says Supreme Court)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ