AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​

Tricolour Flag: 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​
ಜಗದೀಪ್ ಧನ್ಕರ್​
TV9 Web
| Edited By: |

Updated on: Aug 14, 2021 | 5:22 PM

Share

ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ನಿಮಿತ್ತ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​ ಅವರು 7500 ಚದರ್​ ಅಡಿಯಷ್ಟು ವಿಶಾಲವಾದ ರಾಷ್ಟ್ರಧ್ವಜವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಕೊಲ್ಕತ್ತದ ವಿಕ್ಟೋರಿಯಾ ಮೆಮೋರಿಯಲ್ ಹಾಲ್​​ನಲ್ಲಿ, ಕೋಲ್ಕತ್ತ, ಭಾರತೀಯ ಪ್ರವಾಸೋದ್ಯಮ ಮತ್ತು ಡಾರ್ಜಲಿಂಗ್​​ನ ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಸಹಯೋಗದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ, ಈ ವಿಶಾಲವಾದ ರಾಷ್ಟ್ರಧ್ವಜವನ್ನು ರಾಜ್ಯಪಾಲರು ಅರ್ಪಿಸಲಿದ್ದು, ನಂತರ ಅದನ್ನು ವಿಕ್ಟೋರಿಯಾ ಸ್ಮಾರಕದ ಮೇಲೆ ಹೊದಿಸಲಾಗುವುದು ಎಂದು ವರದಿಯಾಗಿದೆ.

ಈ ಬಾರಿ ದೇಶದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಅದರ ಸವಿನೆನಪಿಗಾಗಿ ಸ್ಮಾರಕದ ಆವರಣದಲ್ಲಿ 750 ಸಸಿಗಳನ್ನು ನೆಡಲಾಗುವುದು. ಕಾರ್ಯಕ್ರಮದಲ್ಲಿ ಧನ್ಕರ್​ ಅವರಿಗೆ ಸಿಐಎಸ್​ಎಫ್​ ಪಡೆಯಿಂದ ಗೌರವ ವಂದನೆ ಸಲ್ಲಿಸಲಾಗುವುದು. ಅದಾದ ಬಳಿಕ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರಗೀತೆ ಹಾಡಲಾಗುತ್ತದೆ.

ಇದೀಗ ಧನ್​ಕರ್​ ಅವರು ರಾಷ್ಟ್ರಕ್ಕೆ ಅರ್ಪಿಸುತ್ತಿರುವ 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ. ಅದಾದ ನಂತರ ಧ್ವಜ ಡಾರ್ಜಲಿಂಗ್​​ನಲ್ಲಿ ಹಾರಿಸಲಾಗಿದೆ. ಇದೀಗ ಕೊಲ್ಕತ್ತಕ್ಕೆ ತರಲಾಗಿದ್ದು, ಇಲ್ಲಿ ಸ್ವಾತಂತ್ರ್ಯೋತ್ಸವದಂದು ರಾಜ್ಯಪಾಲರು ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿದ್ದಾರೆ.

ಇದನ್ನೂ ಓದಿ: ಸಹೋದರಿ ಉಷಾ ಅವರ ಪರಿಸ್ಥಿತಿಯನ್ನು ವಿವರಿಸುತ್ತಾ ಕಣ್ಣೀರು ಹಾಕಿದ ವಿಜಯಲಕ್ಷ್ಮಿ

‘ಲವ್​ ಯೂ ರಚ್ಚು’ ಫೈಟರ್​ ವಿವೇಕ್​ ಸಾವಿಗೆ ಅಸಲಿ ಕಾರಣ ಏನು? ಪ್ರತ್ಯಕ್ಷದರ್ಶಿ ರಂಜಿತ್​ ತೆರೆದಿಟ್ಟ ಸತ್ಯ

Follow Us
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!