AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಸಚಿವ ಸಾಧನ್​ ಪಾಂಡೆ ನಿಧನ; ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ

ಸಾಧನ್​ ಪಾಂಡೆಯವರು ಪಶ್ಚಿಮ ಬಂಗಾಳದಲ್ಲಿ ಗ್ರಾಹಕ ವ್ಯವಹಾರಗಳು ಮತ್ತು ಸ್ವ-ಸಹಾಯ ಗುಂಪು ಮತ್ತು ಸ್ವ-ಉದ್ಯೋಗ ಇಲಾಖೆ ಸಚಿವರಾಗಿದ್ದರು. 1998ರವರೆಗೆ ಕಾಂಗ್ರೆಸ್​​ನಲ್ಲಿದ್ದ ಸಾಧನ್​ ಪಾಂಡೆ 1998ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.

ಪಶ್ಚಿಮ ಬಂಗಾಳ ಸಚಿವ ಸಾಧನ್​ ಪಾಂಡೆ ನಿಧನ; ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ
ಸಾಧನ್​ ಪಾಂಡೆ
TV9 Web
| Edited By: |

Updated on:Feb 20, 2022 | 1:22 PM

Share

ಪಶ್ಚಿಮ ಬಂಗಾಳ ಸಚಿವ, ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಸಾಧನ್​ ಪಾಂಡೆ (Sadhan Pande) ಇಂದು ಮುಂಜಾನೆ ಮುಂಬೈನಲ್ಲಿ ನಿಧನರಾದರು.  ಅವರಿಗೆ 71 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಸಾಧನೆ ಪಾಂಡೆ ನಿಧನಕ್ಕೆ (Sadhan Pande Died) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕರು, ಸಚಿವರಾಗಿದ್ದ ಸಾಧನ್​ ಪಾಂಡೆ ಇಂದು ಮುಂಜಾನೆ ನಿಧನರಾದರು. ಅವರ ನಿಧನದಿಂದ ತುಂಬ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು, ಅನುಯಾಯಿಗಳಿಗೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಸಾಧನ್​ ಪಾಂಡೆಯವರು ಪಶ್ಚಿಮ ಬಂಗಾಳದಲ್ಲಿ ಗ್ರಾಹಕ ವ್ಯವಹಾರಗಳು ಮತ್ತು ಸ್ವ-ಸಹಾಯ ಗುಂಪು ಮತ್ತು ಸ್ವ-ಉದ್ಯೋಗ ಇಲಾಖೆ ಸಚಿವರಾಗಿದ್ದರು. 1998ರವರೆಗೆ ಕಾಂಗ್ರೆಸ್​​ನಲ್ಲಿದ್ದ ಸಾಧನ್​ ಪಾಂಡೆ 1998ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.  ಕಳೆದವರ್ಷ ಜುಲೈನಲ್ಲಿಯೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಮುಂಬೈಗೆ ಉತ್ತಮ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿತ್ತು.

ಇದನ್ನೂ ಓದಿ: ಪಂಜಾಬ್: ಸಂಯೋಜಿತ ಅವಳಿಗಳ ಮತದಾನದ ಗೌಪ್ಯತೆ ಖಚಿತಪಡಿಸಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗ

Published On - 12:44 pm, Sun, 20 February 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!