AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಸಚಿವ ಸಾಧನ್​ ಪಾಂಡೆ ನಿಧನ; ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ

ಸಾಧನ್​ ಪಾಂಡೆಯವರು ಪಶ್ಚಿಮ ಬಂಗಾಳದಲ್ಲಿ ಗ್ರಾಹಕ ವ್ಯವಹಾರಗಳು ಮತ್ತು ಸ್ವ-ಸಹಾಯ ಗುಂಪು ಮತ್ತು ಸ್ವ-ಉದ್ಯೋಗ ಇಲಾಖೆ ಸಚಿವರಾಗಿದ್ದರು. 1998ರವರೆಗೆ ಕಾಂಗ್ರೆಸ್​​ನಲ್ಲಿದ್ದ ಸಾಧನ್​ ಪಾಂಡೆ 1998ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.

ಪಶ್ಚಿಮ ಬಂಗಾಳ ಸಚಿವ ಸಾಧನ್​ ಪಾಂಡೆ ನಿಧನ; ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ
ಸಾಧನ್​ ಪಾಂಡೆ
TV9 Web
| Edited By: |

Updated on:Feb 20, 2022 | 1:22 PM

Share

ಪಶ್ಚಿಮ ಬಂಗಾಳ ಸಚಿವ, ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಸಾಧನ್​ ಪಾಂಡೆ (Sadhan Pande) ಇಂದು ಮುಂಜಾನೆ ಮುಂಬೈನಲ್ಲಿ ನಿಧನರಾದರು.  ಅವರಿಗೆ 71 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಸಾಧನೆ ಪಾಂಡೆ ನಿಧನಕ್ಕೆ (Sadhan Pande Died) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕರು, ಸಚಿವರಾಗಿದ್ದ ಸಾಧನ್​ ಪಾಂಡೆ ಇಂದು ಮುಂಜಾನೆ ನಿಧನರಾದರು. ಅವರ ನಿಧನದಿಂದ ತುಂಬ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು, ಅನುಯಾಯಿಗಳಿಗೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಸಾಧನ್​ ಪಾಂಡೆಯವರು ಪಶ್ಚಿಮ ಬಂಗಾಳದಲ್ಲಿ ಗ್ರಾಹಕ ವ್ಯವಹಾರಗಳು ಮತ್ತು ಸ್ವ-ಸಹಾಯ ಗುಂಪು ಮತ್ತು ಸ್ವ-ಉದ್ಯೋಗ ಇಲಾಖೆ ಸಚಿವರಾಗಿದ್ದರು. 1998ರವರೆಗೆ ಕಾಂಗ್ರೆಸ್​​ನಲ್ಲಿದ್ದ ಸಾಧನ್​ ಪಾಂಡೆ 1998ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.  ಕಳೆದವರ್ಷ ಜುಲೈನಲ್ಲಿಯೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಮುಂಬೈಗೆ ಉತ್ತಮ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿತ್ತು.

ಇದನ್ನೂ ಓದಿ: ಪಂಜಾಬ್: ಸಂಯೋಜಿತ ಅವಳಿಗಳ ಮತದಾನದ ಗೌಪ್ಯತೆ ಖಚಿತಪಡಿಸಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗ

Published On - 12:44 pm, Sun, 20 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ