75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​

Tricolour Flag: 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​
ಜಗದೀಪ್ ಧನ್ಕರ್​
Follow us
| Updated By: Lakshmi Hegde

Updated on: Aug 14, 2021 | 5:22 PM

ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ನಿಮಿತ್ತ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​ ಅವರು 7500 ಚದರ್​ ಅಡಿಯಷ್ಟು ವಿಶಾಲವಾದ ರಾಷ್ಟ್ರಧ್ವಜವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಕೊಲ್ಕತ್ತದ ವಿಕ್ಟೋರಿಯಾ ಮೆಮೋರಿಯಲ್ ಹಾಲ್​​ನಲ್ಲಿ, ಕೋಲ್ಕತ್ತ, ಭಾರತೀಯ ಪ್ರವಾಸೋದ್ಯಮ ಮತ್ತು ಡಾರ್ಜಲಿಂಗ್​​ನ ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಸಹಯೋಗದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ, ಈ ವಿಶಾಲವಾದ ರಾಷ್ಟ್ರಧ್ವಜವನ್ನು ರಾಜ್ಯಪಾಲರು ಅರ್ಪಿಸಲಿದ್ದು, ನಂತರ ಅದನ್ನು ವಿಕ್ಟೋರಿಯಾ ಸ್ಮಾರಕದ ಮೇಲೆ ಹೊದಿಸಲಾಗುವುದು ಎಂದು ವರದಿಯಾಗಿದೆ.

ಈ ಬಾರಿ ದೇಶದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಅದರ ಸವಿನೆನಪಿಗಾಗಿ ಸ್ಮಾರಕದ ಆವರಣದಲ್ಲಿ 750 ಸಸಿಗಳನ್ನು ನೆಡಲಾಗುವುದು. ಕಾರ್ಯಕ್ರಮದಲ್ಲಿ ಧನ್ಕರ್​ ಅವರಿಗೆ ಸಿಐಎಸ್​ಎಫ್​ ಪಡೆಯಿಂದ ಗೌರವ ವಂದನೆ ಸಲ್ಲಿಸಲಾಗುವುದು. ಅದಾದ ಬಳಿಕ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರಗೀತೆ ಹಾಡಲಾಗುತ್ತದೆ.

ಇದೀಗ ಧನ್​ಕರ್​ ಅವರು ರಾಷ್ಟ್ರಕ್ಕೆ ಅರ್ಪಿಸುತ್ತಿರುವ 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ. ಅದಾದ ನಂತರ ಧ್ವಜ ಡಾರ್ಜಲಿಂಗ್​​ನಲ್ಲಿ ಹಾರಿಸಲಾಗಿದೆ. ಇದೀಗ ಕೊಲ್ಕತ್ತಕ್ಕೆ ತರಲಾಗಿದ್ದು, ಇಲ್ಲಿ ಸ್ವಾತಂತ್ರ್ಯೋತ್ಸವದಂದು ರಾಜ್ಯಪಾಲರು ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿದ್ದಾರೆ.

ಇದನ್ನೂ ಓದಿ: ಸಹೋದರಿ ಉಷಾ ಅವರ ಪರಿಸ್ಥಿತಿಯನ್ನು ವಿವರಿಸುತ್ತಾ ಕಣ್ಣೀರು ಹಾಕಿದ ವಿಜಯಲಕ್ಷ್ಮಿ

‘ಲವ್​ ಯೂ ರಚ್ಚು’ ಫೈಟರ್​ ವಿವೇಕ್​ ಸಾವಿಗೆ ಅಸಲಿ ಕಾರಣ ಏನು? ಪ್ರತ್ಯಕ್ಷದರ್ಶಿ ರಂಜಿತ್​ ತೆರೆದಿಟ್ಟ ಸತ್ಯ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು