AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ಆಗಮನ ವೇಳೆ ವಿಧಾನಸಭೆ ಗೇಟ್ ಬಂದ್, ಪ್ರಜಾಪ್ರಭುತ್ವಕ್ಕೆ ಅವಮಾನ ಎಂದು ಆಕ್ರೋಶ

ದೆಹಲಿ: ಪಶ್ಚಿಮ ಬಂಗಾಳ ಸಿಎಂ‌ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲರ ನಡುವಿನ ಕಾದಾಟ ತಾರಕ್ಕೇರಿದೆ. ವಿಧಾನಸಭೆ ಪ್ರವೇಶಕ್ಕೆ ರಾಜ್ಯಪಾಲರಿಗೆ ಅವಕಾಶ ನಿರಾಕರಿಸಿರುವುದಕ್ಕೆ ರಾಜ್ಯಪಾಲರು ಕೆಂಡಕಾರಿದ್ದಾರೆ. ಇಡೀ ದೇಶದ ರಾಜಕಾರಣಿಗಳ ನಡೆ ಒಂದ್ಕಡೆಯಾದ್ರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯದ್ದೇ ಬೇರೆ ನಡೆ. ಆ ದಿಟ್ಟತನ. ಹಠಮಾರಿತನದಿಂದಲೇ ಸುದ್ದಿಯಾಗಿದ್ದೇ ಹೆಚ್ಚು. ಆದ್ರೀಗ ಅದೇ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ರಾಜ್ಯಪಾಲರೇ ಕೆಂಡಾಮಂಡಲವಾಗಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಗೆ ತಾವು ಆಗಮಿಸಿದಾಗ ಗೇಟ್ ಮುಚ್ಚಿರುವುದನ್ನು ಕಂಡು ರಾಜ್ಯಪಾಲ ಜಗದೀಶ್ ಧನ್ಕಾರ್ […]

ರಾಜ್ಯಪಾಲರ ಆಗಮನ ವೇಳೆ ವಿಧಾನಸಭೆ ಗೇಟ್ ಬಂದ್,  ಪ್ರಜಾಪ್ರಭುತ್ವಕ್ಕೆ ಅವಮಾನ ಎಂದು ಆಕ್ರೋಶ
ಸಾಧು ಶ್ರೀನಾಥ್​
|

Updated on:Dec 06, 2019 | 12:28 PM

Share

ದೆಹಲಿ: ಪಶ್ಚಿಮ ಬಂಗಾಳ ಸಿಎಂ‌ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲರ ನಡುವಿನ ಕಾದಾಟ ತಾರಕ್ಕೇರಿದೆ. ವಿಧಾನಸಭೆ ಪ್ರವೇಶಕ್ಕೆ ರಾಜ್ಯಪಾಲರಿಗೆ ಅವಕಾಶ ನಿರಾಕರಿಸಿರುವುದಕ್ಕೆ ರಾಜ್ಯಪಾಲರು ಕೆಂಡಕಾರಿದ್ದಾರೆ.

ಇಡೀ ದೇಶದ ರಾಜಕಾರಣಿಗಳ ನಡೆ ಒಂದ್ಕಡೆಯಾದ್ರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯದ್ದೇ ಬೇರೆ ನಡೆ. ಆ ದಿಟ್ಟತನ. ಹಠಮಾರಿತನದಿಂದಲೇ ಸುದ್ದಿಯಾಗಿದ್ದೇ ಹೆಚ್ಚು. ಆದ್ರೀಗ ಅದೇ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ರಾಜ್ಯಪಾಲರೇ ಕೆಂಡಾಮಂಡಲವಾಗಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ತಾವು ಆಗಮಿಸಿದಾಗ ಗೇಟ್ ಮುಚ್ಚಿರುವುದನ್ನು ಕಂಡು ರಾಜ್ಯಪಾಲ ಜಗದೀಶ್ ಧನ್ಕಾರ್ ಅವರು ಕೆಂಡಾಮಂಡಲವಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಅವಮಾನ: ನಿನ್ನೆ ವಿಧಾನಸಭೆಯ ಐತಿಹಾಸಿಕ ಕಟ್ಟಡವನ್ನು ನೋಡಬೇಕು, ಗ್ರಂಥಾಲಯಕ್ಕೆ ಭೇಟಿ ನೀಡಬೇಕು ಅಂತಾ ರಾಜ್ಯಪಾಲ ಜಗದೀಶ್ ದನ್ಕರ್ ಆಗಮಿಸಿದ್ದಾರೆ. ಆದ್ರೆ ಅವರು ಬಂದಾಗ ವಿಧಾನಸಭೆ ಬಾಗಿಲು ಮುಚ್ಚಿರುವುದು ರಾಜ್ಯಪಾಲರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸಭೆ ಅಧಿವೇಶನ ನಡೆಯುವಾಗ ಮಾತ್ರವಲ್ಲದೆ ವರ್ಷಪೂರ್ತಿ ತೆರೆದಿರಬೇಕು.

ಆದರೆ ನಾನು ಬರುವುದು ಗೊತ್ತಿದ್ದರೂ ಬಂದ್ ಮಾಡಲಾಗಿದೆ. ಹೀಗೆ ಮಾಡುವುದ್ರಿಂದ ನನಗೆ ಅವಮಾನವಾಗುತ್ತಿಲ್ಲ. ಬದಲಿಗೆ ಪ್ರಜಾಪ್ರಭುತ್ವವನ್ನು ಅವಮಾನಿಸಲಾಗುತ್ತಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ರೆ ಅಸಲಿಗೆ ಎರಡು ದಿನ ವಿಧಾನಸಭೆ ಮುಂದೂಡಲಾಗಿತ್ತು. ಬುಧವಾರ ಮತ್ತು ಗುರುವಾರ ವಿಧಾನಸಭೆ ಮುಂದೂಡಲಾಗಿದ್ದು. ವಿಧಾನಸಭೆ ಅಧಿವೇಶನ ಮುಂದೂಡಿಕೆ ಅಂದರೆ ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ಮುಚ್ಚಲಾಗಿತ್ತು ಈ ಸಮಯದಲ್ಲಿ ವಿಧಾನಸಭೆ ವೀಕ್ಷಣೆಮಾಡಲು ಹೋದ ರಾಜ್ಯಪಾಲರಿಗೆ ಗೇಟ್ ಬಂದ್ ಮಾಡಲಾಗಿತ್ತು. ಇದೇ ವಿಚಾರವಾಗಿ ರಾಜ್ಯಪಾಲರು ಕೆಂಡಕಾರಿದ್ದಾರೆ.

ವಿಧಾನ ಸಭೆಯನ್ನು ಎರಡುದಿನಗಳ ಕಾಲ ಮದೂಡಿರುವುದಕ್ಕೆ ಕಾರಣ ನೀಡಿರುವ ಪಶ್ಚಿಮ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ, ಸದನದಲ್ಲಿ ಕೆಲವು ಮಸೂದೆಗಳನ್ನು ಮಂಡಿಸಲು ಸಮಯ ನಿಗದಿಪಡಿಸಿದ್ದೇವೆ ಮತ್ತು ಅವುಗಳ ಮಂಡನೆಗೂ ಮುನ್ನ ಅವುಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿದ್ದೇವೆ. ಮಸೂದೆಗಳು ಮುದ್ರಣಕ್ಕೂ ಕಳುಹಿಸಲಾಗಿತ್ತು. ಆದರೆ, ಅವರು ಅನುಮೋದನೆಗೆ ಅವುಗಳನ್ನು ಸ್ವೀಕರಿಸಿರಲಿಲ್ಲ. ಹೀಗಾಗಿ ಎರಡು ದಿನಗಳ ಮಟ್ಟಿಗೆ ವಿಧಾನಸಭೆಯನ್ನು ಮುಂದೂಡಿಕೆ ಮಾಡಲಾಯಿತು ಅಂತಾ ಹೇಳಿದ್ದಾರೆ.

ಆದ್ರೆ ಮೇಲ್ನೋಟಕ್ಕೆ ರಾಜ್ಯಪಾಲರು ಕೇಬಲ ವಿಧಾನಸಭೆ ಗೇಟ್ ಬಂದಾಗಿರುವ ವಿಚಾರಕ್ಕೆ‌ಸಿಟ್ಟಾಗಿಲ್ಲ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವಮಾನ ಮಾಡೋದೊಕ್ಕಾಗಿಯೇ ಈ ರೀತಿ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ಆರೋಪ‌ ಮಾಡಿದ್ದಾರೆ.

Published On - 8:01 am, Fri, 6 December 19

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ