AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ರಾಜ್ಯಪಾಲ ಧನ್ಕರ್ ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧದಂತೆ ಬಿಂಬಿಸುತ್ತಿದ್ದಾರೆ: ಟಿಎಂಸಿ

Jagdeep Dhankhar: ರಾಜ್ಯಪಾಲರು ಬಿಜೆಪಿಯ ವಕ್ತಾರರಂತೆ ರಾಜ್ಯ ಸರ್ಕಾರದ ವಿರುದ್ಧ ವಿಷಕಾರಿ ಮತ್ತು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ. ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಲ್ಲಿ ನಡೆಯುತ್ತಿರುವಂತೆ ಬಂಗಾಳದಲ್ಲಿ ಯುದ್ಧ ನಡೆಯುತ್ತಿದೆ ಎಂದು ತೋರಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಟಿಎಂಸಿ ಆರೋಪ.

ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ರಾಜ್ಯಪಾಲ ಧನ್ಕರ್ ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧದಂತೆ ಬಿಂಬಿಸುತ್ತಿದ್ದಾರೆ: ಟಿಎಂಸಿ
ಜಗದೀಪ್ ಧನ್ಕರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 16, 2021 | 11:32 AM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ರಾಜ್ಯದಲ್ಲಿ ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವಿನ ಯುದ್ಧ ನಡೆಯುತ್ತಿದೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಹೇಳಿದೆ. ಟಿಎಂಸಿ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರಾಯ್ ಅವರು ರಾಜ್ಯಪಾಲರು “ಅಭೂತಪೂರ್ವ ರೀತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿದಿನವೂ ದೂಷಣೆ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು. ರಾಜ್ಯಪಾಲರು ಬಿಜೆಪಿಯ ವಕ್ತಾರರಂತೆ ರಾಜ್ಯ ಸರ್ಕಾರದ ವಿರುದ್ಧ ವಿಷಕಾರಿ ಮತ್ತು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ. ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಲ್ಲಿ ನಡೆಯುತ್ತಿರುವಂತೆ ಬಂಗಾಳದಲ್ಲಿ ಯುದ್ಧ ನಡೆಯುತ್ತಿದೆ ಎಂದು ತೋರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಇದು ನಿರ್ದಿಷ್ಟ ಯೋಜನೆಯ ಭಾಗವಾಗಿದೆ ಎಂದು ಹೇಳಿದ ಟಿಎಂಸಿ ಸಂಸದರು ರಾಜ್ಯಪಾಲರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಚಿತ್ರಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಕಾರಣ ಕೇಂದ್ರದ ಬಿಜೆಪಿ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ “ಪಿತೂರಿ ನಡೆಸುತ್ತಿದೆ” ಎಂದು ಟಿಎಂಸಿ ವಕ್ತಾರರು ಆರೋಪಿಸಿದ್ದಾರೆ.

ಮಂಗಳವಾರ ರಾಷ್ಟ್ರ ರಾಜಧಾನಿಗೆ ತೆರಳಿ ಶುಕ್ರವಾರ ಮರಳಲಿದ್ದಾರೆ ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದರು. ಆದರೆ ಅವರು ನವದೆಹಲಿ ಭೇಟಿಗೆ ಕಾರಣಗಳನ್ನು ನಿರ್ದಿಷ್ಟಪಡಿಸಿರಲಿಲ್ಲ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಸೋಮವಾರ ಹಲವಾರು ಬಿಜೆಪಿ ಶಾಸಕರ ನಿಯೋಗವನ್ನು ರಾಜ್ಯಪಾಲರ ನೇತೃತ್ವದಲ್ಲಿ ಕರೆದೊಯ್ದರು. ಅವರ ಕಾನೂನುಬಾಹಿರ ಮತ್ತು ಪೊಲೀಸರ “ಪಕ್ಷಪಾತದ ನಿಲುವು” ಕುರಿತು ಮಧ್ಯಪ್ರವೇಶಿಸಲು ಸಭೆ ನಡೆಸಿದರು. ಸಭೆಯ ನಂತರ ಧನ್ಕರ್ ಅವರು ಸುವೇಂದು ಅಧಿಕಾರಿಯನ್ನು ಭೇಟಿಯಾಗಿ ರಾಜ್ಯದಲ್ಲಿ ಆತಂಕಕಾರಿಯಾದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಹೇಳಿದ್ದಾರೆ.

ಜುಲೈ 2019 ರಲ್ಲಿ ರಾಜ್ಯಪಾಲರ ಕಚೇರಿಯನ್ನು ವಹಿಸಿಕೊಂಡಾಗಿನಿಂದ ಧನ್ಕರ್ ಮತ್ತು ತೃಣಮೂಲ ಸರ್ಕಾರ ಹಲವಾರು ವಿಷಯಗಳ ಕುರಿತು ವಾಗ್ದಾಳಿ ನಡೆಸುತ್ತಲೇ ಇದೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಮಂಗಳವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ನಡೆದ ಮತದಾನದ ನಂತರದ ಹಿಂಸಾಚಾರದ ಬಗ್ಗೆ ಅವರು ಮೌನವಾಗಿದ್ದಾರೆ ಮತ್ತು ಸಂತ್ರಸ್ತ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನಾಲ್ಕು ದಿನಗಳ ಭೇಟಿಯಲ್ಲಿ ದೆಹಲಿಗೆ ತೆರಳುವ ಕೆಲವೇ ಗಂಟೆಗಳ ಮೊದಲು, ರಾಜ್ಯಪಾಲರು ಮುಖ್ಯಮಂತ್ರಿಯೊಂದಿಗೆ ಈ ವಿಷಯಗಳ ಬಗ್ಗೆ ಶೀಘ್ರವಾಗಿ ಸಂವಾದ ಕೋರಿ ಬರೆದಿದ್ದಾರೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ರಕ್ತಪಾತ, ಮಾನವ ಹಕ್ಕುಗಳ ಉಲ್ಲಂಘನೆ, ಮಹಿಳೆಯರ ಘನತೆಯ ಮೇಲೆ ಅತಿರೇಕದ ಹಲ್ಲೆ, ಆಸ್ತಿಯನ್ನು ನಾಶಮಾಡುವುದು, ರಾಜಕೀಯ ವಿರೋಧಿಗಳ ಮೇಲೆ ದಾಳಿ ಇವು ಕೆಟ್ಟದು ಮತ್ತು ಇದು ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದಾಗಿದೆ ಎಂದು ನಿಮ್ಮ ನಿರಂತರ ಮೌನ ಮತ್ತು ನಿಷ್ಕ್ರಿಯತೆಯನ್ನು ಗಮನಿಸಲು ನಾನು ನಿರ್ಬಂಧಿತನಾಗಿದ್ದೇನೆ ಎಂದು ಧನ್ಕರ್ ಹೇಳಿದ್ದಾರೆ. ಈ ಪತ್ರವವನ್ನು ಅವರು ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ. ನಿಮ್ಮ ಮೌನ, ಜೊತೆಗೆ ಜನರ ದುಃಖವನ್ನು ನಿವಾರಿಸಲು ಪುನರ್ವಸತಿ ಮತ್ತು ಪರಿಹಾರದಲ್ಲಿ ತೊಡಗಿಸಿಕೊಳ್ಳಲು ಯಾವುದೇ ಕ್ರಮಗಳಿಲ್ಲದಿರುವುದು ನೋಡಿದರೆ ಇದೆಲ್ಲವೂ ರಾಜ್ಯದಿಂದ ಪ್ರೇರಿತ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ ಎಂದು ಧನ್ಕರ್ ಆರೋಪಿಸಿದ್ದಾರೆ.

ಇದನ್ನೂ ಓದಿ:  ಪಶ್ಚಿಮ ಬಂಗಾಳದ ಮುಂದಿನ ವಿಧಾನಸಭಾ ಚುನಾವಣೆವರೆಗೆ ಟಿಎಂಸಿ ಜತೆ ಇರಲಿದ್ದಾರೆ ಪ್ರಶಾಂತ್ ಕಿಶೋರ್

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್