AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು

ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪಶ್ಚಿಮ ಬಂಗಾಳದಲ್ಲಿ 2022ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ತನಿಖಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು
ಅಕ್ಷಯ್​ ಪಲ್ಲಮಜಲು​​
|

Updated on:Apr 06, 2024 | 12:35 PM

Share

ಭೂಪತಿನಗರ, ಎ.6: ಪಶ್ಚಿಮ ಬಂಗಾಳದ (West Bengal) ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಂದು (ಎ.06) ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮೇಲೆ 2022ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ದಾಳಿಯನ್ನು ನಡೆಸಿತ್ತು. ಈ ವೇಳೆ ಕಿಡಿಗೇಡಿಗಳು ಎನ್‌ಐಎ ತಂಡದ ಕಾರಿನ ಮೇಲೆ ಇಟ್ಟಿಗೆಗಳನ್ನು ಎಸೆದು ವಿಂಡ್‌ಸ್ಕ್ರೀನ್‌ಗೆ ಹಾನಿ ಮಾಡಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನಕ್ಕೆ ಪ್ರತಿಭಟನೆ ನಡೆಸಿ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಈ ಘಟನೆಯಿಂದ ಎನ್‌ಐಎ ತಂಡದ ಅಧಿಕಾರಿಗೊಬ್ಬರಿಗೆ ಗಾಯ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಡಿಸೆಂಬರ್ 3, 2022 ರಂದು, ಭೂಪತಿನಗರದಲ್ಲಿ ಹುಲ್ಲಿನ ಮೇಲ್ಛಾವಣಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ಕಳೆದ ತಿಂಗಳು ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಎಂಟು ತೃಣಮೂಲ ಕಾಂಗ್ರೆಸ್ ನಾಯಕರನ್ನು ವಿಚಾರಣೆಗೆ ಕರೆಸಿತ್ತು. ಎನ್‌ಐಎ ದಾಳಿಯನ್ನು ಬಿಜೆಪಿ ವ್ಯಕ್ತಿಗಳು ಮಾಡಿದ್ದರೆ ಎಂದು ಟಿಎಂಸಿ ಆರೋಪಿಸಿತ್ತು.

ಇದನ್ನೂ ಓದಿ: ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

ಮಾರ್ಚ್ 28 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರಿಗೆ ನೋಟಿಸ್​​​ ನೀಡಿತ್ತು. ಇದಕ್ಕೆ ಉತ್ತರ ನೀಡದ ಕಾರಣ ಇಂದು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆಯೂ ಪಶ್ಚಿಮ ಬಂಗಾಳದಲ್ಲಿ ಎನ್​​​ಐಎ ಕಾರಿನ ಮೇಲೆ ನಡೆಸಿದರು. ಇದೀಗ ಮತ್ತೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Sat, 6 April 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್